<p><strong>ಲಿಂಗಸುಗೂರ:</strong> ತಾಲ್ಲೂಕಿನ ಮುದಗಲ್ಲ ಪಟ್ಟಣ ಪಂಚಾಯಿತಿಯಲ್ಲಿ ಹತ್ತು ವರ್ಷಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ. ವಿವಿಧ ಯೋಜನೆಗಳಡಿ ಮಂಜೂರಾದ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪೌರಾಡಳಿತ ಸಚಿವರಿಗೆ ಬರೆದ ಮನವಿಪತ್ರವನ್ನು ಉಪವಿಭಾಗಾಧಿಕಾರಿ ಕಚೇರಿಯ ಶಿರಸ್ತೆದಾರರಾದ ಭಾನುಮತಿ ಅವರಿಗೆ ಸಲ್ಲಿಸಿದರು.<br /> <br /> `ಪಟ್ಟಣ ಪಂಚಾಯಿತಿಯಲ್ಲಿ ಈ ಹಿಂದೆ ತನಿಖೆಗೆ ಒಳಪಟ್ಟ ಪ್ರಕರಣಗಳನ್ನು ಮುಚ್ಚಿಟ್ಟು, ಆಡಳಿತ ನಡೆಸಲಾಗುತ್ತಿದೆ. ಆಡಳಿತಾಧಿಕಾರಿ ತಹಸೀಲ್ದಾರ ಮಹಾಜನ ಮತ್ತು ಮುಖ್ಯಾಧಿಕಾರಿ ವಿಜಯಲಕ್ಷ್ಮಿ ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಭಾರಿ ಭ್ರಷ್ಟಾಚಾರ ನಡೆಸಿದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು' ಎಂದು ಆಗ್ರಹಿಸಿದರು.<br /> <br /> ಈ ಹಿಂದೆ ವಾಣಿಜ್ಯ ಮಳಿಗೆಗಳನ್ನು 8-10 ಸಾವಿರ ರೂಪಾಯಿಗಳಿಗೆ ಒಂದರಂತೆ ಬಹಿರಂಗ ಹರಾಜು ಮಾಡಲಾಗಿತ್ತು. ಈಗ ವ್ಯಾಪಾರಸ್ಥರೊಂದಿಗೆ ಶ್ಯಾಮೀಲಾಗಿ ಕೇವಲ 3-4 ಸಾವಿರ ರೂಪಾಯಿಗಳಿಗೆ ಒಂದರಂತೆ ಬಾಡಿಗೆಗೆ ನೀಡಿ, ಭಾರಿ ವಂಚನೆ ಮಾಡಲಾಗಿದೆ ಎಂದು ಆರೋಪಿಸಿದರು.<br /> <br /> `ನಮ್ಮ ಮನೆ' ಯೋಜನೆಯಡಿ ಸಬ್ಸಿಡಿ ಚೆಕ್ ವಿತರಿಸಲು ಲಂಚ ಕೇಳಲಾಗುತ್ತಿದೆ. ಲಂಚ ನೀಡಲು ನಿರಾಕರಿಸಿದರೆ ಸಬ್ಸಿಡಿ ಚೆಕ್ ನೀಡದೆ ವಂಚನೆ ಮಾಡಲಾಗುತ್ತಿದೆ. ಪಟ್ಟಣ ಪಂಚಾಯಿತಿಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.<br /> <br /> ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಜಿಲಾನಿ ಪಾಷ, ಮುಖಂಡರಾದ ಶಿವರಾಜ, ಅಜೀಜ ಪಾಷ, ಆಂಜನೇಯ, ಬಿ.