<p>ಮಂಡ್ಯ: ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕ ಪಡಿತರ ವಿತರಣೆಗೆ ಆಗ್ರಹಪಡಿಸಿ ಮತ್ತು ಪಡಿತರ ಚೀಟಿದಾರರು ವಿದ್ಯುತ್ ಸಂಪರ್ಕದ ಆರ್ಆರ್ ಸಂಖ್ಯೆಯವಿವರ ನೀಡಬೇಕು ಎಂಬ ನಿಬಂಧನೆ ಕೈಬಿಡಲು ಆಗ್ರಹಪಡಿಸಿ ಜಿಲ್ಲಾ ರೈತ ಸಂಘದ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.<br /> <br /> ಕೆಲವು ನ್ಯಾಯಬೆಲೆ ಅಂಗಡಿಗಳು ಪಡಿತರ ಚೀಟಿ ಜೊತೆಗೆ ವಿದ್ಯುತ್ ಬಿಲ್, ಕಂದಾಯ ಪಾವತಿ ರಸೀದಿಯನ್ನು ನೀಡಬೇಕು. ಇಲ್ಲದಿದ್ದಲ್ಲಿ ಪಡಿತರ ನೀಡುವುದಿಲ್ಲ ಎಂದು ಷರತ್ತು ವಿಧಿಸುತ್ತಿವೆ. ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಇಂಥ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಜಿಲ್ಲಾಧಿಕಾರಿಗಳು ರೈತ ಸಂಘಕ್ಕೆ ಪ್ರತಿಕ್ರಿಯಿಸಿದ್ದಾರೆ. ಮುಂದೆ ಗ್ರಾಮೀಣ ಪ್ರದೇಶದಲ್ಲಿ ಪಡಿತರ ವಿತರಣೆಗೆ ತಕರಾರು ಮಾಡಿದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.<br /> <br /> ಬೆಳಿಗ್ಗೆ ನಗರದಲ್ಲಿ ಬಸ್ನಿಲ್ದಾಣ ಬಳಿಯ ವೃತ್ತದಲ್ಲಿ ಮಾನವ ಸರಪಳಿಯನ್ನು ರಚಿಸಿದ ರೈತರು ತಮ್ಮಬೇಡಿಕೆಯ ಬಗೆಗೆ ಸರ್ಕಾರದ ಗಮನಸೆಳೆದರು. ಪ್ರತಿಭಟನೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷ ಕೋಣಸಾಲೆ ನರಸರಾಜು, ಶಂಭೂನಹಳ್ಳಿ ಸುರೇಶ್, ಹನಿಯಂಬಾಡಿನಾಗರಾಜು, ಕೀಲಾರ ಸೋಮಶೇಖರ್, ಕೃಷ್ಣಪ್ಪ, ಬಿ.ಬೊಮ್ಮೇಗೌಡ ಮತ್ತಿತರರಿದ್ದರು.<br /> <br /> <strong>ತಹಶೀಲ್ದಾರ್ಗೆ ಮನವಿ</strong><br /> ಮದ್ದೂರು: ಪಡಿತರ ಚೀಟಿ ವಿತರಣೆಯಲ್ಲಿನ ಗೊಂದಲ ನಿವಾರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟಣದ ಟಿ.ಬಿ ವೃತ್ತದಲ್ಲಿ ಹೆದ್ದಾರಿ ತಡೆ ನಡೆಸಿದರು.<br /> <br /> ಪಡಿತರ ವ್ಯವಸ್ಥೆಯ ಲೋಪ ಕುರಿತು ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಅಲ್ಲಿಂದ ತಾಲ್ಲೂಕು ಕಚೇರಿಗೆ ಆಗಮಿಸಿ ಅಲ್ಲಿ ಕೆಲ ಕಾಲ ಧರಣಿ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.<br /> <br /> ಜಿಲ್ಲಾ ಘಟಕದ ಅಧ್ಯಕ್ಷ ಕೋಣಸಾಲೆ ನರಸರಾಜು ಮಾತನಾಡಿ, ರಾಜ್ಯದಲ್ಲಿ ಇಂದಿಗೂ ಶಾಶ್ವತ ಪಡಿತರ ಚೀಟಿ ನೀಡಿಲ್ಲ. ತಾತ್ಕಾಲಿಕ ಪಡಿತರ ಚೀಟಿ ನೀಡಿದ್ದು, ಈ ಚೀಟಿಯನ್ನು ಸರ್ಕಾರದ ಯಾವುದೇ ಸವಲತ್ತುಗಳಿಗೆ ಪರಿಗಣಿಸುತ್ತಿಲ್ಲ. ಹೀಗಾಗಿ ಬಡಜನರಿಗೆ ಸರ್ಕಾರಿ ಸವಲತ್ತುಗಳು ದೊರಕುತ್ತಿಲ್ಲ. ಈ ಕೂಡಲೇ ಪಡಿತರ ಚೀಟಿ ವಿತರಣೆಯಲ್ಲಿನ ಗೊಂದಲ ನಿವಾರಣೆಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು. <br /> ರೈತಸಂಘದ ರಾಜ್ಯ ಕಾರ್ಯದರ್ಶಿ ವಿ.ಅಶೋಕ್ ಮಾತನಾಡಿದರು.<br /> <br /> ರೈತ ಮುಖಂಡರಾದ ಜಿ.