<p><strong>ಬೆಂಗಳೂರು:</strong> ಕನ್ನಡ ಪತ್ರಿಕೋದ್ಯಮದ ಹಿರಿಮೆಯನ್ನು ಉಳಿಸುವ ಜವಾಬ್ದಾರಿ ಇಂದಿನ ಪತ್ರಕರ್ತರ ಮೇಲಿದೆ ಎಂದು ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ಅಭಿಪ್ರಾಯಪಟ್ಟರು.<br /> <br /> ಪತ್ರಿಕೋದ್ಯಮದಲ್ಲಿ ಇಂದು ಅವಸರದ ಪ್ರವೃತ್ತಿ ಇದೆ. ಕಲುಷಿತಗೊಳ್ಳುತ್ತಿರುವ ವಾತಾವರಣದಲ್ಲಿ ಭ್ರಷ್ಟಾಚಾರವೂ ಸೇರಿಕೊಂಡಿದೆ. ಅವಸರದ ಬರವಣಿಗೆಗೆ ಒಗ್ಗಿಕೊಳ್ಳುವ ಮುನ್ನ ಕಿರಿಯ ಪರ್ತಕರ್ತರು ಆಲೋಚನಾ ಶಕ್ತಿಯನ್ನು ಕಳೆದುಕೊಂಡಿರುವುದು ವಿಷಾದನೀಯ ಎಂದು ಅವರು ಹೇಳಿದರು.<br /> <br /> ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ 36 ಹಿರಿಯ/ಕಿರಿಯ ಪತ್ರಕರ್ತರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸನ್ಮಾನಿಸಿ ಅಭಿನಂದಿಸಿದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.<br /> <br /> 78 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಎಲ್ಲ ಪತ್ರಕರ್ತರ ಹಿತ ಕಾಯುವ ಮಾತೃಸಂಸ್ಥೆಯಾಗಿದ್ದು, ಈ ಸಂಘದ ಅಭಿನಂದನೆ ಸ್ವೀಕರಿಸುವುದು ಎಲ್ಲ ಪ್ರಶಸ್ತಿಗಿಂತ ದೊಡ್ಡದು ಎಂದು ಸನ್ಮಾನಿತರ ಪರವಾಗಿ ಮಾತನಾಡಿದ ಪ್ರಜಾವಾಣಿ ಸಹ ಸಂಪಾದಕ ಪದ್ಮರಾಜ ದಂಡಾವತಿ, ಕನ್ನಡ ಪ್ರಭ ಸಂಪಾದಕ ವಿಶ್ವೇಶ್ವರ ಭಟ್, ಶ್ರೀಮತಿ ಕಿರಣ್ಮಯಿ, ತೊ.ಚ.ಅನಂತಸುಬ್ಬರಾವ್ ಅಭಿಪ್ರಾಯ ಪಟ್ಟರು.<br /> <br /> ಸಮಾರಂಭದಲ್ಲಿ ಪ್ರೆಸ್ ಇನ್ಫಾರ್ಮೆಷನ್ ಬ್ಯೂರೊ ಜಂಟಿ ನಿರ್ದೇಶಕಿ ಶ್ರೀಮತಿ ಪಲ್ಲವಿ ಚಿನ್ಯ ಮುಖ್ಯ ಅತಿಥಿಗಳಾಗಿದ್ದರು. ಹಿರಿಯ ಪತ್ರಕರ್ತರಾದ ಎಚ್.ಎಸ್.ದೊರೆಸ್ವಾಮಿ, ಎಸ್.ವಿ.ಜಯಶೀಲರಾವ್, ಪಿ.ರಾಮಯ್ಯ, ಪ್ರಜಾವಾಣಿ ಸಂಪಾದಕ ಕೆ.ಎನ್. ಶಾಂತಕುಮಾರ್ ಅವರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.<br /> <br /> ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಎಸ್.ಸುಧೀಂದ್ರಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಗಂಗಾಧರ ಮೊದಲಿಯಾರ್ ಸ್ವಾಗತಿಸಿದರು. ಸಿ.ಜಿ.