<p><strong>ರಾಮನಗರ: </strong>ವ್ಯಕ್ತಿಯೊಬ್ಬ ತನ್ನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾಳಿಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.<br /> <br /> ಗ್ರಾಮದ ನಿವಾಸಿ ಸತೀಶ್ (35), ಮಂಜುಳಾ ಹಾಗೂ ಅವರ ಮಕ್ಕಳಾದ ವಿಜಯ್ (5), ಶ್ರೇಯಾ (3) ಮೃತರು. ಸತೀಶ್ ಕೂಲಿ ಕೆಲಸ ಮಾಡಿಕೊಂಡಿದ್ದರೆ, ಅವರ ಪತ್ನಿ ಗಾರ್ಮೆಂಟ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಈ ಕುಟುಂಬದವರು ಬುಧವಾರ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದು, ಗುರುವಾರ ಮುಂಜಾನೆ 9 ಗಂಟೆಯಾದರೂ ಮನೆಯ ಬಾಗಿಲು ತೆರೆದಿಲ್ಲ.</p>.<p>ಮಂಜುಳಾರ ತಾಯಿ ಹಾಗೂ ಸಹೋದರಿ ಸಮೀಪದಲ್ಲಿಯೇ ಮನೆ ಮಾಡಿಕೊಂಡಿದ್ದು, ಬೆಳಿಗ್ಗೆಯಾದರೂ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಮನೆಗೆ ಬಂದು ಕಿಟಕಿ ಮೂಲಕ ನೋಡಿದ್ದಾರೆ. ಈ ಸಂದರ್ಭ ಛಾವಣಿಯಲ್ಲಿ ಸತೀಶ್ ಶವ ನೇತಾಡುತ್ತಿರುವುದು ಕಂಡು ಬಂತು. ಬಾಗಿಲು ಒಡೆದು ಒಳಹೋದ ಬಳಿಕ ಉಳಿದ ಮೂವರೂ ಮೃತಪಟ್ಟಿರುವುದು ಕಂಡುಬಂತು ಎಂದು ಕುಂಬಳಗೋಡು ಠಾಣೆ ಪೊಲೀಸರು ತಿಳಿಸಿದರು.<br /> <br /> ಸತೀಶ್ ತನ್ನ ಪತ್ನಿ ಹಾಗೂ ಮಕ್ಕಳನ್ನು ಟವಲ್ನಿಂದ ಗುತ್ತಿಗೆಗೆ ಬಿಗಿದು ಕೊಂದು ಬಳಿಕ ತಾನೂ ಆತ್ಮಹತ್ಮೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಶವಗಳ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ವ್ಯಕ್ತಿಯೊಬ್ಬ ತನ್ನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾಳಿಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.<br /> <br /> ಗ್ರಾಮದ ನಿವಾಸಿ ಸತೀಶ್ (35), ಮಂಜುಳಾ ಹಾಗೂ ಅವರ ಮಕ್ಕಳಾದ ವಿಜಯ್ (5), ಶ್ರೇಯಾ (3) ಮೃತರು. ಸತೀಶ್ ಕೂಲಿ ಕೆಲಸ ಮಾಡಿಕೊಂಡಿದ್ದರೆ, ಅವರ ಪತ್ನಿ ಗಾರ್ಮೆಂಟ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಈ ಕುಟುಂಬದವರು ಬುಧವಾರ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದು, ಗುರುವಾರ ಮುಂಜಾನೆ 9 ಗಂಟೆಯಾದರೂ ಮನೆಯ ಬಾಗಿಲು ತೆರೆದಿಲ್ಲ.</p>.<p>ಮಂಜುಳಾರ ತಾಯಿ ಹಾಗೂ ಸಹೋದರಿ ಸಮೀಪದಲ್ಲಿಯೇ ಮನೆ ಮಾಡಿಕೊಂಡಿದ್ದು, ಬೆಳಿಗ್ಗೆಯಾದರೂ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಮನೆಗೆ ಬಂದು ಕಿಟಕಿ ಮೂಲಕ ನೋಡಿದ್ದಾರೆ. ಈ ಸಂದರ್ಭ ಛಾವಣಿಯಲ್ಲಿ ಸತೀಶ್ ಶವ ನೇತಾಡುತ್ತಿರುವುದು ಕಂಡು ಬಂತು. ಬಾಗಿಲು ಒಡೆದು ಒಳಹೋದ ಬಳಿಕ ಉಳಿದ ಮೂವರೂ ಮೃತಪಟ್ಟಿರುವುದು ಕಂಡುಬಂತು ಎಂದು ಕುಂಬಳಗೋಡು ಠಾಣೆ ಪೊಲೀಸರು ತಿಳಿಸಿದರು.<br /> <br /> ಸತೀಶ್ ತನ್ನ ಪತ್ನಿ ಹಾಗೂ ಮಕ್ಕಳನ್ನು ಟವಲ್ನಿಂದ ಗುತ್ತಿಗೆಗೆ ಬಿಗಿದು ಕೊಂದು ಬಳಿಕ ತಾನೂ ಆತ್ಮಹತ್ಮೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಶವಗಳ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>