<p><strong>ನವದೆಹಲಿ (ಐಎಎನ್ಎಸ್): </strong>ತಿರುವನಂತಪುರದ ಶ್ರೀ ಪದ್ಮನಾಭ ಸ್ವಾಮಿ ದೇವಸ್ಥಾನದ `ಬಿ~ ನೆಲಮಾಳಿಗೆಯನ್ನು ತೆರೆಯಬಾರದು, ಈಗಾಗಲೇ ಶೋಧಿಸಿರುವ ಅಮೂಲ್ಯ ವಸ್ತುಗಳ ಭಾವಚಿತ್ರ ತೆಗೆಯಬಾರದು ಹಾಗೂ ವಿಡಿಯೊ ಚಿತ್ರೀಕರಣ ಮಾಡಬಾರದು ಎಂದು ತಿರುವಾಂಕೂರು ರಾಜಮನೆತನವು ಶುಕ್ರವಾರ ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಮನವಿಯಲ್ಲಿ ಕೋರಿದೆ.<br /> <br /> `ಬಿ~ ನೆಲಮಾಳಿಗೆ ತೆರೆಯುವುದು ದೇವಸ್ಥಾನದ ಸಂಪ್ರದಾಯ, ಆಚರಣೆ ಹಾಗೂ ಭಕ್ತರ ಭಾವನೆಗಳಿಗೆ ವಿರುದ್ಧವಾದುದು~ ಎಂದು ನ್ಯಾಯಮೂರ್ತಿಗಳಾದ ಆರ್.ವಿ.ರವೀಂದ್ರನ್ ಹಾಗೂ ಎ.ಕೆ.ಪಟ್ನಾಯಕ್ ಅವರನ್ನೊಳಗೊಂಡ ಪೀಠಕ್ಕೆ ಸಲ್ಲಿಸಿದ ಮನವಿಯಲ್ಲಿ ಹೇಳಲಾಗಿದೆ.<br /> <br /> ಸುಪ್ರೀಂಕೋರ್ಟ್ ನೇಮಿಸಿರುವ ಸಮಿತಿಯು ಬಿ~ ನೆಲಮಾಳಿಗೆಯನ್ನು ತೆರೆಯಬೇಕೋ, ಬೇಡವೋ ಎನ್ನುವ ನಿರ್ಧಾರವನ್ನು ದೇವಸ್ಥಾನದ ಪ್ರಧಾನ ಅರ್ಚಕರಿಗೆ ಬಿಟ್ಟಿರುವುದಕ್ಕೆ ಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಈ ನಡುವೆ ದೇವಸ್ಥಾನದ ಸಂಪತ್ತಿನ ಕುರಿತು ಸ್ಥಳೀಯ ಕೋರ್ಟ್ ಆಯುಕ್ತರ ವರದಿಯನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದೆ. ಇದೇ 12ರಂದು ಕೋರ್ಟ್ ಈ ಸಂಬಂಧದ ವಿಚಾರಣೆ ಕೈಗೆತ್ತಿಕೊಳ್ಳಲಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್): </strong>ತಿರುವನಂತಪುರದ ಶ್ರೀ ಪದ್ಮನಾಭ ಸ್ವಾಮಿ ದೇವಸ್ಥಾನದ `ಬಿ~ ನೆಲಮಾಳಿಗೆಯನ್ನು ತೆರೆಯಬಾರದು, ಈಗಾಗಲೇ ಶೋಧಿಸಿರುವ ಅಮೂಲ್ಯ ವಸ್ತುಗಳ ಭಾವಚಿತ್ರ ತೆಗೆಯಬಾರದು ಹಾಗೂ ವಿಡಿಯೊ ಚಿತ್ರೀಕರಣ ಮಾಡಬಾರದು ಎಂದು ತಿರುವಾಂಕೂರು ರಾಜಮನೆತನವು ಶುಕ್ರವಾರ ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಮನವಿಯಲ್ಲಿ ಕೋರಿದೆ.<br /> <br /> `ಬಿ~ ನೆಲಮಾಳಿಗೆ ತೆರೆಯುವುದು ದೇವಸ್ಥಾನದ ಸಂಪ್ರದಾಯ, ಆಚರಣೆ ಹಾಗೂ ಭಕ್ತರ ಭಾವನೆಗಳಿಗೆ ವಿರುದ್ಧವಾದುದು~ ಎಂದು ನ್ಯಾಯಮೂರ್ತಿಗಳಾದ ಆರ್.ವಿ.ರವೀಂದ್ರನ್ ಹಾಗೂ ಎ.ಕೆ.ಪಟ್ನಾಯಕ್ ಅವರನ್ನೊಳಗೊಂಡ ಪೀಠಕ್ಕೆ ಸಲ್ಲಿಸಿದ ಮನವಿಯಲ್ಲಿ ಹೇಳಲಾಗಿದೆ.<br /> <br /> ಸುಪ್ರೀಂಕೋರ್ಟ್ ನೇಮಿಸಿರುವ ಸಮಿತಿಯು ಬಿ~ ನೆಲಮಾಳಿಗೆಯನ್ನು ತೆರೆಯಬೇಕೋ, ಬೇಡವೋ ಎನ್ನುವ ನಿರ್ಧಾರವನ್ನು ದೇವಸ್ಥಾನದ ಪ್ರಧಾನ ಅರ್ಚಕರಿಗೆ ಬಿಟ್ಟಿರುವುದಕ್ಕೆ ಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಈ ನಡುವೆ ದೇವಸ್ಥಾನದ ಸಂಪತ್ತಿನ ಕುರಿತು ಸ್ಥಳೀಯ ಕೋರ್ಟ್ ಆಯುಕ್ತರ ವರದಿಯನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದೆ. ಇದೇ 12ರಂದು ಕೋರ್ಟ್ ಈ ಸಂಬಂಧದ ವಿಚಾರಣೆ ಕೈಗೆತ್ತಿಕೊಳ್ಳಲಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>