<p><strong>ಶಿವಮೊಗ್ಗ:</strong> `ವ್ಯಂಗ್ಯಚಿತ್ರಗಳು ಮಕ್ಕಳ ಕಲಿಕೆಗೆ ಸುಲಭದ ಮಾರ್ಗವಾಗಿರುವುದರಿಂದ ಪ್ರಾಥಮಿಕ ಶಾಲೆಗಳಲ್ಲಿ ವ್ಯಂಗ್ಯಚಿತ್ರಗಳ ಮೂಲಕ ಪಾಠಗಳನ್ನು ಹೇಳಿಕೊಡುವ ಕಾಮಿಕ್ಸ್ ಪಠ್ಯಕ್ರಮದ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಭರವಸೆ ನೀಡಿದರು.<br /> <br /> ತೀರ್ಥಹಳ್ಳಿಯ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಹೇಮಾಂಗಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘ ಹಾಗೂ ವಾರ್ತಾ ಇಲಾಖೆ ಹಮ್ಮಿಕೊಂಡಿರುವ ರಾಜ್ಯಮಟ್ಟದ ವ್ಯಂಗ್ಯಚಿತ್ರಕಾರರ ಕಾರ್ಯಾಗಾರದಲ್ಲಿ ಶನಿವಾರ `ಕರ್ನಾಟಕದಲ್ಲಿ ವ್ಯಂಗ್ಯಚಿತ್ರಕಲೆ' ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಮಕ್ಕಳಿಗೆ ಪಠ್ಯ ಹೇಳಿಕೊಡುವುದಕ್ಕೆ ಸುಲಭದ ವಿನೂತನ ಮಾರ್ಗಗಳ ಅನ್ವೇಷಣೆ ನಡೆದಿದೆ. ಅದರಲ್ಲಿಯೂ ವ್ಯಂಗ್ಯಚಿತ್ರಗಳ ಮೂಲಕ ಕಲಿಕೆ ಸುಲಭ ಮತ್ತು ಸರಳವಾಗಿದೆ. ಈ ಮಾರ್ಗದ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಲಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಸ್ತಾಪಿಸಿರುವ ಮಹಾತ್ಮಗಾಂಧಿ ಮಾಧ್ಯಮ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂಬ ವಿಷಯದ ಸಾಧಕ-ಬಾಧಕಗಳ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಹೇಳಿದರು.<br /> <br /> ರಾಜ್ಯದಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸಲು ಇಲಾಖೆಗೆ ಸುಮಾರು ್ಙ 3,500 ಕೋಟಿ ಅಗತ್ಯವಿದೆ. ಆದರೆ, ಅಷ್ಟೊಂದು ಬಜೆಟ್ ಇಲಾಖೆಗೆ ಲಭ್ಯವಾಗುವುದಿಲ್ಲ. ಹಂತಹಂತವಾಗಿ ಶಾಲೆಗಳಿಗೆ ಮೂಲಸೌಲಭ್ಯ ಒದಗಿಸಬೇಕಿದೆ ಎಂದರು.<br /> <br /> ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘದ ಅಧ್ಯಕ್ಷ ಎಸ್.ವಿ.ಪದ್ಮನಾಭ ಮಾತನಾಡಿ, ಶಿಕ್ಷಣ ಇಲಾಖೆ ಪಠ್ಯಪುಸ್ತಕ ರಚನಾ ಸಮಿತಿಗೆ ವ್ಯಂಗ್ಯಚಿತ್ರಕಾರರನ್ನು ಸದಸ್ಯರನ್ನಾಗಿ ನೇಮಿಸಬೇಕು ಎಂದು ಸಚಿವರಿಗೆ ಸಲಹೆ ನೀಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಎ.ಪೊನ್ನಪ್ಪ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> `ವ್ಯಂಗ್ಯಚಿತ್ರಗಳು ಮಕ್ಕಳ ಕಲಿಕೆಗೆ ಸುಲಭದ ಮಾರ್ಗವಾಗಿರುವುದರಿಂದ ಪ್ರಾಥಮಿಕ ಶಾಲೆಗಳಲ್ಲಿ ವ್ಯಂಗ್ಯಚಿತ್ರಗಳ ಮೂಲಕ ಪಾಠಗಳನ್ನು ಹೇಳಿಕೊಡುವ ಕಾಮಿಕ್ಸ್ ಪಠ್ಯಕ್ರಮದ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಭರವಸೆ ನೀಡಿದರು.<br /> <br /> ತೀರ್ಥಹಳ್ಳಿಯ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಹೇಮಾಂಗಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘ ಹಾಗೂ ವಾರ್ತಾ ಇಲಾಖೆ ಹಮ್ಮಿಕೊಂಡಿರುವ ರಾಜ್ಯಮಟ್ಟದ ವ್ಯಂಗ್ಯಚಿತ್ರಕಾರರ ಕಾರ್ಯಾಗಾರದಲ್ಲಿ ಶನಿವಾರ `ಕರ್ನಾಟಕದಲ್ಲಿ ವ್ಯಂಗ್ಯಚಿತ್ರಕಲೆ' ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಮಕ್ಕಳಿಗೆ ಪಠ್ಯ ಹೇಳಿಕೊಡುವುದಕ್ಕೆ ಸುಲಭದ ವಿನೂತನ ಮಾರ್ಗಗಳ ಅನ್ವೇಷಣೆ ನಡೆದಿದೆ. ಅದರಲ್ಲಿಯೂ ವ್ಯಂಗ್ಯಚಿತ್ರಗಳ ಮೂಲಕ ಕಲಿಕೆ ಸುಲಭ ಮತ್ತು ಸರಳವಾಗಿದೆ. ಈ ಮಾರ್ಗದ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಲಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಸ್ತಾಪಿಸಿರುವ ಮಹಾತ್ಮಗಾಂಧಿ ಮಾಧ್ಯಮ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂಬ ವಿಷಯದ ಸಾಧಕ-ಬಾಧಕಗಳ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಹೇಳಿದರು.<br /> <br /> ರಾಜ್ಯದಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸಲು ಇಲಾಖೆಗೆ ಸುಮಾರು ್ಙ 3,500 ಕೋಟಿ ಅಗತ್ಯವಿದೆ. ಆದರೆ, ಅಷ್ಟೊಂದು ಬಜೆಟ್ ಇಲಾಖೆಗೆ ಲಭ್ಯವಾಗುವುದಿಲ್ಲ. ಹಂತಹಂತವಾಗಿ ಶಾಲೆಗಳಿಗೆ ಮೂಲಸೌಲಭ್ಯ ಒದಗಿಸಬೇಕಿದೆ ಎಂದರು.<br /> <br /> ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘದ ಅಧ್ಯಕ್ಷ ಎಸ್.ವಿ.ಪದ್ಮನಾಭ ಮಾತನಾಡಿ, ಶಿಕ್ಷಣ ಇಲಾಖೆ ಪಠ್ಯಪುಸ್ತಕ ರಚನಾ ಸಮಿತಿಗೆ ವ್ಯಂಗ್ಯಚಿತ್ರಕಾರರನ್ನು ಸದಸ್ಯರನ್ನಾಗಿ ನೇಮಿಸಬೇಕು ಎಂದು ಸಚಿವರಿಗೆ ಸಲಹೆ ನೀಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಎ.ಪೊನ್ನಪ್ಪ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>