<p><strong>ನಾಗಮಂಗಲ:</strong> ಪಂಚತಂತ್ರ ದತ್ತಾಂಶ ಯೋಜನೆಯಡಿ ರಾಜ್ಯದ ಎಲ್ಲಾ ಪಡಿತರದಾರರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಪಡಿತರ ಚೀಟಿ ನೊಂದಣಿ ಮಾಡಿಕೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಕೆ.ಕೃಷ್ಣಪ್ಪ ಮನವಿ ಮಾಡಿದರು. <br /> <br /> ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು `ಗ್ರಾಮ ಪಂಚಾಯಿತಿಗಳಲ್ಲಿ ಪಡಿತರ ನೋಂದಣಿ ಮಾಡಲು ಬರುವ ಪಡಿತರದಾರರಿಂದ ಕಂದಾಯ ವಸೂಲಿ ಮಾಡಿಸಿಕೊಂಡು ನೋಂದಣಿ ಮಾಡಲಾಗುತ್ತಿದೆ. ಇದರಿಂದ ಬಡಜನರು ಹಣವಿಲ್ಲದೆ ನೋಂದಣಿ ಮಾಡಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಸರ್ಕಾರಕ್ಕೆ ಸರಿಯಾಗಿ ಪಡಿತರದಾರರ ಲೆಕ್ಕ ಸಿಗುತ್ತಿಲ್ಲ ಎಂದರು. <br /> <br /> ಕಂದಾಯ ವಸೂಲಾತಿಗೂ ಹಾಗೂ ಪಡಿತರ ನೋಂದಣಿಗೂ ಯಾವುದೇ ಸಂಬಂಧವಿಲ್ಲ. ಜನತೆ ಈ ವಿಷಯದ ಬಗ್ಗೆ ಜಾಗೃತರಾಗಿ ನೋಂದಣಿ ಮಾಡಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ಮಾಡಿದರೆ ಪಡಿತರ ಚೀಟಿ ವಜಾಗೊಳ್ಳುವ ಹಾಗು ಸರ್ಕಾರ ಮುಟ್ಟುಗೋಲು ಹಾಕಿ ಕೊಳ್ಳುವ ಸಾಧ್ಯತೆ ಇದೆ ಎಂದರು.<br /> <br /> ಖಾತೆ ತೆರೆಯಲು ಒತ್ತಡವಿಲ್ಲ : ಅಂಚೆ ಇಲಾಖೆಯಲ್ಲಿ ಖಾತೆ ತೆರೆಯುವಲ್ಲಿ ಸಾಕಷ್ಟು ಗೊಂದಲ ಉಂಟಾಗಿದೆ. ನ್ಯಾಯಬೆಲೆ ಅಂಗಡಿಯಲ್ಲಿ ಆಹಾರ ಪದಾರ್ಥ ವಿತರಣೆಗೂ ಅಂಚೆ ಇಲಾಖೆಯಲ್ಲಿ ಖಾತೆ ತೆರೆಯುವುದಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಷಯದ ಬಗ್ಗೆ ಯಾವುದೇ ಗೊಂದಲ ಮಾಡಿಕೊಳ್ಳಬಾರದು. ಇಚ್ಛೆ ಉಳ್ಳವರು ಮಾತ್ರ ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆಯಬಹುದಾಗಿದೆ ಎಂದರು. <br /> <br /> ಪಡಿತರ ವಿತರಕರ ಸಂಘದ ತಾಲ್ಲೂಕು ಅಧ್ಯಕ್ಷ ಬಲರಾಮೇಗೌಡ, ನ್ಯಾಯಬೆಲೆ ಅಂಗಡಿ ಮಾಲೀಕ ಮುಳುಕಟ್ಟೆ ಶಿವರಾಮಯ್ಯ, ಮಹದೇವು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ಪಂಚತಂತ್ರ ದತ್ತಾಂಶ ಯೋಜನೆಯಡಿ ರಾಜ್ಯದ ಎಲ್ಲಾ ಪಡಿತರದಾರರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಪಡಿತರ ಚೀಟಿ ನೊಂದಣಿ ಮಾಡಿಕೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಕೆ.ಕೃಷ್ಣಪ್ಪ ಮನವಿ ಮಾಡಿದರು. <br /> <br /> ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು `ಗ್ರಾಮ ಪಂಚಾಯಿತಿಗಳಲ್ಲಿ ಪಡಿತರ ನೋಂದಣಿ ಮಾಡಲು ಬರುವ ಪಡಿತರದಾರರಿಂದ ಕಂದಾಯ ವಸೂಲಿ ಮಾಡಿಸಿಕೊಂಡು ನೋಂದಣಿ ಮಾಡಲಾಗುತ್ತಿದೆ. ಇದರಿಂದ ಬಡಜನರು ಹಣವಿಲ್ಲದೆ ನೋಂದಣಿ ಮಾಡಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಸರ್ಕಾರಕ್ಕೆ ಸರಿಯಾಗಿ ಪಡಿತರದಾರರ ಲೆಕ್ಕ ಸಿಗುತ್ತಿಲ್ಲ ಎಂದರು. <br /> <br /> ಕಂದಾಯ ವಸೂಲಾತಿಗೂ ಹಾಗೂ ಪಡಿತರ ನೋಂದಣಿಗೂ ಯಾವುದೇ ಸಂಬಂಧವಿಲ್ಲ. ಜನತೆ ಈ ವಿಷಯದ ಬಗ್ಗೆ ಜಾಗೃತರಾಗಿ ನೋಂದಣಿ ಮಾಡಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ಮಾಡಿದರೆ ಪಡಿತರ ಚೀಟಿ ವಜಾಗೊಳ್ಳುವ ಹಾಗು ಸರ್ಕಾರ ಮುಟ್ಟುಗೋಲು ಹಾಕಿ ಕೊಳ್ಳುವ ಸಾಧ್ಯತೆ ಇದೆ ಎಂದರು.<br /> <br /> ಖಾತೆ ತೆರೆಯಲು ಒತ್ತಡವಿಲ್ಲ : ಅಂಚೆ ಇಲಾಖೆಯಲ್ಲಿ ಖಾತೆ ತೆರೆಯುವಲ್ಲಿ ಸಾಕಷ್ಟು ಗೊಂದಲ ಉಂಟಾಗಿದೆ. ನ್ಯಾಯಬೆಲೆ ಅಂಗಡಿಯಲ್ಲಿ ಆಹಾರ ಪದಾರ್ಥ ವಿತರಣೆಗೂ ಅಂಚೆ ಇಲಾಖೆಯಲ್ಲಿ ಖಾತೆ ತೆರೆಯುವುದಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಷಯದ ಬಗ್ಗೆ ಯಾವುದೇ ಗೊಂದಲ ಮಾಡಿಕೊಳ್ಳಬಾರದು. ಇಚ್ಛೆ ಉಳ್ಳವರು ಮಾತ್ರ ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆಯಬಹುದಾಗಿದೆ ಎಂದರು. <br /> <br /> ಪಡಿತರ ವಿತರಕರ ಸಂಘದ ತಾಲ್ಲೂಕು ಅಧ್ಯಕ್ಷ ಬಲರಾಮೇಗೌಡ, ನ್ಯಾಯಬೆಲೆ ಅಂಗಡಿ ಮಾಲೀಕ ಮುಳುಕಟ್ಟೆ ಶಿವರಾಮಯ್ಯ, ಮಹದೇವು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>