<p>ರಾಳೆಗಣ ಸಿದ್ಧಿ (ಮಹಾರಾಷ್ಟ್ರ)(ಪಿಟಿಐ): ಲೋಕಪಾಲ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಪಟ್ಟನ್ನು ಸಡಿಲಗೊಳಿಸಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ರಾಜ್ಯಸಭೆಯಲ್ಲಿ ಮಂಡಿಲಾಗಿರುವ ಪರಿಷ್ಕೃತ ಲೋಕಪಾಲ ಮಸೂದೆಯೊಂದಿಗೆ ಮುಂದೆ ಸಾಗುವಂತೆ ಶನಿವಾರ ಸಲಹೆ ಮಾಡಿದ್ದಾರೆ. ಬದಲಾವಣೆಗಳನ್ನು ಮುಂದೆ ತಂದುಕೊಳ್ಳಬಹುದು ಎಂದೂ ಅವರು ಹೇಳಿದ್ದಾರೆ.<br /> <br /> 'ಹಾಲಿ ಕರಡು ಲೋಕಪಾಲ ಮಸೂದೆಯೊಂದಿಗೆ ಮುಂದೆ ಸಾಗುವ ಮತ್ತು ಅದನ್ನು ಅಂಗೀಕರಿಸುವ ಸಮಯ ಬಂದಿದೆ. ಮಸೂದೆಯು ಒಮ್ಮೆ ಸಾಂವಿಧಾನಿಕ ವಾಸ್ತವಿಕತೆಯಾದರೆ ಬಳಿಕ ತಿದ್ದುಪಡಿಗಳ ಮೂಲಕ ಅದನ್ನು ಸುಧಾರಿಸಬಹುದು' ಎಂದು ಹಜಾರೆ ಪಿಟಿಐ ಜೊತೆಗೆ ಮಾತನಾಡುತ್ತಾ ಹಜಾರೆ ಹೇಳಿದರು.<br /> <br /> ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಹಜಾರೆ ಅವರು ಆರಂಭಿಸಿರುವ ಅನಿರ್ದಿಷ್ಟ ನಿರಶನ ಶನಿವಾರ ಐದನೇ ದಿನಕ್ಕೆ ಪ್ರವೇಶಿಸಿದೆ.<br /> <br /> ಸರ್ಕಾರವು ಶುಕ್ರವಾರ ರಾಜ್ಯಸಭೆಯಲ್ಲಿ ಪರಿಷ್ಕೃತ ಲೋಕಪಾಲ ಮಸೂದೆಯನ್ನು ಮಂಡಿಸಿತ್ತು. ಆದರೆ ಯುಪಿಎ ಮೈತ್ರಿಕೂಟಕ್ಕೆ ಬಾಹ್ಯ ಬೆಂಬಲ ನೀಡಿರುವ ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ಪಕ್ಷಗಳು ಬೇರೆ ಬೇರೆ ವಿಷಯಗಳನ್ನು ಎತ್ತಿಕೊಂಡು ಕೋಲಾಹಲ ಉಂಟು ಮಾಡಿದ್ದರಿಂದ ಮಸೂದೆಯನ್ನು ಪರಿಶೀಲನೆಗೆ ಎತ್ತಿಕೊಳ್ಳಲು ಆಗಿರಲಿಲ್ಲ.<br /> <br /> ಪರಿಷ್ಕೃತ ಲೋಕಪಾಲ ಮಸೂದೆಯು ರಾಜ್ಯಗಳಲ್ಲಿ ಲೋಕಾಯುಕ್ತ ಸಂಸ್ಥೆಗಳ ರಚನೆಯ ವಿಚಾರವನ್ನು ಪ್ರತ್ಯೇಕಿಸುವುದರ ಜೊತೆಗೆ ಸರ್ಕಾರಿ ನೌಕರರ ವಿಚಾರಣಾ ಅಧಿಕಾರವನ್ನು ಸಾರ್ವಜನಿಕ ವಿಚಾರಣಾಧಿಕಾರಿಗೆ ವರ್ಗಾಯಿಸಲು ಅವಕಾಶ ಕಲ್ಪಿಸಿದೆ.<br /> <br /> ಇದೇ ವರ್ಷ ಜನವರಿ 31ರಂದು ಸರ್ಕಾರವು ಲೋಕಪಾಲ ಮಸೂದೆಗೆ ಉಲ್ಲೇಖಿತ ತಿದ್ದುಪಡಿಗಳನ್ನು ಮಾಡಿತ್ತು.<br /> ರಾಜ್ಯಸಭಾ ಆಯ್ಕೆ ಸಮಿತಿಯು ಶಿಫಾರಸು ಮಾಡಿದ್ದ 16 ಸಲಹೆಗಳ ಪೈಕಿ 14 ಸಲಹೆಗಳನ್ನು ಕೇಂದ್ರ ಸಂಪುಟ ಅಂಗೀಕರಿಸಿತ್ತು.</p>.