ಲೋಕೇಶ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಮಂಡಿಬೆಲೆ ರಾಜಣ್ಣ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನ್ನಡ ಪತ್ರಿಕೋದ್ಯಮದ ಹಿರಿಮೆಯನ್ನು ಉಳಿಸುವ ಜವಾಬ್ದಾರಿ ಇಂದಿನ ಪತ್ರಕರ್ತರ ಮೇಲಿದೆ ಎಂದು ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ಅಭಿಪ್ರಾಯಪಟ್ಟರು.<br /> <br /> ಪತ್ರಿಕೋದ್ಯಮದಲ್ಲಿ ಇಂದು ಅವಸರದ ಪ್ರವೃತ್ತಿ ಇದೆ. ಕಲುಷಿತಗೊಳ್ಳುತ್ತಿರುವ ವಾತಾವರಣದಲ್ಲಿ ಭ್ರಷ್ಟಾಚಾರವೂ ಸೇರಿಕೊಂಡಿದೆ. ಅವಸರದ ಬರವಣಿಗೆಗೆ ಒಗ್ಗಿಕೊಳ್ಳುವ ಮುನ್ನ ಕಿರಿಯ ಪರ್ತಕರ್ತರು ಆಲೋಚನಾ ಶಕ್ತಿಯನ್ನು ಕಳೆದುಕೊಂಡಿರುವುದು ವಿಷಾದನೀಯ ಎಂದು ಅವರು ಹೇಳಿದರು.<br /> <br /> ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ 36 ಹಿರಿಯ/ಕಿರಿಯ ಪತ್ರಕರ್ತರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸನ್ಮಾನಿಸಿ ಅಭಿನಂದಿಸಿದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.<br /> <br /> 78 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಎಲ್ಲ ಪತ್ರಕರ್ತರ ಹಿತ ಕಾಯುವ ಮಾತೃಸಂಸ್ಥೆಯಾಗಿದ್ದು, ಈ ಸಂಘದ ಅಭಿನಂದನೆ ಸ್ವೀಕರಿಸುವುದು ಎಲ್ಲ ಪ್ರಶಸ್ತಿಗಿಂತ ದೊಡ್ಡದು ಎಂದು ಸನ್ಮಾನಿತರ ಪರವಾಗಿ ಮಾತನಾಡಿದ ಪ್ರಜಾವಾಣಿ ಸಹ ಸಂಪಾದಕ ಪದ್ಮರಾಜ ದಂಡಾವತಿ, ಕನ್ನಡ ಪ್ರಭ ಸಂಪಾದಕ ವಿಶ್ವೇಶ್ವರ ಭಟ್, ಶ್ರೀಮತಿ ಕಿರಣ್ಮಯಿ, ತೊ.ಚ.ಅನಂತಸುಬ್ಬರಾವ್ ಅಭಿಪ್ರಾಯ ಪಟ್ಟರು.<br /> <br /> ಸಮಾರಂಭದಲ್ಲಿ ಪ್ರೆಸ್ ಇನ್ಫಾರ್ಮೆಷನ್ ಬ್ಯೂರೊ ಜಂಟಿ ನಿರ್ದೇಶಕಿ ಶ್ರೀಮತಿ ಪಲ್ಲವಿ ಚಿನ್ಯ ಮುಖ್ಯ ಅತಿಥಿಗಳಾಗಿದ್ದರು. ಹಿರಿಯ ಪತ್ರಕರ್ತರಾದ ಎಚ್.ಎಸ್.ದೊರೆಸ್ವಾಮಿ, ಎಸ್.ವಿ.ಜಯಶೀಲರಾವ್, ಪಿ.ರಾಮಯ್ಯ, ಪ್ರಜಾವಾಣಿ ಸಂಪಾದಕ ಕೆ.ಎನ್. ಶಾಂತಕುಮಾರ್ ಅವರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.<br /> <br /> ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಎಸ್.ಸುಧೀಂದ್ರಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಗಂಗಾಧರ ಮೊದಲಿಯಾರ್ ಸ್ವಾಗತಿಸಿದರು. ಸಿ.ಜಿ.ಲೋಕೇಶ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಮಂಡಿಬೆಲೆ ರಾಜಣ್ಣ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>