<p>ಚಿಕ್ಕಮಗಳೂರು: ನೈರುತ್ಯ ಪದವೀ ಧರರ ಕ್ಷೇತ್ರ ವ್ಯಾಪ್ತಿಯ ಪದವೀಧರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಫೆ. 5ರವರೆಗೆ ಅವಕಾಶವಿದೆ. ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದವರು ತಕ್ಷಣವೇ ನೋಂದಣಿ ಮಾಡಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಮನವಿ ಮಾಡಿದರು. <br /> <br /> ಆರು ಜಿಲ್ಲೆಗಳನ್ನು ಒಳಗೊಂಡ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಈ ಬಾರಿಯೂ ಪಕ್ಷ ನನ್ನನ್ನೇ ಅಭ್ಯರ್ಥಿ ಯಾಗಿ ಪ್ರಕಟಿಸಿದೆ. ಇದೇ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದು, ಉತ್ತಮವಾಗಿ ಕೆಲಸ ಮಾಡಿದ್ದೇನೆ ಎಂದು ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ಈ ಬಾರಿ ಯುವಕರಿಗೆ ಟಿಕೆಟ್ ನೀಡ ಬೇಕೆನ್ನುವ ಅಭಿಪ್ರಾಯ ಪಕ್ಷ ಮತ್ತು ಸಂಘ ಪರಿವಾರದವರು ವ್ಯಕ್ತಪಡಿ ಸಿದ್ದರಲ್ಲವೇ? ಎಂದು ಪ್ರಶ್ನಿಸಿದಾಗ, ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದೇನೆ. ರಾಜ್ಯ ಘಟಕ ನನ್ನನ್ನೇ ಪಕ್ಷದ ಅಭ್ಯರ್ಥಿಯಾಗಿ ಅವಿರೋಧ ಆಯ್ಕೆ ಮಾಡಿದೆ. ಈ ಹಿಂದೆ ಅತ್ಯಧಿಕ ಮತ ಗಳಿಂದ ಗೆಲುವು ಸಾಧಿಸಿದ್ದೇನೆ. ಈ ಬಾರಿ ಯೂ ಅಷ್ಟೇ ವಿಶ್ವಾಸವಿದೆ ಎಂದರು.<br /> <br /> ಸಿ.ಟಿ.ರವಿ ರವಿ, ಪ್ರೇಂಕುಮಾರ್, ಬಿ.ರಾಜಪ್ಪ, ಡಿ.ಕೆ.ನಿಂಗೇಗೌಡ, ವರಸಿದ್ದಿವೇಣು, ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ನೈರುತ್ಯ ಪದವೀ ಧರರ ಕ್ಷೇತ್ರ ವ್ಯಾಪ್ತಿಯ ಪದವೀಧರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಫೆ. 5ರವರೆಗೆ ಅವಕಾಶವಿದೆ. ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದವರು ತಕ್ಷಣವೇ ನೋಂದಣಿ ಮಾಡಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಮನವಿ ಮಾಡಿದರು. <br /> <br /> ಆರು ಜಿಲ್ಲೆಗಳನ್ನು ಒಳಗೊಂಡ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಈ ಬಾರಿಯೂ ಪಕ್ಷ ನನ್ನನ್ನೇ ಅಭ್ಯರ್ಥಿ ಯಾಗಿ ಪ್ರಕಟಿಸಿದೆ. ಇದೇ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದು, ಉತ್ತಮವಾಗಿ ಕೆಲಸ ಮಾಡಿದ್ದೇನೆ ಎಂದು ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ಈ ಬಾರಿ ಯುವಕರಿಗೆ ಟಿಕೆಟ್ ನೀಡ ಬೇಕೆನ್ನುವ ಅಭಿಪ್ರಾಯ ಪಕ್ಷ ಮತ್ತು ಸಂಘ ಪರಿವಾರದವರು ವ್ಯಕ್ತಪಡಿ ಸಿದ್ದರಲ್ಲವೇ? ಎಂದು ಪ್ರಶ್ನಿಸಿದಾಗ, ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದೇನೆ. ರಾಜ್ಯ ಘಟಕ ನನ್ನನ್ನೇ ಪಕ್ಷದ ಅಭ್ಯರ್ಥಿಯಾಗಿ ಅವಿರೋಧ ಆಯ್ಕೆ ಮಾಡಿದೆ. ಈ ಹಿಂದೆ ಅತ್ಯಧಿಕ ಮತ ಗಳಿಂದ ಗೆಲುವು ಸಾಧಿಸಿದ್ದೇನೆ. ಈ ಬಾರಿ ಯೂ ಅಷ್ಟೇ ವಿಶ್ವಾಸವಿದೆ ಎಂದರು.<br /> <br /> ಸಿ.ಟಿ.ರವಿ ರವಿ, ಪ್ರೇಂಕುಮಾರ್, ಬಿ.ರಾಜಪ್ಪ, ಡಿ.ಕೆ.ನಿಂಗೇಗೌಡ, ವರಸಿದ್ದಿವೇಣು, ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>