<p>ಬೆಳಗಾವಿ: ಪಂಚ ಸೌಲಭ್ಯ ಯೋಜನೆಯಡಿ ಶಾಲೆಗಳಿಗೆ ಈವರೆಗೆ ಕಲ್ಪಿಸಲಾದ ಕುಡಿಯುವ ನೀರಿನ ಸೌಲಭ್ಯ, ಕೊಠಡಿ, ಪೀಠೋಪಕರಣ, ಕಂಪೌಂಡ್ ಹಾಗೂ ಶೌಚಾಲಯ ನಿರ್ಮಾಣದ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಈರಣ್ಣ ಕಡಾಡಿ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ 2011ರ ಡಿಸೆಂಬರ್ ಅಂತ್ಯದವರೆಗಿನ ಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> `ಅಧಿಕಾರಿಗಳು ನೀಡಿದ ಮಾಹಿತಿಯ ಆಧಾರದ ಮೇಲೆ ಆಯಾ ಶಾಲೆಗಳಲ್ಲಿ ಕಲ್ಪಿಸಿದ ಸೌಲಭ್ಯಗಳನ್ನು ಪರಿಶೀಲಿಸಲಾಗುವುದು. ಅಧಿಕಾರಿಗಳು ಈ ಸಂಬಂಧ ಯಾವುದೇ ರೀತಿಯ ತಪ್ಪು ಮಾಹಿತಿ ಒದಗಿಸಿದಲ್ಲಿ ಆಯಾ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು~ ಎಂದು ಅವರು ಎಚ್ಚರಿಸಿದರು.<br /> <br /> `ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯಲ್ಲಿರುವ ಶಾಲೆಗಳ ಆವರಣದಲ್ಲಿ ಸಸಿಗಳನ್ನು ನೆಡಲು ನೀಡಲಾಗಿದ್ದು, ತೋಟಗಾರಿಕೆ ಹಾಗೂ ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಆಯಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಈವರೆಗೆ ಎಷ್ಟು ಶಾಲೆಗಳಲ್ಲಿ ಈ ಸಸಿಗಳು ನಾಟಿಯಾಗಿವೆ ಎಂಬ ಮಾಹಿತಿ ಒದಗಿಸಬೇಕು~ ಎಂದು ಸೂಚಿಸಿದರು.<br /> <br /> `ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಮುದಾಯ ಶೌಚಾಲಯ ಕಾಮಗಾರಿಗಳು ಪ್ರಗತಿಯಲ್ಲಿವೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣ ಆಗುತ್ತಿಲ್ಲ. ಕೂಡಲೇ ಬಗೆಗೆ ಕ್ರಮಕೈಗೊಳ್ಳಬೇಕು. ಜಿಲ್ಲೆಯ ನಾಲ್ಕು ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೊಷಿಸಲಾಗಿದೆ. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು. ಕುಡಿಯುವ ನೀರಿನ ಹಾಗೂ ರಸ್ತೆ ಸೌಲಭ್ಯಗಳಿಗಾಗಿ ಇರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು~ ಎಂದು ಅವರು ಆದೇಶಿಸಿದರು.<br /> <br /> ಜಿಲ್ಲಾ ಪಂಚಾ ಉಪ ಕಾರ್ಯದರ್ಶಿ ಟಿ.ಎಂ. ಶಶಿಧರ ಮಾತನಾಡಿ, `ಸರ್ಕಾರದ ನಿರ್ದೇಶನದ ಅನ್ವಯ ಸುವರ್ಣ ಗ್ರಾಮ ಯೋಜನೆಯಡಿಯ ಅನುದಾನ ಬಳಸಿಕೊಳ್ಳಬೇಕು. ನೆನೆಗುದಿಗೆ ಬಿದ್ದಿರುವ ಅಂಗನವಾಡಿಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು~ ಎಂದು ಸಲಹೆ ಮಾಡಿದರು.<br /> <br /> `ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಈ ವರ್ಷ 202 ಕೋಟಿ ರೂ.