<p>ದಾವಣಗೆರೆ: ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ. ಸೋಮಶೇಖರ್ ಅವರು 45 ದಿನಗಳ ಹಿಂದೆ ಕಾಣೆಯಾಗಿದ್ದು, ಇದುವರೆಗೂ ಪತ್ತೆಯಾಗದ ಕಾರಣ ಅವರ ಕುಟುಂಬ ವರ್ಗದವರು ಆತಂಕದಲ್ಲಿದ್ದಾರೆ.<br /> <br /> ಪೊಲೀಸ್ ಇಲಾಖೆಗೆ ಈ ಬಗ್ಗೆ ದೂರು ನೀಡಲಾಗಿದ್ದು ಇಲಾಖೆಯ ಅಧಿಕಾರಿಗಳೂ ಪತ್ತೆ ಕಾರ್ಯ ಕೈಗೊಂಡು ಸಹಕರಿಸುತ್ತಿದ್ದಾರೆ. ಆದರೆ ಇದುವರೆಗೂ ಯಾವುದೇ ಸುಳಿವು ದೊರೆತಿಲ್ಲ ಎಂದು ಸೋಮಶೇಖರ್ ಅವರ ಪತ್ನಿ ಸವಿತಾ, ತಮ್ಮ ಮಕ್ಕಳಾದ ನಿತಿನ್ ಹಾಗೂ ಶಿವಾನಿ ಅವರೊಂದಿಗೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅಳಲು ತೋಡಿಕೊಂಡರು.<br /> <br /> ಸೋಮಶೇಖರ್ ಜ. 19ರಂದು ಬೆಳಿಗ್ಗೆ ಹೊಟ್ಟೆ ನೋವಿನ ಕಾರಣ ಮನೆಯಲ್ಲಿ ವಿಶ್ರಾಂತಿ ಪಡೆಯು ತ್ತಿದ್ದರು. ಜಿಲ್ಲಾ ಪೊಲೀಸ್ ಕಚೇರಿಯಿಂದ ದೂರವಾಣಿ ಕರೆ ಬಂದ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 3.15ರ ಸುಮಾರು ಕಚೇರಿಗೆ ಹೋಗುವುದಾಗಿ ತಿಳಿಸಿ ಬೈಕಿನಲ್ಲಿ ಹೋದವರು ಇದುವರೆಗೂ ವಾಪಸಾಗಿಲ್ಲ. ಈ ಬಗ್ಗೆ ಬಡಾವಣೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.<br /> <br /> ಸೋಮಶೇಖರ್ 13 ವರ್ಷಗಳಿಂದ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಕಾಣೆಯಾಗಿರುವುದಕ್ಕೆ ಕಾರಣ ತಿಳಿದಿಲ್ಲ. ಕುಟುಂಬ ವರ್ಗದವರು ಅವರ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸವಿತಾ ಅವರ ಸಂಬಂಧಿಗಳಾದ ಕೆ. ಶಿವರಾಮಪ್ಪ, ನಂದಿನಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ. ಸೋಮಶೇಖರ್ ಅವರು 45 ದಿನಗಳ ಹಿಂದೆ ಕಾಣೆಯಾಗಿದ್ದು, ಇದುವರೆಗೂ ಪತ್ತೆಯಾಗದ ಕಾರಣ ಅವರ ಕುಟುಂಬ ವರ್ಗದವರು ಆತಂಕದಲ್ಲಿದ್ದಾರೆ.<br /> <br /> ಪೊಲೀಸ್ ಇಲಾಖೆಗೆ ಈ ಬಗ್ಗೆ ದೂರು ನೀಡಲಾಗಿದ್ದು ಇಲಾಖೆಯ ಅಧಿಕಾರಿಗಳೂ ಪತ್ತೆ ಕಾರ್ಯ ಕೈಗೊಂಡು ಸಹಕರಿಸುತ್ತಿದ್ದಾರೆ. ಆದರೆ ಇದುವರೆಗೂ ಯಾವುದೇ ಸುಳಿವು ದೊರೆತಿಲ್ಲ ಎಂದು ಸೋಮಶೇಖರ್ ಅವರ ಪತ್ನಿ ಸವಿತಾ, ತಮ್ಮ ಮಕ್ಕಳಾದ ನಿತಿನ್ ಹಾಗೂ ಶಿವಾನಿ ಅವರೊಂದಿಗೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅಳಲು ತೋಡಿಕೊಂಡರು.<br /> <br /> ಸೋಮಶೇಖರ್ ಜ. 19ರಂದು ಬೆಳಿಗ್ಗೆ ಹೊಟ್ಟೆ ನೋವಿನ ಕಾರಣ ಮನೆಯಲ್ಲಿ ವಿಶ್ರಾಂತಿ ಪಡೆಯು ತ್ತಿದ್ದರು. ಜಿಲ್ಲಾ ಪೊಲೀಸ್ ಕಚೇರಿಯಿಂದ ದೂರವಾಣಿ ಕರೆ ಬಂದ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 3.15ರ ಸುಮಾರು ಕಚೇರಿಗೆ ಹೋಗುವುದಾಗಿ ತಿಳಿಸಿ ಬೈಕಿನಲ್ಲಿ ಹೋದವರು ಇದುವರೆಗೂ ವಾಪಸಾಗಿಲ್ಲ. ಈ ಬಗ್ಗೆ ಬಡಾವಣೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.<br /> <br /> ಸೋಮಶೇಖರ್ 13 ವರ್ಷಗಳಿಂದ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಕಾಣೆಯಾಗಿರುವುದಕ್ಕೆ ಕಾರಣ ತಿಳಿದಿಲ್ಲ. ಕುಟುಂಬ ವರ್ಗದವರು ಅವರ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸವಿತಾ ಅವರ ಸಂಬಂಧಿಗಳಾದ ಕೆ. ಶಿವರಾಮಪ್ಪ, ನಂದಿನಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>