ಅಶೋಕ್, ಶಂಕರ್, ಯರಗನಹಳ್ಳಿ ರಾಮಕೃಷ್ಣಯ್ಯ, ಕೆ.ಜಿ.ಉಮೇಶ್, ಶಂಕರ್, ಜಯಮ್ಮ, ತಾಯಮ್ಮ, ಸುಶೀಲಮ್ಮ, ಶಂಕರೇಗೌಡ, ಕೆ.ರಾಮಕೃಷ್ಣೇಗೌಡ, ಬೋರಮ್ಮ ಇತರರು ಇದ್ದರು. <br /> <br /> <strong>ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಪ್ರತಿಭಟನೆ</strong><br /> ಮದ್ದೂರು: ಸಮೀಪದ ಹುಲಿಗೆರೆಪುರ ಗ್ರಾಮದೇವತೆ ಹಬ್ಬದ ಸಂದರ್ಭದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ನಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಗಳನ್ನು ಹರಿದು ಚರಂಡಿಗೆ ಹಾಕಿರುವ ಕ್ರಮ ಖಂಡಿಸಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು. <br /> <br /> ವಿಚಾರ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಸೇರಿದ ಗ್ರಾಮಸ್ಥರು ಕಿಡಿಗೇಡಿಗಳ ಕೃತ್ಯದ ವಿರುದ್ಧ ಕಿಡಿಕಾರಿದರು. ಅಷ್ಟರಲ್ಲಿ ಪಟ್ಟಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಉದ್ರಿಕ್ತ ಗ್ರಾಮಸ್ಥರನ್ನು ಸಮಾಧಾನಪಡಿಸಿದರು. <br /> ಗ್ರಾಮದಲ್ಲಿ ಬಿಗುವಿನ ವಾತಾವರಣ ಉದ್ಭವಿಸಿದ್ದು, ಯಾವುದೇ ಅಹಿತಕರ ಘಟನೆ ಜರುಗದಂತೆ ಪಿಎಸ್ಐ ಮಹೇಶ್ ಹಾಗೂ ಸಿಬ್ಬಂದಿ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ಸಂಬಂಧ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕ ಪಡಿತರ ವಿತರಣೆಗೆ ಆಗ್ರಹಪಡಿಸಿ ಮತ್ತು ಪಡಿತರ ಚೀಟಿದಾರರು ವಿದ್ಯುತ್ ಸಂಪರ್ಕದ ಆರ್ಆರ್ ಸಂಖ್ಯೆಯವಿವರ ನೀಡಬೇಕು ಎಂಬ ನಿಬಂಧನೆ ಕೈಬಿಡಲು ಆಗ್ರಹಪಡಿಸಿ ಜಿಲ್ಲಾ ರೈತ ಸಂಘದ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.<br /> <br /> ಕೆಲವು ನ್ಯಾಯಬೆಲೆ ಅಂಗಡಿಗಳು ಪಡಿತರ ಚೀಟಿ ಜೊತೆಗೆ ವಿದ್ಯುತ್ ಬಿಲ್, ಕಂದಾಯ ಪಾವತಿ ರಸೀದಿಯನ್ನು ನೀಡಬೇಕು. ಇಲ್ಲದಿದ್ದಲ್ಲಿ ಪಡಿತರ ನೀಡುವುದಿಲ್ಲ ಎಂದು ಷರತ್ತು ವಿಧಿಸುತ್ತಿವೆ. ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಇಂಥ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಜಿಲ್ಲಾಧಿಕಾರಿಗಳು ರೈತ ಸಂಘಕ್ಕೆ ಪ್ರತಿಕ್ರಿಯಿಸಿದ್ದಾರೆ. ಮುಂದೆ ಗ್ರಾಮೀಣ ಪ್ರದೇಶದಲ್ಲಿ ಪಡಿತರ ವಿತರಣೆಗೆ ತಕರಾರು ಮಾಡಿದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.<br /> <br /> ಬೆಳಿಗ್ಗೆ ನಗರದಲ್ಲಿ ಬಸ್ನಿಲ್ದಾಣ ಬಳಿಯ ವೃತ್ತದಲ್ಲಿ ಮಾನವ ಸರಪಳಿಯನ್ನು ರಚಿಸಿದ ರೈತರು ತಮ್ಮಬೇಡಿಕೆಯ ಬಗೆಗೆ ಸರ್ಕಾರದ ಗಮನಸೆಳೆದರು. ಪ್ರತಿಭಟನೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷ ಕೋಣಸಾಲೆ ನರಸರಾಜು, ಶಂಭೂನಹಳ್ಳಿ ಸುರೇಶ್, ಹನಿಯಂಬಾಡಿನಾಗರಾಜು, ಕೀಲಾರ ಸೋಮಶೇಖರ್, ಕೃಷ್ಣಪ್ಪ, ಬಿ.