<p><br /> ತಿರುವನಂತಪುರಂ (ಪಿಟಿಐ): ಇನ್ನೊಂದು ಚುನಾವಣಾ ಯುದ್ಧವನ್ನು ಎದುರಿಸಲು ಪಕ್ಷ ಸೂಚಿಸಿದರೆ, ಕಣಕ್ಕಿಳಿಯಲು ತಾವು ಸಿದ್ಧ ಎಂದು ಕೇರಳ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ಗುರುವಾರ ತಿಳಿಸಿದರು.<br /> <br /> ಈ ಸಲದ ಚುನಾವಣೆಯಲ್ಲಿ ಪ್ರಚಾರದ ನೇತೃತ್ವವನ್ನು ಯಾರು ವಹಿಸಿಕೊಳ್ಳಬೇಕು ಎಂದು ಪಕ್ಷ ನಿರ್ಧರಿಸಲಿದೆ. ಒಂದು ವೇಳೆ ಪಕ್ಷ ಪುನಃ ನಾಯಕತ್ವ ವಹಿಸಿಕೊಳ್ಳುವಂತೆ ಆಹ್ವಾನಿಸಿದರೆ ಅದಕ್ಕೆ ಸಿದ್ಧನಿದ್ದೇನೆ ಎಂದರು.<br /> <br /> ಪಕ್ಷದಿಂದ ಮತ್ತೊಂದು ಕರೆಯನ್ನು ನಿರೀಕ್ಷಿಸುತ್ತಿದ್ದೀರಾ ಎಂದು ಕೇಳಲಾದ ಪ್ರಶ್ನೆಗೆ, ‘ಪಕ್ಷ ತನ್ನ ನಿರ್ಧಾರ ಪ್ರಕಟಿಸಿದ ಬಳಿಕ ನಿಮಗೇ ತಿಳಿಯಲಿದೆ’ ಎಂದು ಪ್ರತಿಕ್ರಿಯಿಸಿದರು.<br /> <br /> 1977ರಿಂದ ಪ್ರತಿ ಚುನಾವಣೆಯಲ್ಲಿಯೂ ಎಲ್ಡಿಎಫ್ ಮತ್ತು ಯುಡಿಎಫ್ ಪಕ್ಷಗಳ ಒಂದರ ನಂತರ ಮತ್ತೊಂದು ಅಧಿಕಾರಕ್ಕೆ ಬರುತ್ತಿದ್ದು, ಇದುವರೆಗೂ ಯಾವ ಪಕ್ಷವೂ ಸತತ ಅವಧಿಗಳಲ್ಲಿ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ ಎಲ್ಡಿಎಫ್ ಪುನಃ ಅಧಿಕಾರಕ್ಕೆ ಬರುವ ಮೂಲಕ ಇತಿಹಾಸ ನಿರ್ಮಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ವಿರೋಧಪಕ್ಷದ ನಾಯಕ ಉಮ್ಮನ್ ಚಾಂಡಿ ತಮ್ಮ ಮತ್ತು ಪುತ್ರ ವಿ.ಎ.ಅರುಣ್ ಕುಮಾರ್ ವಿರುದ್ಧ ಮಾಡಲಾದ ಆರೋಪಗಳ ಪಟ್ಟಿಯನ್ನು ಬುಧವಾರ ತಮಗೆ ಸಲ್ಲಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಇದಕ್ಕೆ ಪ್ರತಿಯಾಗಿ ಶೀಘ್ರವೇ ಪತ್ರ ಬರೆಯುತ್ತೇನೆ. ವಿರೋಧಪಕ್ಷಗಳ ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅಲ್ಲದೆ ಇದಕ್ಕೆ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ ಎಂದರು. <br /> <br /> ‘ಅರುಣ್ ಕುಮಾರ್ ಭಾರತೀಯ ಪ್ರಜೆಯಾಗಿದ್ದು, ತಮ್ಮ ಮೇಲೆ ಮಾಡಲಾಗಿರುವ ಆರೋಪಗಳ ವಿರುದ್ಧ ಕೋರ್ಟ್ಗೆ ಹೋಗಲಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><br /> ತಿರುವನಂತಪುರಂ (ಪಿಟಿಐ): ಇನ್ನೊಂದು ಚುನಾವಣಾ ಯುದ್ಧವನ್ನು ಎದುರಿಸಲು ಪಕ್ಷ ಸೂಚಿಸಿದರೆ, ಕಣಕ್ಕಿಳಿಯಲು ತಾವು ಸಿದ್ಧ ಎಂದು ಕೇರಳ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ಗುರುವಾರ ತಿಳಿಸಿದರು.