<p><strong>ರಿಪ್ಪನ್ಪೇಟೆ:</strong> ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ವಲಯ ಅರಣ್ಯಾಧಿಕಾರಿ ಬಿ.ಎ. ರವೀಂದ್ರ ಅವರು ಹಸಿರೀಕರಣಕ್ಕೆ ಚಾಲನೆ ನೀಡಿದರು.<br /> <br /> ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಕ್ರಿಟ್ ನಾಡಿನ ಮೇಲುಗೈ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇದರಿಂದ ಜನ ಜೀವನ ಹದಗೆಡುತ್ತಿರುವುದರಿಂದ ಪ್ರತಿ ಯೊಬ್ಬರು ಪರಿಸರ ಪ್ರಜ್ಞೆಯನ್ನು ಬೆಳಸಿಕೊಳ್ಳುವುದರ ಮೂಲಕ ಸಸ್ಯ ಸಂಪತ್ತನ್ನು ಹೆಚ್ಚಿಸಬೇಕು ಎಂದರು.<br /> <br /> ಈಗಾಗಲೇ ರೈತರ ಬರಡು ಭೂಮಿ ಹಾಗೂ ಖಾತೆ ಜಾಗದಲ್ಲಿ ಅರಣ್ಯ ಗಿಡ ಬೆಳೆಸಲು ಇಲಾಖೆ ವತಿಯಿಂದ ಉತ್ತೇಜನ ನೀಡಲಾಗುತ್ತಿದೆ. ಅಲ್ಲದೆ ಸರ್ಕಾರದಿಂದ ಅದರ ರಕ್ಷಣೆಗೆ ಪ್ರೋತ್ಸಾಹ ಧನವನ್ನೂ ಸಹ ನೀಡಲಾಗುವುದು ಎಂದು ವಿವರಿಸಿದರು.<br /> <br /> ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ವೈ.ಕುಬೇರಪ್ಪ, ಉಪನ್ಯಾಸಕ ಜಯಶೀಲ , ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ವಲಯ ಅರಣ್ಯಾಧಿಕಾರಿ ಬಿ.ಎ. ರವೀಂದ್ರ ಅವರು ಹಸಿರೀಕರಣಕ್ಕೆ ಚಾಲನೆ ನೀಡಿದರು.<br /> <br /> ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಕ್ರಿಟ್ ನಾಡಿನ ಮೇಲುಗೈ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇದರಿಂದ ಜನ ಜೀವನ ಹದಗೆಡುತ್ತಿರುವುದರಿಂದ ಪ್ರತಿ ಯೊಬ್ಬರು ಪರಿಸರ ಪ್ರಜ್ಞೆಯನ್ನು ಬೆಳಸಿಕೊಳ್ಳುವುದರ ಮೂಲಕ ಸಸ್ಯ ಸಂಪತ್ತನ್ನು ಹೆಚ್ಚಿಸಬೇಕು ಎಂದರು.<br /> <br /> ಈಗಾಗಲೇ ರೈತರ ಬರಡು ಭೂಮಿ ಹಾಗೂ ಖಾತೆ ಜಾಗದಲ್ಲಿ ಅರಣ್ಯ ಗಿಡ ಬೆಳೆಸಲು ಇಲಾಖೆ ವತಿಯಿಂದ ಉತ್ತೇಜನ ನೀಡಲಾಗುತ್ತಿದೆ. ಅಲ್ಲದೆ ಸರ್ಕಾರದಿಂದ ಅದರ ರಕ್ಷಣೆಗೆ ಪ್ರೋತ್ಸಾಹ ಧನವನ್ನೂ ಸಹ ನೀಡಲಾಗುವುದು ಎಂದು ವಿವರಿಸಿದರು.<br /> <br /> ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ವೈ.ಕುಬೇರಪ್ಪ, ಉಪನ್ಯಾಸಕ ಜಯಶೀಲ , ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>