ಬೊಮ್ಮೇಗೌಡ ಮತ್ತಿತರರಿದ್ದರು.<br /> <br /> <strong>ತಹಶೀಲ್ದಾರ್ಗೆ ಮನವಿ</strong><br /> ಮದ್ದೂರು: ಪಡಿತರ ಚೀಟಿ ವಿತರಣೆಯಲ್ಲಿನ ಗೊಂದಲ ನಿವಾರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟಣದ ಟಿ.ಬಿ ವೃತ್ತದಲ್ಲಿ ಹೆದ್ದಾರಿ ತಡೆ ನಡೆಸಿದರು.<br /> <br /> ಪಡಿತರ ವ್ಯವಸ್ಥೆಯ ಲೋಪ ಕುರಿತು ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಅಲ್ಲಿಂದ ತಾಲ್ಲೂಕು ಕಚೇರಿಗೆ ಆಗಮಿಸಿ ಅಲ್ಲಿ ಕೆಲ ಕಾಲ ಧರಣಿ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.<br /> <br /> ಜಿಲ್ಲಾ ಘಟಕದ ಅಧ್ಯಕ್ಷ ಕೋಣಸಾಲೆ ನರಸರಾಜು ಮಾತನಾಡಿ, ರಾಜ್ಯದಲ್ಲಿ ಇಂದಿಗೂ ಶಾಶ್ವತ ಪಡಿತರ ಚೀಟಿ ನೀಡಿಲ್ಲ. ತಾತ್ಕಾಲಿಕ ಪಡಿತರ ಚೀಟಿ ನೀಡಿದ್ದು, ಈ ಚೀಟಿಯನ್ನು ಸರ್ಕಾರದ ಯಾವುದೇ ಸವಲತ್ತುಗಳಿಗೆ ಪರಿಗಣಿಸುತ್ತಿಲ್ಲ. ಹೀಗಾಗಿ ಬಡಜನರಿಗೆ ಸರ್ಕಾರಿ ಸವಲತ್ತುಗಳು ದೊರಕುತ್ತಿಲ್ಲ. ಈ ಕೂಡಲೇ ಪಡಿತರ ಚೀಟಿ ವಿತರಣೆಯಲ್ಲಿನ ಗೊಂದಲ ನಿವಾರಣೆಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು. <br /> ರೈತಸಂಘದ ರಾಜ್ಯ ಕಾರ್ಯದರ್ಶಿ ವಿ.ಅಶೋಕ್ ಮಾತನಾಡಿದರು.<br /> <br /> ರೈತ ಮುಖಂಡರಾದ ಜಿ.ಅಶೋಕ್, ಶಂಕರ್, ಯರಗನಹಳ್ಳಿ ರಾಮಕೃಷ್ಣಯ್ಯ, ಕೆ.ಜಿ.ಉಮೇಶ್, ಶಂಕರ್, ಜಯಮ್ಮ, ತಾಯಮ್ಮ, ಸುಶೀಲಮ್ಮ, ಶಂಕರೇಗೌಡ, ಕೆ.ರಾಮಕೃಷ್ಣೇಗೌಡ, ಬೋರಮ್ಮ ಇತರರು ಇದ್ದರು. <br /> <br /> <strong>ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಪ್ರತಿಭಟನೆ</strong><br /> ಮದ್ದೂರು: ಸಮೀಪದ ಹುಲಿಗೆರೆಪುರ ಗ್ರಾಮದೇವತೆ ಹಬ್ಬದ ಸಂದರ್ಭದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ನಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಗಳನ್ನು ಹರಿದು ಚರಂಡಿಗೆ ಹಾಕಿರುವ ಕ್ರಮ ಖಂಡಿಸಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು. <br /> <br /> ವಿಚಾರ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಸೇರಿದ ಗ್ರಾಮಸ್ಥರು ಕಿಡಿಗೇಡಿಗಳ ಕೃತ್ಯದ ವಿರುದ್ಧ ಕಿಡಿಕಾರಿದರು. ಅಷ್ಟರಲ್ಲಿ ಪಟ್ಟಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಉದ್ರಿಕ್ತ ಗ್ರಾಮಸ್ಥರನ್ನು ಸಮಾಧಾನಪಡಿಸಿದರು. <br /> ಗ್ರಾಮದಲ್ಲಿ ಬಿಗುವಿನ ವಾತಾವರಣ ಉದ್ಭವಿಸಿದ್ದು, ಯಾವುದೇ ಅಹಿತಕರ ಘಟನೆ ಜರುಗದಂತೆ ಪಿಎಸ್ಐ ಮಹೇಶ್ ಹಾಗೂ ಸಿಬ್ಬಂದಿ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ಸಂಬಂಧ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>