<p>ವಿರಾಜಪೇಟೆ: ವಿರಾಜಪೇಟೆಯ ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸ್ಥಳೀಯ ಶಾಖೆ ಸದಸ್ಯರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮಂಗಳವಾರ ಇಲ್ಲಿಯ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಿದರು.<br /> <br /> ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದಿಂದ ಗೋಣಿಕೊಪ್ಪ ರಸ್ತೆಗೆ ಹೋಗುವ ಸುಣ್ಣದ ಬೀದಿಯ ಕಾಂಕ್ರೀಟ್ ರಸ್ತೆ ಕಳಪೆಯಾಗಿದೆ. ರಸ್ತೆ ಸಂಚಾರದ ಆರಂಭದಿಂದಲೇ ಗುಂಡಿಗಳು ಕಾಣಿಸುತ್ತಿವೆ. ಗುತ್ತಿಗೆದಾರರ ಬಿಲ್ ತಡೆ ಹಿಡಿಯಬೇಕು ಎಂದು ಆಗ್ರಹಿಸಿದರು.<br /> <br /> ಪಟ್ಟಣ ಪಂಚಾಯಿತಿ ನಾಗರಿಕರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲಗೊಂಡಿದೆ. ಪಟ್ಟಣದ ಜನತೆಗೆ ನಲ್ಲಿ ನೀರು ಸಮರ್ಪಕವಾಗಿ ಪೂರೈಕೆಯಾಗದಿದ್ದರೂ ಪಂಚಾಯಿತಿ ಆಡಳಿತ ನೀರು ಪೂರೈಕೆಗೆ ಮೀಟರ್ ಅಳವಡಿಸಲು ಹೊರಟಿರುವುದಕ್ಕೆ ಸಂಘಟನೆಯ ವಿರೋಧವಿದೆ. <br /> <br /> ಪಂಚಾಯಿತಿ ಪಟ್ಟಣ ನೈರ್ಮಲ್ಯ ಕುರಿತು ನಿರ್ಲಕ್ಷ್ಯ ತಾಳಿದೆ. ಮುಖ್ಯ ಬೀದಿಗಳಲ್ಲಿ ಚರಂಡಿಯಲ್ಲಿ ದುರ್ವಾಸನೆ ಬರುತ್ತಿದೆ ಎಂದು ಸಂಘಟನೆ ದೂರಿದೆ. <br /> <br /> ಪ್ರತಿಭಟನೆಯಲ್ಲಿ ಸಂಘಟನೆ ಅಧ್ಯಕ್ಷ ಏಜಾಸ್ ಅಹಮ್ಮದ್, ಕಾರ್ಯದರ್ಶಿ ಮಹಮ್ಮದ್ ರಾಫಿ, ಇಬ್ರಾಹಿಂ ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.<br /> <br /> ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಿದ ಕಾರ್ಯಕರ್ತರು ಪಂಚಾಯಿತಿ ಅಧ್ಯಕ್ಷ ವಿ.ಕೆ.ಸತೀಶ್ಕುಮಾರ್ ಹಾಗೂ ತಹಶೀಲ್ದಾರ್ ಹನುಮಂತಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿರಾಜಪೇಟೆ: ವಿರಾಜಪೇಟೆಯ ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸ್ಥಳೀಯ ಶಾಖೆ ಸದಸ್ಯರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮಂಗಳವಾರ ಇಲ್ಲಿಯ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಿದರು.<br /> <br /> ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದಿಂದ ಗೋಣಿಕೊಪ್ಪ ರಸ್ತೆಗೆ ಹೋಗುವ ಸುಣ್ಣದ ಬೀದಿಯ ಕಾಂಕ್ರೀಟ್ ರಸ್ತೆ ಕಳಪೆಯಾಗಿದೆ. ರಸ್ತೆ ಸಂಚಾರದ ಆರಂಭದಿಂದಲೇ ಗುಂಡಿಗಳು ಕಾಣಿಸುತ್ತಿವೆ. ಗುತ್ತಿಗೆದಾರರ ಬಿಲ್ ತಡೆ ಹಿಡಿಯಬೇಕು ಎಂದು ಆಗ್ರಹಿಸಿದರು.<br /> <br /> ಪಟ್ಟಣ ಪಂಚಾಯಿತಿ ನಾಗರಿಕರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲಗೊಂಡಿದೆ. ಪಟ್ಟಣದ ಜನತೆಗೆ ನಲ್ಲಿ ನೀರು ಸಮರ್ಪಕವಾಗಿ ಪೂರೈಕೆಯಾಗದಿದ್ದರೂ ಪಂಚಾಯಿತಿ ಆಡಳಿತ ನೀರು ಪೂರೈಕೆಗೆ ಮೀಟರ್ ಅಳವಡಿಸಲು ಹೊರಟಿರುವುದಕ್ಕೆ ಸಂಘಟನೆಯ ವಿರೋಧವಿದೆ. <br /> <br /> ಪಂಚಾಯಿತಿ ಪಟ್ಟಣ ನೈರ್ಮಲ್ಯ ಕುರಿತು ನಿರ್ಲಕ್ಷ್ಯ ತಾಳಿದೆ. ಮುಖ್ಯ ಬೀದಿಗಳಲ್ಲಿ ಚರಂಡಿಯಲ್ಲಿ ದುರ್ವಾಸನೆ ಬರುತ್ತಿದೆ ಎಂದು ಸಂಘಟನೆ ದೂರಿದೆ. <br /> <br /> ಪ್ರತಿಭಟನೆಯಲ್ಲಿ ಸಂಘಟನೆ ಅಧ್ಯಕ್ಷ ಏಜಾಸ್ ಅಹಮ್ಮದ್, ಕಾರ್ಯದರ್ಶಿ ಮಹಮ್ಮದ್ ರಾಫಿ, ಇಬ್ರಾಹಿಂ ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.<br /> <br /> ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಿದ ಕಾರ್ಯಕರ್ತರು ಪಂಚಾಯಿತಿ ಅಧ್ಯಕ್ಷ ವಿ.ಕೆ.ಸತೀಶ್ಕುಮಾರ್ ಹಾಗೂ ತಹಶೀಲ್ದಾರ್ ಹನುಮಂತಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>