<p>ದಾವಣಗೆರೆ: ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳತ್ತಲೂ ಆಸಕ್ತಿ ವಹಿಸಬೇಕು ಎಂದು ಮೇಯರ್ ಸುಧಾ ಜಯರುದ್ರೇಶ್ ಹೇಳಿದರು.<br /> <br /> ರಾಜ್ಯ ಮಕ್ಕಳ ಸಾಹಿತ್ಯ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಶಿಬಿರ ಉದ್ಘಾಟಿಸಿ ಸೋಮವಾರ ಅವರು ಮಾತನಾಡಿದರು.<br /> <br /> ದಾನಮ್ಮ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಬಿ.ಎಸ್. ನಾಡಿಗೇರ್ ಮಾತನಾಡಿ, ಮಕ್ಕಳಿಗೆ ಕನ್ನಡ ಚೆನ್ನಾಗಿ ಬಂದರೆ ಇಂಗ್ಲಿಷ್ ಕಲಿಕೆ ಸುಲಭವಾಗುತ್ತದೆ. ಕನ್ನಡ ಒತ್ತಕ್ಷರ, ವಾಕ್ಯ ರಚನೆ ಬಗ್ಗೆ ಗಮನಕೊಡಬೇಕು. ಭಾಷೆಯ ಸ್ಪಷ್ಟತೆ ಬಗ್ಗೆ ಅರಿವಿರಬೇಕು ಎಂದರು.<br /> <br /> ವೇದಿಕೆಯ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ ಶೆಣೈ ಮಾತನಾಡಿ, ಮಾನವೀಯ ಮೌಲ್ಯಗಳನ್ನು ಮಕ್ಕಳಿಗೆ ಪರಿಚಯಿಸಬೇಕು. ಪಾಲಿಕೆ ವತಿಯಿಂದ ಮಕ್ಕಳ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.<br /> <br /> ಮಕ್ಕಳ ಸಾಹಿತಿ ಬಿ.ಕೆ. ವಿಜಯಾ, ಶಾರದಾ ಮಹಾರುದ್ರಯ್ಯ ಇದ್ದರು. ವೇದಿಕೆ ಕಾರ್ಯಾಧ್ಯಕ್ಷ ಕೆ.ಎನ್. ಸ್ವಾಮಿ ಸ್ವಾಗತಿಸಿದರು. ಗೀತಾ ಬದರಿನಾಥ ಕಾರ್ಯಕ್ರಮ ನಿರೂಪಿಸಿದರು. ವೀಣಾ ಕೃಷ್ಣಮೂರ್ತಿ ಪ್ರಾರ್ಥಿಸಿದರು.<br /> <br /> <strong>ತೋಟಗಾರಿಕೆ ತರಬೇತಿ</strong><br /> ತೋಟಗಾರಿಕೆ ಇಲಾಖೆಯ ವ್ಯಾಪ್ತಿಯ ಚಿತ್ರದುರ್ಗ ತಾಲ್ಲೂಕಿನ ಐನಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮೇ. 2ರಿಂದ 2013ರ ಫೆ. 28ರವರೆಗೆ ರೈತರ ಮಕ್ಕಳಿಗೆ 10 ತಿಂಗಳು ತೋಟಗಾರಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.<br /> <br /> ಅರ್ಜಿಗಳನ್ನು ಏ.11ರಿಂದ 23ರವರೆಗೆ ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಏ. 27 ಅಂತಿಮ ದಿನಾಂಕವಾಗಿದ್ದು, ಅಂದೇ ಸಂದರ್ಶನ ನಡೆಸಲಾಗುವುದು. ಸಾಮಾನ್ಯ ಅಭ್ಯರ್ಥಿಗಳಿಗೆ ್ಙ 10, ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ್ಙ 5 ಅರ್ಜಿ ಶುಲ್ಕ ನಿಗದಿಪಡಿಸಿದೆ.<br /> <br /> ತರಬೇತಿ ಪ್ರವೇಶ ಬಯಸುವ ಅಭ್ಯರ್ಥಿಗಳು ಕನಿಷ್ಠ ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿ, ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಅರ್ಜಿಯೊಂದಿಗೆ ಪಹಣಿಯನ್ನು ನೀಡಬೇಕು. ತರಬೇತಿ ಅವಧಿಯಲ್ಲಿ ಅಭ್ಯರ್ಥಿಯು ವಸತಿ ಗೃಹದಲ್ಲಿ ತಂಗುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆ, ಅಧೀನ ಕಚೇರಿ ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳತ್ತಲೂ ಆಸಕ್ತಿ ವಹಿಸಬೇಕು ಎಂದು ಮೇಯರ್ ಸುಧಾ ಜಯರುದ್ರೇಶ್ ಹೇಳಿದರು.