<br /> <br /> ಈ ಸಲದ ಚುನಾವಣೆಯಲ್ಲಿ ಪ್ರಚಾರದ ನೇತೃತ್ವವನ್ನು ಯಾರು ವಹಿಸಿಕೊಳ್ಳಬೇಕು ಎಂದು ಪಕ್ಷ ನಿರ್ಧರಿಸಲಿದೆ. ಒಂದು ವೇಳೆ ಪಕ್ಷ ಪುನಃ ನಾಯಕತ್ವ ವಹಿಸಿಕೊಳ್ಳುವಂತೆ ಆಹ್ವಾನಿಸಿದರೆ ಅದಕ್ಕೆ ಸಿದ್ಧನಿದ್ದೇನೆ ಎಂದರು.<br /> <br /> ಪಕ್ಷದಿಂದ ಮತ್ತೊಂದು ಕರೆಯನ್ನು ನಿರೀಕ್ಷಿಸುತ್ತಿದ್ದೀರಾ ಎಂದು ಕೇಳಲಾದ ಪ್ರಶ್ನೆಗೆ, ‘ಪಕ್ಷ ತನ್ನ ನಿರ್ಧಾರ ಪ್ರಕಟಿಸಿದ ಬಳಿಕ ನಿಮಗೇ ತಿಳಿಯಲಿದೆ’ ಎಂದು ಪ್ರತಿಕ್ರಿಯಿಸಿದರು.<br /> <br /> 1977ರಿಂದ ಪ್ರತಿ ಚುನಾವಣೆಯಲ್ಲಿಯೂ ಎಲ್ಡಿಎಫ್ ಮತ್ತು ಯುಡಿಎಫ್ ಪಕ್ಷಗಳ ಒಂದರ ನಂತರ ಮತ್ತೊಂದು ಅಧಿಕಾರಕ್ಕೆ ಬರುತ್ತಿದ್ದು, ಇದುವರೆಗೂ ಯಾವ ಪಕ್ಷವೂ ಸತತ ಅವಧಿಗಳಲ್ಲಿ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ ಎಲ್ಡಿಎಫ್ ಪುನಃ ಅಧಿಕಾರಕ್ಕೆ ಬರುವ ಮೂಲಕ ಇತಿಹಾಸ ನಿರ್ಮಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ವಿರೋಧಪಕ್ಷದ ನಾಯಕ ಉಮ್ಮನ್ ಚಾಂಡಿ ತಮ್ಮ ಮತ್ತು ಪುತ್ರ ವಿ.ಎ.ಅರುಣ್ ಕುಮಾರ್ ವಿರುದ್ಧ ಮಾಡಲಾದ ಆರೋಪಗಳ ಪಟ್ಟಿಯನ್ನು ಬುಧವಾರ ತಮಗೆ ಸಲ್ಲಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಇದಕ್ಕೆ ಪ್ರತಿಯಾಗಿ ಶೀಘ್ರವೇ ಪತ್ರ ಬರೆಯುತ್ತೇನೆ. ವಿರೋಧಪಕ್ಷಗಳ ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅಲ್ಲದೆ ಇದಕ್ಕೆ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ ಎಂದರು. <br /> <br /> ‘ಅರುಣ್ ಕುಮಾರ್ ಭಾರತೀಯ ಪ್ರಜೆಯಾಗಿದ್ದು, ತಮ್ಮ ಮೇಲೆ ಮಾಡಲಾಗಿರುವ ಆರೋಪಗಳ ವಿರುದ್ಧ ಕೋರ್ಟ್ಗೆ ಹೋಗಲಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>