<p><strong>ಬೆಂಗಳೂರು: </strong>ಪಕ್ಷದ ಬೂತ್ ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಪದಾಧಿಕಾರಿಗಳಿಗೆ ಇದೇ 15ರ ನಂತರ ತರಬೇತಿ ಶಿಬಿರ ಆಯೋಜಿಸಲು ಕೆಪಿಸಿಸಿ ನಿರ್ಧರಿಸಿದೆ. ಅಲ್ಲದೆ, ಅಕ್ಟೋಬರ್ 2ರ ನಂತರ ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ `ಮತದಾರರೊಂದಿಗೆ ಮುಖಾಮುಖಿ~ ಕಾರ್ಯಕ್ರಮ ಆರಂಭಿಸಲೂ ಪಕ್ಷ ನಿರ್ಧರಿಸಿದೆ.<br /> <br /> ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ವಕ್ತಾರ ಬಿ.ಎಲ್. ಶಂಕರ್, `ಕಾಂಗ್ರೆಸ್ ನಡಿಗೆ ಜನರ ಬಳಿಗೆ~ ಕಾರ್ಯಕ್ರಮದ ಸಂಚಾಲಕ ಕಾಗೋಡು ತಿಮ್ಮಪ್ಪ ಮತ್ತು ಮಾಜಿ ಶಾಸಕ ಎನ್.ಎಸ್. ಬೋಸರಾಜು ಈ ವಿಷಯ ತಿಳಿಸಿದರು.<br /> <br /> `ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಜನರಿಗೆ ಕಾಂಗ್ರೆಸ್ ಪಕ್ಷ ಏಕೆ ಅಗತ್ಯ ಎಂಬ ವಿಷಯವನ್ನು ಕೇಂದ್ರವಾಗಿಟ್ಟುಕೊಂಡು ತರಬೇತಿ ಶಿಬಿರ ನಡೆಯಲಿದೆ. ಮಾಜಿ ಶಾಸಕ ಮಹಿಮಾ ಪಟೇಲ್ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರಾದ ವಿ.ಆರ್. ಸುದರ್ಶನ್, ಡಾ. ಕೃಪಾ ಆಳ್ವ ಮತ್ತಿತರರು ಈ ಶಿಬಿರದ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿದ್ದಾರೆ~ ಎಂದು ಶಂಕರ್ ತಿಳಿಸಿದರು.<br /> <br /> <strong>ಮತದಾರರೊಂದಿಗೆ ಮುಖಾಮುಖಿ:</strong> ಅಕ್ಟೋಬರ್ 2ರಿಂದ ಪಕ್ಷದ ಮುಖಂಡರು ರಾಜ್ಯದ ಎಲ್ಲ ಮತಗಟ್ಟೆಗಳಿಗೆ ತೆರಳಿ ಅಲ್ಲಿನ ಮತದಾರರನ್ನು ಭೇಟಿಮಾಡಿ, ಪಂಚಾಯಿತಿ ಮತ್ತು ವಾರ್ಡ್ ಮಟ್ಟದ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಇದು ಮೂರು ತಿಂಗಳ ಕಾರ್ಯಕ್ರಮ. ಕಾರ್ಯಕರ್ತರನ್ನು ಆಧರಿಸಿದ ಪಕ್ಷವನ್ನಾಗಿ ಬೆಳೆಸುವ ಉದ್ದೇಶ ಈ ಕಾರ್ಯಕ್ರಮಕ್ಕಿದೆ ಎಂದು ತಿಳಿಸಿದರು.<br /> <br /> ಇನ್ನು ಮುಂದೆ ಪಕ್ಷ ದೊಡ್ಡ ಪ್ರಮಾಣದ ಸಭೆ, ಸಮಾರಂಭಗಳನ್ನು ಆಯೋಜಿಸುವುದಕ್ಕಿಂತ ಜನಸಾಮಾನ್ಯರನ್ನು ನೇರವಾಗಿ ಭೇಟಿಮಾಡಲು ಹೆಚ್ಚಿನ ಆದ್ಯತೆ ನೀಡಲಿದೆ ಎಂದರು.<br /> <strong><br /> ಸಮಾರೋಪ:</strong> `ಕಾಂಗ್ರೆಸ್ ನಡಿಗೆ ಜನರ ಬಳಿಗೆ~ ಕಾರ್ಯಕ್ರಮದ ಸಮಾರೋಪ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಇದೇ 12ರಂದು ನಡೆಯಲಿದೆ. ಅದೇ ದಿನ ಸಂಜೆ ಕೊಪ್ಪಳದಲ್ಲಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯ ಚಾಲನೆ ಪಡೆಯಲಿದೆ ಎಂದು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪಕ್ಷದ ಬೂತ್ ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಪದಾಧಿಕಾರಿಗಳಿಗೆ ಇದೇ 15ರ ನಂತರ ತರಬೇತಿ ಶಿಬಿರ ಆಯೋಜಿಸಲು ಕೆಪಿಸಿಸಿ ನಿರ್ಧರಿಸಿದೆ. ಅಲ್ಲದೆ, ಅಕ್ಟೋಬರ್ 2ರ ನಂತರ ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ `ಮತದಾರರೊಂದಿಗೆ ಮುಖಾಮುಖಿ~ ಕಾರ್ಯಕ್ರಮ ಆರಂಭಿಸಲೂ ಪಕ್ಷ ನಿರ್ಧರಿಸಿದೆ.<br /> <br /> ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ವಕ್ತಾರ ಬಿ.ಎಲ್. ಶಂಕರ್, `ಕಾಂಗ್ರೆಸ್ ನಡಿಗೆ ಜನರ ಬಳಿಗೆ~ ಕಾರ್ಯಕ್ರಮದ ಸಂಚಾಲಕ ಕಾಗೋಡು ತಿಮ್ಮಪ್ಪ ಮತ್ತು ಮಾಜಿ ಶಾಸಕ ಎನ್.ಎಸ್. ಬೋಸರಾಜು ಈ ವಿಷಯ ತಿಳಿಸಿದರು.<br /> <br /> `ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಜನರಿಗೆ ಕಾಂಗ್ರೆಸ್ ಪಕ್ಷ ಏಕೆ ಅಗತ್ಯ ಎಂಬ ವಿಷಯವನ್ನು ಕೇಂದ್ರವಾಗಿಟ್ಟುಕೊಂಡು ತರಬೇತಿ ಶಿಬಿರ ನಡೆಯಲಿದೆ. ಮಾಜಿ ಶಾಸಕ ಮಹಿಮಾ ಪಟೇಲ್ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರಾದ ವಿ.ಆರ್. ಸುದರ್ಶನ್, ಡಾ. ಕೃಪಾ ಆಳ್ವ ಮತ್ತಿತರರು ಈ ಶಿಬಿರದ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿದ್ದಾರೆ~ ಎಂದು ಶಂಕರ್ ತಿಳಿಸಿದರು.<br /> <br /> <strong>ಮತದಾರರೊಂದಿಗೆ ಮುಖಾಮುಖಿ:</strong> ಅಕ್ಟೋಬರ್ 2ರಿಂದ ಪಕ್ಷದ ಮುಖಂಡರು ರಾಜ್ಯದ ಎಲ್ಲ ಮತಗಟ್ಟೆಗಳಿಗೆ ತೆರಳಿ ಅಲ್ಲಿನ ಮತದಾರರನ್ನು ಭೇಟಿಮಾಡಿ, ಪಂಚಾಯಿತಿ ಮತ್ತು ವಾರ್ಡ್ ಮಟ್ಟದ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಇದು ಮೂರು ತಿಂಗಳ ಕಾರ್ಯಕ್ರಮ. ಕಾರ್ಯಕರ್ತರನ್ನು ಆಧರಿಸಿದ ಪಕ್ಷವನ್ನಾಗಿ ಬೆಳೆಸುವ ಉದ್ದೇಶ ಈ ಕಾರ್ಯಕ್ರಮಕ್ಕಿದೆ ಎಂದು ತಿಳಿಸಿದರು.<br /> <br /> ಇನ್ನು ಮುಂದೆ ಪಕ್ಷ ದೊಡ್ಡ ಪ್ರಮಾಣದ ಸಭೆ, ಸಮಾರಂಭಗಳನ್ನು ಆಯೋಜಿಸುವುದಕ್ಕಿಂತ ಜನಸಾಮಾನ್ಯರನ್ನು ನೇರವಾಗಿ ಭೇಟಿಮಾಡಲು ಹೆಚ್ಚಿನ ಆದ್ಯತೆ ನೀಡಲಿದೆ ಎಂದರು.<br /> <strong><br /> ಸಮಾರೋಪ:</strong> `ಕಾಂಗ್ರೆಸ್ ನಡಿಗೆ ಜನರ ಬಳಿಗೆ~ ಕಾರ್ಯಕ್ರಮದ ಸಮಾರೋಪ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಇದೇ 12ರಂದು ನಡೆಯಲಿದೆ. ಅದೇ ದಿನ ಸಂಜೆ ಕೊಪ್ಪಳದಲ್ಲಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯ ಚಾಲನೆ ಪಡೆಯಲಿದೆ ಎಂದು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>