<br /> <br /> ರಾಜ್ಯ ಮಕ್ಕಳ ಸಾಹಿತ್ಯ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಶಿಬಿರ ಉದ್ಘಾಟಿಸಿ ಸೋಮವಾರ ಅವರು ಮಾತನಾಡಿದರು.<br /> <br /> ದಾನಮ್ಮ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಬಿ.ಎಸ್. ನಾಡಿಗೇರ್ ಮಾತನಾಡಿ, ಮಕ್ಕಳಿಗೆ ಕನ್ನಡ ಚೆನ್ನಾಗಿ ಬಂದರೆ ಇಂಗ್ಲಿಷ್ ಕಲಿಕೆ ಸುಲಭವಾಗುತ್ತದೆ. ಕನ್ನಡ ಒತ್ತಕ್ಷರ, ವಾಕ್ಯ ರಚನೆ ಬಗ್ಗೆ ಗಮನಕೊಡಬೇಕು. ಭಾಷೆಯ ಸ್ಪಷ್ಟತೆ ಬಗ್ಗೆ ಅರಿವಿರಬೇಕು ಎಂದರು.<br /> <br /> ವೇದಿಕೆಯ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ ಶೆಣೈ ಮಾತನಾಡಿ, ಮಾನವೀಯ ಮೌಲ್ಯಗಳನ್ನು ಮಕ್ಕಳಿಗೆ ಪರಿಚಯಿಸಬೇಕು. ಪಾಲಿಕೆ ವತಿಯಿಂದ ಮಕ್ಕಳ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.<br /> <br /> ಮಕ್ಕಳ ಸಾಹಿತಿ ಬಿ.ಕೆ. ವಿಜಯಾ, ಶಾರದಾ ಮಹಾರುದ್ರಯ್ಯ ಇದ್ದರು. ವೇದಿಕೆ ಕಾರ್ಯಾಧ್ಯಕ್ಷ ಕೆ.ಎನ್. ಸ್ವಾಮಿ ಸ್ವಾಗತಿಸಿದರು. ಗೀತಾ ಬದರಿನಾಥ ಕಾರ್ಯಕ್ರಮ ನಿರೂಪಿಸಿದರು. ವೀಣಾ ಕೃಷ್ಣಮೂರ್ತಿ ಪ್ರಾರ್ಥಿಸಿದರು.<br /> <br /> <strong>ತೋಟಗಾರಿಕೆ ತರಬೇತಿ</strong><br /> ತೋಟಗಾರಿಕೆ ಇಲಾಖೆಯ ವ್ಯಾಪ್ತಿಯ ಚಿತ್ರದುರ್ಗ ತಾಲ್ಲೂಕಿನ ಐನಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮೇ. 2ರಿಂದ 2013ರ ಫೆ. 28ರವರೆಗೆ ರೈತರ ಮಕ್ಕಳಿಗೆ 10 ತಿಂಗಳು ತೋಟಗಾರಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.<br /> <br /> ಅರ್ಜಿಗಳನ್ನು ಏ.11ರಿಂದ 23ರವರೆಗೆ ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಏ. 27 ಅಂತಿಮ ದಿನಾಂಕವಾಗಿದ್ದು, ಅಂದೇ ಸಂದರ್ಶನ ನಡೆಸಲಾಗುವುದು. ಸಾಮಾನ್ಯ ಅಭ್ಯರ್ಥಿಗಳಿಗೆ ್ಙ 10, ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ್ಙ 5 ಅರ್ಜಿ ಶುಲ್ಕ ನಿಗದಿಪಡಿಸಿದೆ.<br /> <br /> ತರಬೇತಿ ಪ್ರವೇಶ ಬಯಸುವ ಅಭ್ಯರ್ಥಿಗಳು ಕನಿಷ್ಠ ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿ, ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಅರ್ಜಿಯೊಂದಿಗೆ ಪಹಣಿಯನ್ನು ನೀಡಬೇಕು. ತರಬೇತಿ ಅವಧಿಯಲ್ಲಿ ಅಭ್ಯರ್ಥಿಯು ವಸತಿ ಗೃಹದಲ್ಲಿ ತಂಗುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆ, ಅಧೀನ ಕಚೇರಿ ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>