<p>ರಾಜಕೀಯ ಪಕ್ಷಗಳ ಮಧ್ಯೆ ತೀವ್ರ ಭಿನ್ನಾಭಿಪ್ರಾಯ ಉಂಟಾದ ಪರಿಣಾಮವಾಗಿ 2011ರ ಡಿಸೆಂಬರ್ ನಿಂದ ಲೋಕಸಭೆಯಲ್ಲಿ ಮಸೂದೆ ನೆನೆಗುದಿಗೆ ಬಿದ್ದ ಬಳಿಕ ಕಳೆ ವರ್ಷ ಮೇ ತಿಂಗಳಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಳೆಗಣ ಸಿದ್ಧಿ (ಮಹಾರಾಷ್ಟ್ರ)(ಪಿಟಿಐ): ಲೋಕಪಾಲ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಪಟ್ಟನ್ನು ಸಡಿಲಗೊಳಿಸಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ರಾಜ್ಯಸಭೆಯಲ್ಲಿ ಮಂಡಿಲಾಗಿರುವ ಪರಿಷ್ಕೃತ ಲೋಕಪಾಲ ಮಸೂದೆಯೊಂದಿಗೆ ಮುಂದೆ ಸಾಗುವಂತೆ ಶನಿವಾರ ಸಲಹೆ ಮಾಡಿದ್ದಾರೆ. ಬದಲಾವಣೆಗಳನ್ನು ಮುಂದೆ ತಂದುಕೊಳ್ಳಬಹುದು ಎಂದೂ ಅವರು ಹೇಳಿದ್ದಾರೆ.<br /> <br /> 'ಹಾಲಿ ಕರಡು ಲೋಕಪಾಲ ಮಸೂದೆಯೊಂದಿಗೆ ಮುಂದೆ ಸಾಗುವ ಮತ್ತು ಅದನ್ನು ಅಂಗೀಕರಿಸುವ ಸಮಯ ಬಂದಿದೆ. ಮಸೂದೆಯು ಒಮ್ಮೆ ಸಾಂವಿಧಾನಿಕ ವಾಸ್ತವಿಕತೆಯಾದರೆ ಬಳಿಕ ತಿದ್ದುಪಡಿಗಳ ಮೂಲಕ ಅದನ್ನು ಸುಧಾರಿಸಬಹುದು' ಎಂದು ಹಜಾರೆ ಪಿಟಿಐ ಜೊತೆಗೆ ಮಾತನಾಡುತ್ತಾ ಹಜಾರೆ ಹೇಳಿದರು.<br /> <br /> ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಹಜಾರೆ ಅವರು ಆರಂಭಿಸಿರುವ ಅನಿರ್ದಿಷ್ಟ ನಿರಶನ ಶನಿವಾರ ಐದನೇ ದಿನಕ್ಕೆ ಪ್ರವೇಶಿಸಿದೆ.<br /> <br /> ಸರ್ಕಾರವು ಶುಕ್ರವಾರ ರಾಜ್ಯಸಭೆಯಲ್ಲಿ ಪರಿಷ್ಕೃತ ಲೋಕಪಾಲ ಮಸೂದೆಯನ್ನು ಮಂಡಿಸಿತ್ತು. ಆದರೆ ಯುಪಿಎ ಮೈತ್ರಿಕೂಟಕ್ಕೆ ಬಾಹ್ಯ ಬೆಂಬಲ ನೀಡಿರುವ ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ಪಕ್ಷಗಳು ಬೇರೆ ಬೇರೆ ವಿಷಯಗಳನ್ನು ಎತ್ತಿಕೊಂಡು ಕೋಲಾಹಲ ಉಂಟು ಮಾಡಿದ್ದರಿಂದ ಮಸೂದೆಯನ್ನು ಪರಿಶೀಲನೆಗೆ ಎತ್ತಿಕೊಳ್ಳಲು ಆಗಿರಲಿಲ್ಲ.<br /> <br /> ಪರಿಷ್ಕೃತ ಲೋಕಪಾಲ ಮಸೂದೆಯು ರಾಜ್ಯಗಳಲ್ಲಿ ಲೋಕಾಯುಕ್ತ ಸಂಸ್ಥೆಗಳ ರಚನೆಯ ವಿಚಾರವನ್ನು ಪ್ರತ್ಯೇಕಿಸುವುದರ ಜೊತೆಗೆ ಸರ್ಕಾರಿ ನೌಕರರ ವಿಚಾರಣಾ ಅಧಿಕಾರವನ್ನು ಸಾರ್ವಜನಿಕ ವಿಚಾರಣಾಧಿಕಾರಿಗೆ ವರ್ಗಾಯಿಸಲು ಅವಕಾಶ ಕಲ್ಪಿಸಿದೆ.<br /> <br /> ಇದೇ ವರ್ಷ ಜನವರಿ 31ರಂದು ಸರ್ಕಾರವು ಲೋಕಪಾಲ ಮಸೂದೆಗೆ ಉಲ್ಲೇಖಿತ ತಿದ್ದುಪಡಿಗಳನ್ನು ಮಾಡಿತ್ತು.<br /> ರಾಜ್ಯಸಭಾ ಆಯ್ಕೆ ಸಮಿತಿಯು ಶಿಫಾರಸು ಮಾಡಿದ್ದ 16 ಸಲಹೆಗಳ ಪೈಕಿ 14 ಸಲಹೆಗಳನ್ನು ಕೇಂದ್ರ ಸಂಪುಟ ಅಂಗೀಕರಿಸಿತ್ತು.</p>.<p>ರಾಜಕೀಯ ಪಕ್ಷಗಳ ಮಧ್ಯೆ ತೀವ್ರ ಭಿನ್ನಾಭಿಪ್ರಾಯ ಉಂಟಾದ ಪರಿಣಾಮವಾಗಿ 2011ರ ಡಿಸೆಂಬರ್ ನಿಂದ ಲೋಕಸಭೆಯಲ್ಲಿ ಮಸೂದೆ ನೆನೆಗುದಿಗೆ ಬಿದ್ದ ಬಳಿಕ ಕಳೆ ವರ್ಷ ಮೇ ತಿಂಗಳಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>