ಎಸ್. ನಾಯಕ, ಚಂದ್ರು, ಅಮರೇಶ, ನಿತೀನ್, ರಾಘು, ಯಲ್ಲಪ್ಪ, ರಾಕೇಶ, ಜಗದೀಶ, ತಿಪ್ಪಣ್ಣ, ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರ:</strong> ತಾಲ್ಲೂಕಿನ ಮುದಗಲ್ಲ ಪಟ್ಟಣ ಪಂಚಾಯಿತಿಯಲ್ಲಿ ಹತ್ತು ವರ್ಷಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ. ವಿವಿಧ ಯೋಜನೆಗಳಡಿ ಮಂಜೂರಾದ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪೌರಾಡಳಿತ ಸಚಿವರಿಗೆ ಬರೆದ ಮನವಿಪತ್ರವನ್ನು ಉಪವಿಭಾಗಾಧಿಕಾರಿ ಕಚೇರಿಯ ಶಿರಸ್ತೆದಾರರಾದ ಭಾನುಮತಿ ಅವರಿಗೆ ಸಲ್ಲಿಸಿದರು.<br /> <br /> `ಪಟ್ಟಣ ಪಂಚಾಯಿತಿಯಲ್ಲಿ ಈ ಹಿಂದೆ ತನಿಖೆಗೆ ಒಳಪಟ್ಟ ಪ್ರಕರಣಗಳನ್ನು ಮುಚ್ಚಿಟ್ಟು, ಆಡಳಿತ ನಡೆಸಲಾಗುತ್ತಿದೆ. ಆಡಳಿತಾಧಿಕಾರಿ ತಹಸೀಲ್ದಾರ ಮಹಾಜನ ಮತ್ತು ಮುಖ್ಯಾಧಿಕಾರಿ ವಿಜಯಲಕ್ಷ್ಮಿ ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಭಾರಿ ಭ್ರಷ್ಟಾಚಾರ ನಡೆಸಿದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು' ಎಂದು ಆಗ್ರಹಿಸಿದರು.<br /> <br /> ಈ ಹಿಂದೆ ವಾಣಿಜ್ಯ ಮಳಿಗೆಗಳನ್ನು 8-10 ಸಾವಿರ ರೂಪಾಯಿಗಳಿಗೆ ಒಂದರಂತೆ ಬಹಿರಂಗ ಹರಾಜು ಮಾಡಲಾಗಿತ್ತು. ಈಗ ವ್ಯಾಪಾರಸ್ಥರೊಂದಿಗೆ ಶ್ಯಾಮೀಲಾಗಿ ಕೇವಲ 3-4 ಸಾವಿರ ರೂಪಾಯಿಗಳಿಗೆ ಒಂದರಂತೆ ಬಾಡಿಗೆಗೆ ನೀಡಿ, ಭಾರಿ ವಂಚನೆ ಮಾಡಲಾಗಿದೆ ಎಂದು ಆರೋಪಿಸಿದರು.<br /> <br /> `ನಮ್ಮ ಮನೆ' ಯೋಜನೆಯಡಿ ಸಬ್ಸಿಡಿ ಚೆಕ್ ವಿತರಿಸಲು ಲಂಚ ಕೇಳಲಾಗುತ್ತಿದೆ. ಲಂಚ ನೀಡಲು ನಿರಾಕರಿಸಿದರೆ ಸಬ್ಸಿಡಿ ಚೆಕ್ ನೀಡದೆ ವಂಚನೆ ಮಾಡಲಾಗುತ್ತಿದೆ. ಪಟ್ಟಣ ಪಂಚಾಯಿತಿಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.<br /> <br /> ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಜಿಲಾನಿ ಪಾಷ, ಮುಖಂಡರಾದ ಶಿವರಾಜ, ಅಜೀಜ ಪಾಷ, ಆಂಜನೇಯ, ಬಿ.ಎಸ್. ನಾಯಕ, ಚಂದ್ರು, ಅಮರೇಶ, ನಿತೀನ್, ರಾಘು, ಯಲ್ಲಪ್ಪ, ರಾಕೇಶ, ಜಗದೀಶ, ತಿಪ್ಪಣ್ಣ, ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>