<p><strong>ಬಳ್ಳಾರಿ:</strong> ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳ ಪ್ರಸಕ್ತ ಸಾಲಿನ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಿದ್ದ ವಿಶ್ವವಿದ್ಯಾಲಯವು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ)ಯ ಜಿಲ್ಲಾ ಘಟಕದ ಮನವಿಯ ಮೇರೆಗೆ ಶುಲ್ಕ ಕಡಿಮೆ ಮಾಡಲು ಒಪ್ಪಿಗೆ ಸೂಚಿಸಿದೆ.<br /> <br /> ಇತ್ತೀಚೆಗಷ್ಟೇ ನಗರದ ಸರಳಾದೇವಿ ಸತೀಶಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸಿ ಸಂಘಟನೆ ಸಲ್ಲಿಸಿದ್ದ ಮನವಿಯ ಮೇರೆಗೆ ವಿವಿ ಕುಲಪತಿಯವರು ಶುಲ್ಕ ಹೆಚ್ಚಳವನ್ನು ಕಡಿಮೆ ಮಾಡಲು ಒಪ್ಪಿದ್ದಾರೆ.<br /> <br /> ಶುಕ್ರವಾರ ವಿಶ್ವವಿದ್ಯಾಲಯಕ್ಕೆ ತೆರಳಿದ ಸಂಘಟನೆಯ ನಿಯೋಗ ಈ ಕುರಿತ ಸಲ್ಲಿಸಿದ ಮನವಿ ಸ್ವೀಕರಿಸಿದ ಕುಲಪತಿ ಡಾ.ಮಂಜಪ್ಪ ಹೊಸಮನೆ, ವಿವಿ ವ್ಯಾಪ್ತಿಯ ಎಲ್ಲ ಸರ್ಕಾರಿ ಪದವಿ ಕಾಲೇಜುಗಳ ಪ್ರವೇಶ ಶುಲ್ಕವನ್ನು ಈ ಸಾಲಿನಿಂದ ರೂ 200ರಷ್ಟು ಹೆಚ್ಚಳ ಮಾಡಲಾಗಿದ್ದು, ಅದರಲ್ಲಿ ರೂ 100 ಕಡಿಮೆ ಮಾಡಲಾಗುವುದು ಎಂದು ಭರವಸೆ ನೀಡಿದರು.<br /> <br /> ಈಗಾಗಲೇ ಸ್ವೀಕರಿಸಲಾಗಿರುವ ಹೆಚ್ಚುವರಿ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಮರಳಿಸುವಂತೆ ಎಲ್ಲ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು.<br /> <br /> ಸಂಘದ ಜಿಲ್ಲಾ ಕಾರ್ಯದರ್ಶಿ ಗೋವಿಂದ್, ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ, ಸದಸ್ಯರಾದ ಯರಿಸ್ವಾಮಿ, ಸುರೇಶ, ರಘು, ವಿನೂತ್, ಸಲೀಂ ಈ ಸಂದರ್ಭ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳ ಪ್ರಸಕ್ತ ಸಾಲಿನ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಿದ್ದ ವಿಶ್ವವಿದ್ಯಾಲಯವು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ)ಯ ಜಿಲ್ಲಾ ಘಟಕದ ಮನವಿಯ ಮೇರೆಗೆ ಶುಲ್ಕ ಕಡಿಮೆ ಮಾಡಲು ಒಪ್ಪಿಗೆ ಸೂಚಿಸಿದೆ.<br /> <br /> ಇತ್ತೀಚೆಗಷ್ಟೇ ನಗರದ ಸರಳಾದೇವಿ ಸತೀಶಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸಿ ಸಂಘಟನೆ ಸಲ್ಲಿಸಿದ್ದ ಮನವಿಯ ಮೇರೆಗೆ ವಿವಿ ಕುಲಪತಿಯವರು ಶುಲ್ಕ ಹೆಚ್ಚಳವನ್ನು ಕಡಿಮೆ ಮಾಡಲು ಒಪ್ಪಿದ್ದಾರೆ.<br /> <br /> ಶುಕ್ರವಾರ ವಿಶ್ವವಿದ್ಯಾಲಯಕ್ಕೆ ತೆರಳಿದ ಸಂಘಟನೆಯ ನಿಯೋಗ ಈ ಕುರಿತ ಸಲ್ಲಿಸಿದ ಮನವಿ ಸ್ವೀಕರಿಸಿದ ಕುಲಪತಿ ಡಾ.ಮಂಜಪ್ಪ ಹೊಸಮನೆ, ವಿವಿ ವ್ಯಾಪ್ತಿಯ ಎಲ್ಲ ಸರ್ಕಾರಿ ಪದವಿ ಕಾಲೇಜುಗಳ ಪ್ರವೇಶ ಶುಲ್ಕವನ್ನು ಈ ಸಾಲಿನಿಂದ ರೂ 200ರಷ್ಟು ಹೆಚ್ಚಳ ಮಾಡಲಾಗಿದ್ದು, ಅದರಲ್ಲಿ ರೂ 100 ಕಡಿಮೆ ಮಾಡಲಾಗುವುದು ಎಂದು ಭರವಸೆ ನೀಡಿದರು.<br /> <br /> ಈಗಾಗಲೇ ಸ್ವೀಕರಿಸಲಾಗಿರುವ ಹೆಚ್ಚುವರಿ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಮರಳಿಸುವಂತೆ ಎಲ್ಲ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು.<br /> <br /> ಸಂಘದ ಜಿಲ್ಲಾ ಕಾರ್ಯದರ್ಶಿ ಗೋವಿಂದ್, ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ, ಸದಸ್ಯರಾದ ಯರಿಸ್ವಾಮಿ, ಸುರೇಶ, ರಘು, ವಿನೂತ್, ಸಲೀಂ ಈ ಸಂದರ್ಭ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>