<p>ನವದೆಹಲಿ (ಐಎಎನ್ ಎಸ್): ಕೇರಳದ ಶ್ರೀ ಪದ್ಮನಾಭ ಸ್ವಾಮಿ ದೇವಾಲಯದ ನೆಲಮಾಳಿಗೆಗಳಲ್ಲಿ ಪತ್ತೆಯಾದ ಭಾರಿ ಪ್ರಮಾಣದ ಅತ್ಯಮೂಲ್ಯ ಚಿನ್ನಾಭರಣಗಳ ಭದ್ರತೆ ಮತ್ತು ಸುರಕ್ಷಿತ ಸಂರಕ್ಷಣೆಗೆ ಕ್ರಮಗಳನ್ನು ಕೈಗೊಂಡ ಬಳಿಕವಷ್ಟೇ ~ಬಿ~ ನೆಲಮಾಳಿಗೆ ತೆರೆಯುವ ವಿಚಾರವನ್ನು ಪರಿಶೀಲಿಸಲಾಗುವುದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.<br /> <br /> ನ್ಯಾಯಮೂರ್ತಿ ಆರ್. ವಿ. ರವೀಂದ್ರನ್ ಮತ್ತು ನ್ಯಾಯಮೂರ್ತಿ ಎ.ಎಕ. ಪಟ್ನಾಯಿಕ್ ಅವರನ್ನು ಒಳಗೊಂಡ ಪೀಠವು ತಜ್ಞರ ಸಮಿತಿಯು ಇತರ ನೆಲ ಮಾಳಿಗೆಗಳಲ್ಲಿ ಪತ್ತೆಯಾದ ಅಮೂಲ್ಯ ವಸ್ತುಗಳ ಸಂರಕ್ಷಣೆಗೆ ಮಾಡಿದ ಶಿಫಾರಸುಗಳ ಬಗೆಗಿನ ತನ್ನ ಆದೇಶವನ್ನು ಕಾಯ್ದಿರಿಸುತ್ತಾ ಈ ವಿಚಾರವನ್ನು ತಿಳಿಸಿತು.<br /> <br /> ನ್ಯಾಯಾಲಯವು ತನ್ನ ತೀರ್ಮಾನವನ್ನು ಬುಧವಾರ ಪ್ರಕಟಿಸಲಿದೆ. ಸಂಪ್ರದಾಯಗಳು ಮತ್ತು ಭಕ್ತರ ನಂಬಿಕೆಗಳನ್ನು ನ್ಯಾಯಾಲಯವು ಎತ್ತಿ ಹಿಡಿಯುವುದು. ಆದರೆ ದೇವಾಲಯದ ಆಸ್ತಿ ಸಂರಕ್ಷಣೆಗೆ ಭದ್ರತೆ ಒದಗಿಸುವ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಅವರಿಗೆ ಅವಕಾಶ ನೀಡದು ಎಂದು ನ್ಯಾಯಮೂರ್ತಿ ರವೀಂದ್ರನ್ ಹೇಳಿದರು.<br /> <br /> ಸಂಪ್ರದಾಯ, ನಂಬಿಕೆ ಮತ್ತು ದೇವಾಲಯದ ನಿಧಿಗೆ ಭದ್ರತೆ ಒದಗಿಸುವುದಕ್ಕೆ ಸಂಬಂಧಿಸಿದಂತೆ ಎಲ್ಲೋ ಒಂದು ಕಡೆ ಹೊಂದಾಣಿಕೆ ಮಾಡಿಕೊಳ್ಳಬೇಕಾದ ಅಗತ್ಯ ಇದೆ ಎಂದೂ ನ್ಯಾಯಾಲಯ ಹೇಳಿತು.<br /> <br /> ಈವರೆಗೆ ತೆರೆಯಲಾಗಿರುವ ದೇವಾಲಯದ ಐದು ನೆಲಮಾಳಿಗೆಗಳಲ್ಲಿ ಪತ್ತೆಯಾದ ವಜ್ರಾಭರಣ, ಚಿನ್ನದ ವಿಗ್ರಹಗಳು ಮತ್ತು ನಾಣ್ಯಗಳ ಮೌಲ್ಯ ಒಂದು ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚು ಎಂದು ಅನಧಿಕೃತವಾಗಿ ಅಂದಾಜು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ ಎಸ್): ಕೇರಳದ ಶ್ರೀ ಪದ್ಮನಾಭ ಸ್ವಾಮಿ ದೇವಾಲಯದ ನೆಲಮಾಳಿಗೆಗಳಲ್ಲಿ ಪತ್ತೆಯಾದ ಭಾರಿ ಪ್ರಮಾಣದ ಅತ್ಯಮೂಲ್ಯ ಚಿನ್ನಾಭರಣಗಳ ಭದ್ರತೆ ಮತ್ತು ಸುರಕ್ಷಿತ ಸಂರಕ್ಷಣೆಗೆ ಕ್ರಮಗಳನ್ನು ಕೈಗೊಂಡ ಬಳಿಕವಷ್ಟೇ ~ಬಿ~ ನೆಲಮಾಳಿಗೆ ತೆರೆಯುವ ವಿಚಾರವನ್ನು ಪರಿಶೀಲಿಸಲಾಗುವುದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.<br /> <br /> ನ್ಯಾಯಮೂರ್ತಿ ಆರ್. ವಿ. ರವೀಂದ್ರನ್ ಮತ್ತು ನ್ಯಾಯಮೂರ್ತಿ ಎ.ಎಕ. ಪಟ್ನಾಯಿಕ್ ಅವರನ್ನು ಒಳಗೊಂಡ ಪೀಠವು ತಜ್ಞರ ಸಮಿತಿಯು ಇತರ ನೆಲ ಮಾಳಿಗೆಗಳಲ್ಲಿ ಪತ್ತೆಯಾದ ಅಮೂಲ್ಯ ವಸ್ತುಗಳ ಸಂರಕ್ಷಣೆಗೆ ಮಾಡಿದ ಶಿಫಾರಸುಗಳ ಬಗೆಗಿನ ತನ್ನ ಆದೇಶವನ್ನು ಕಾಯ್ದಿರಿಸುತ್ತಾ ಈ ವಿಚಾರವನ್ನು ತಿಳಿಸಿತು.<br /> <br /> ನ್ಯಾಯಾಲಯವು ತನ್ನ ತೀರ್ಮಾನವನ್ನು ಬುಧವಾರ ಪ್ರಕಟಿಸಲಿದೆ. ಸಂಪ್ರದಾಯಗಳು ಮತ್ತು ಭಕ್ತರ ನಂಬಿಕೆಗಳನ್ನು ನ್ಯಾಯಾಲಯವು ಎತ್ತಿ ಹಿಡಿಯುವುದು. ಆದರೆ ದೇವಾಲಯದ ಆಸ್ತಿ ಸಂರಕ್ಷಣೆಗೆ ಭದ್ರತೆ ಒದಗಿಸುವ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಅವರಿಗೆ ಅವಕಾಶ ನೀಡದು ಎಂದು ನ್ಯಾಯಮೂರ್ತಿ ರವೀಂದ್ರನ್ ಹೇಳಿದರು.<br /> <br /> ಸಂಪ್ರದಾಯ, ನಂಬಿಕೆ ಮತ್ತು ದೇವಾಲಯದ ನಿಧಿಗೆ ಭದ್ರತೆ ಒದಗಿಸುವುದಕ್ಕೆ ಸಂಬಂಧಿಸಿದಂತೆ ಎಲ್ಲೋ ಒಂದು ಕಡೆ ಹೊಂದಾಣಿಕೆ ಮಾಡಿಕೊಳ್ಳಬೇಕಾದ ಅಗತ್ಯ ಇದೆ ಎಂದೂ ನ್ಯಾಯಾಲಯ ಹೇಳಿತು.<br /> <br /> ಈವರೆಗೆ ತೆರೆಯಲಾಗಿರುವ ದೇವಾಲಯದ ಐದು ನೆಲಮಾಳಿಗೆಗಳಲ್ಲಿ ಪತ್ತೆಯಾದ ವಜ್ರಾಭರಣ, ಚಿನ್ನದ ವಿಗ್ರಹಗಳು ಮತ್ತು ನಾಣ್ಯಗಳ ಮೌಲ್ಯ ಒಂದು ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚು ಎಂದು ಅನಧಿಕೃತವಾಗಿ ಅಂದಾಜು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>