<p><strong>ಸಾಗರ:</strong> ಶಿಕ್ಷಣ ಎಂದರೆ ಕೇವಲ ನಾಲ್ಕು ಗೋಡೆಗಳ ನಡುವೆ ಕಲಿಸುವುದಲ್ಲ. ಪಠ್ಯದ ಜತೆಗೆ ನಿತ್ಯದ ವಿದ್ಯಮಾನಗಳ ಪರಿಚಯ ಮಕ್ಕಳಿಗೆ ಇರಬೇಕು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯೆ ಪದ್ಮಾವತಿ ಚಂದ್ರಕುಮಾರ್ ಹೇಳಿದರು.<br /> <br /> ತಾಲ್ಲೂಕಿನ ಗೆಣಸಿನಕುಣಿ ಗ್ರಾಮದಲ್ಲಿ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ಏರ್ಪಡಿಸಿದ್ದ, ವಿಜ್ಞಾನ ಮೇಳ, ಮೆಟ್ರಿಕ್ ಮೇಳ, ಮಕ್ಕಳಸಂತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶಿಕ್ಷಣ ಎಂಬುದು ಕೇವಲ ಉದ್ಯೋಗ ಗಳಿಸಲು ಹಾಕಿಕೊಡುವ ಮಾರ್ಗವಲ್ಲ. ಲೋಕಜ್ಞಾನವನ್ನು ಕಲಿಸದ ಶಿಕ್ಷಣದಿಂದ ಯಾವುದೇ ಪ್ರಯೋಜನವಿಲ್ಲ. ಹೊರ ಜಗತ್ತಿನಲ್ಲಿ ಏನೇನು ನಡೆಯುತ್ತಿದೆ ಎಂಬುದು ಮಕ್ಕಳಿಗೆ ಗೊತ್ತಾಗುವಂತೆ ಶಿಕ್ಷಣ ಕ್ರಮವನ್ನು ರೂಪಿಸುವುದು ಮುಖ್ಯ ಎಂದು ಹೇಳಿದರು.<br /> <br /> ವಿಜ್ಞಾನ ಮೇಳದಂತಹ ಕಾರ್ಯಕ್ರಮವನ್ನು ಆಯೋಜಿಸುವುದರಿಂದ ಮಕ್ಕಳಿಗೆ ವಿಜ್ಞಾನದ ಕಲಿಕೆ ಸುಲಭವಾಗುತ್ತದೆ. ಮಾದರಿಗಳ ಮೂಲಕ ವಿಜ್ಞಾನವನ್ನು ಕಲಿಸುವುದು ಹೆಚ್ಚು ಪರಿಣಾಮಕಾರಿ. ಮಕ್ಕಳಸಂತೆಯಿಂದ ಮಕ್ಕಳಲ್ಲಿ ವ್ಯವಹಾರಿಕ ಜ್ಞಾನ ಬೆಳೆಯುತ್ತದೆ ಎಂದರು.<br /> <br /> ತಾಲ್ಲೂಕು ಪಂಚಾಯ್ತಿ ಸದಸ್ಯೆ ಶ್ಯಾಮಲಾ ದೇವರಾಜ್ ಮಾತನಾಡಿ, ಮಕ್ಕಳಸಂತೆ, ವಿಜ್ಞಾನ ಮೇಳ ಇವೆಲ್ಲಾ ಮಕ್ಕಳು ಸಂಭ್ರಮಪಡುವಂತಹ ಕಾರ್ಯಕ್ರಮಗಳು. ಇವುಗಳಿಂದಾಗಿ ಮಕ್ಕಳಲ್ಲಿ ಕ್ರಿಯಾಶೀಲತೆ ಬೆಳೆಯುತ್ತದೆ ಎಂದು ಹೇಳಿದರು.<br /> <br /> ಗ್ರಾಮದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಸಿ. ಸೂರ್ಯನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಗದೀಶಗೌಡ, ವಿನೋದಾ ಆರ್. ಜೋಶಿ ಹಾಜರಿದ್ದರು.<br /> ವಂದನಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ದೀಪಿಕಾ ಸ್ವಾಗತಿಸಿದರು. ಅಕ್ಷಯಾ ವಂದಿಸಿದರು. ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಶಿಕ್ಷಣ ಎಂದರೆ ಕೇವಲ ನಾಲ್ಕು ಗೋಡೆಗಳ ನಡುವೆ ಕಲಿಸುವುದಲ್ಲ. ಪಠ್ಯದ ಜತೆಗೆ ನಿತ್ಯದ ವಿದ್ಯಮಾನಗಳ ಪರಿಚಯ ಮಕ್ಕಳಿಗೆ ಇರಬೇಕು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯೆ ಪದ್ಮಾವತಿ ಚಂದ್ರಕುಮಾರ್ ಹೇಳಿದರು.<br /> <br /> ತಾಲ್ಲೂಕಿನ ಗೆಣಸಿನಕುಣಿ ಗ್ರಾಮದಲ್ಲಿ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ಏರ್ಪಡಿಸಿದ್ದ, ವಿಜ್ಞಾನ ಮೇಳ, ಮೆಟ್ರಿಕ್ ಮೇಳ, ಮಕ್ಕಳಸಂತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶಿಕ್ಷಣ ಎಂಬುದು ಕೇವಲ ಉದ್ಯೋಗ ಗಳಿಸಲು ಹಾಕಿಕೊಡುವ ಮಾರ್ಗವಲ್ಲ. ಲೋಕಜ್ಞಾನವನ್ನು ಕಲಿಸದ ಶಿಕ್ಷಣದಿಂದ ಯಾವುದೇ ಪ್ರಯೋಜನವಿಲ್ಲ. ಹೊರ ಜಗತ್ತಿನಲ್ಲಿ ಏನೇನು ನಡೆಯುತ್ತಿದೆ ಎಂಬುದು ಮಕ್ಕಳಿಗೆ ಗೊತ್ತಾಗುವಂತೆ ಶಿಕ್ಷಣ ಕ್ರಮವನ್ನು ರೂಪಿಸುವುದು ಮುಖ್ಯ ಎಂದು ಹೇಳಿದರು.<br /> <br /> ವಿಜ್ಞಾನ ಮೇಳದಂತಹ ಕಾರ್ಯಕ್ರಮವನ್ನು ಆಯೋಜಿಸುವುದರಿಂದ ಮಕ್ಕಳಿಗೆ ವಿಜ್ಞಾನದ ಕಲಿಕೆ ಸುಲಭವಾಗುತ್ತದೆ. ಮಾದರಿಗಳ ಮೂಲಕ ವಿಜ್ಞಾನವನ್ನು ಕಲಿಸುವುದು ಹೆಚ್ಚು ಪರಿಣಾಮಕಾರಿ. ಮಕ್ಕಳಸಂತೆಯಿಂದ ಮಕ್ಕಳಲ್ಲಿ ವ್ಯವಹಾರಿಕ ಜ್ಞಾನ ಬೆಳೆಯುತ್ತದೆ ಎಂದರು.<br /> <br /> ತಾಲ್ಲೂಕು ಪಂಚಾಯ್ತಿ ಸದಸ್ಯೆ ಶ್ಯಾಮಲಾ ದೇವರಾಜ್ ಮಾತನಾಡಿ, ಮಕ್ಕಳಸಂತೆ, ವಿಜ್ಞಾನ ಮೇಳ ಇವೆಲ್ಲಾ ಮಕ್ಕಳು ಸಂಭ್ರಮಪಡುವಂತಹ ಕಾರ್ಯಕ್ರಮಗಳು. ಇವುಗಳಿಂದಾಗಿ ಮಕ್ಕಳಲ್ಲಿ ಕ್ರಿಯಾಶೀಲತೆ ಬೆಳೆಯುತ್ತದೆ ಎಂದು ಹೇಳಿದರು.<br /> <br /> ಗ್ರಾಮದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಸಿ. ಸೂರ್ಯನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಗದೀಶಗೌಡ, ವಿನೋದಾ ಆರ್. ಜೋಶಿ ಹಾಜರಿದ್ದರು.<br /> ವಂದನಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ದೀಪಿಕಾ ಸ್ವಾಗತಿಸಿದರು. ಅಕ್ಷಯಾ ವಂದಿಸಿದರು. ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>