ಗಳ ಗುರಿ ಹೊಂದಲಾಗಿದೆ. ಈಗಾಗಲೇ 140 ಕೋಟಿ ರೂ ಖರ್ಚು ಮಾಡಲಾಗಿದೆ. ಗ್ರಾಮ ಸಭೆಗಳ ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿದೆ. ಕುಡಿಯುವ ನೀರು ಪೂರೈಕೆ ಹೆಚ್ಚಿನ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೋರಲಾಗಿದೆ~ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಪಂಚ ಸೌಲಭ್ಯ ಯೋಜನೆಯಡಿ ಶಾಲೆಗಳಿಗೆ ಈವರೆಗೆ ಕಲ್ಪಿಸಲಾದ ಕುಡಿಯುವ ನೀರಿನ ಸೌಲಭ್ಯ, ಕೊಠಡಿ, ಪೀಠೋಪಕರಣ, ಕಂಪೌಂಡ್ ಹಾಗೂ ಶೌಚಾಲಯ ನಿರ್ಮಾಣದ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಈರಣ್ಣ ಕಡಾಡಿ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ 2011ರ ಡಿಸೆಂಬರ್ ಅಂತ್ಯದವರೆಗಿನ ಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> `ಅಧಿಕಾರಿಗಳು ನೀಡಿದ ಮಾಹಿತಿಯ ಆಧಾರದ ಮೇಲೆ ಆಯಾ ಶಾಲೆಗಳಲ್ಲಿ ಕಲ್ಪಿಸಿದ ಸೌಲಭ್ಯಗಳನ್ನು ಪರಿಶೀಲಿಸಲಾಗುವುದು. ಅಧಿಕಾರಿಗಳು ಈ ಸಂಬಂಧ ಯಾವುದೇ ರೀತಿಯ ತಪ್ಪು ಮಾಹಿತಿ ಒದಗಿಸಿದಲ್ಲಿ ಆಯಾ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು~ ಎಂದು ಅವರು ಎಚ್ಚರಿಸಿದರು.<br /> <br /> `ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯಲ್ಲಿರುವ ಶಾಲೆಗಳ ಆವರಣದಲ್ಲಿ ಸಸಿಗಳನ್ನು ನೆಡಲು ನೀಡಲಾಗಿದ್ದು, ತೋಟಗಾರಿಕೆ ಹಾಗೂ ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಆಯಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಈವರೆಗೆ ಎಷ್ಟು ಶಾಲೆಗಳಲ್ಲಿ ಈ ಸಸಿಗಳು ನಾಟಿಯಾಗಿವೆ ಎಂಬ ಮಾಹಿತಿ ಒದಗಿಸಬೇಕು~ ಎಂದು ಸೂಚಿಸಿದರು.<br /> <br /> `ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಮುದಾಯ ಶೌಚಾಲಯ ಕಾಮಗಾರಿಗಳು ಪ್ರಗತಿಯಲ್ಲಿವೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣ ಆಗುತ್ತಿಲ್ಲ. ಕೂಡಲೇ ಬಗೆಗೆ ಕ್ರಮಕೈಗೊಳ್ಳಬೇಕು. ಜಿಲ್ಲೆಯ ನಾಲ್ಕು ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೊಷಿಸಲಾಗಿದೆ. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು. ಕುಡಿಯುವ ನೀರಿನ ಹಾಗೂ ರಸ್ತೆ ಸೌಲಭ್ಯಗಳಿಗಾಗಿ ಇರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು~ ಎಂದು ಅವರು ಆದೇಶಿಸಿದರು.<br /> <br /> ಜಿಲ್ಲಾ ಪಂಚಾ ಉಪ ಕಾರ್ಯದರ್ಶಿ ಟಿ.ಎಂ. ಶಶಿಧರ ಮಾತನಾಡಿ, `ಸರ್ಕಾರದ ನಿರ್ದೇಶನದ ಅನ್ವಯ ಸುವರ್ಣ ಗ್ರಾಮ ಯೋಜನೆಯಡಿಯ ಅನುದಾನ ಬಳಸಿಕೊಳ್ಳಬೇಕು. ನೆನೆಗುದಿಗೆ ಬಿದ್ದಿರುವ ಅಂಗನವಾಡಿಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು~ ಎಂದು ಸಲಹೆ ಮಾಡಿದರು.<br /> <br /> `ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಈ ವರ್ಷ 202 ಕೋಟಿ ರೂ.ಗಳ ಗುರಿ ಹೊಂದಲಾಗಿದೆ. ಈಗಾಗಲೇ 140 ಕೋಟಿ ರೂ ಖರ್ಚು ಮಾಡಲಾಗಿದೆ. ಗ್ರಾಮ ಸಭೆಗಳ ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿದೆ. ಕುಡಿಯುವ ನೀರು ಪೂರೈಕೆ ಹೆಚ್ಚಿನ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೋರಲಾಗಿದೆ~ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>