<p><strong>ಸಿರುಗುಪ್ಪ: </strong>ಪ್ರಾಚೀನ ಸ್ಮಾರಕಗಳು ಜನರಿಂದ ಕುರೂಪಗೊಳ್ಳುತ್ತಿವೆ. ಯುವ ವಿದ್ಯಾವಂತರು ತಮ್ಮ ಸುತ್ತಮುತ್ತಲಿನ ಪ್ರಾಚೀನ ಪರಂಪರೆಗಳನ್ನು ರಕ್ಷಿಸುವಲ್ಲಿ ಮುಂದಾಗುವಂತೆ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣರೆಡ್ಡಿ ಕರೆ ನೀಡಿದರು.<br /> <br /> ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಪ್ರಾಚ್ಯ ವಸ್ತು ಸಂಗ್ರಹಾಲಯ ಮತ್ತು ಪರಂಪರಾ ಕೂಟ ಮಂಗಳವಾರ ಹಮ್ಮಿಕೊಂಡ ಸ್ಮಾರಕಗಳ ಜಾಗೃತಿ ಜಾಥಾವನ್ನು ಉದ್ದೇಶಿಸಿ ಮಾತನಾಡಿದರು.<br /> <br /> ಪ್ರಾಚೀನ ಸ್ಮಾರಕಗಳ ರಕ್ಷಣೆ ನಮ್ಮೆಲರ್ಲ ಹೊಣೆಯಾಗಿದೆಯೆಂದು ಪರಂಪರೆಕೂಟದ ಸಂಚಾಲಕ ಎಚ್.ಈಶಪ್ಪ ಹೇಳಿ, ಪ್ರಾಚೀನ ಸ್ಮಾರಕಗಳು ನಮ್ಮ ಸಂಸ್ಕೃತಿಯ ಅಮೂಲ್ಯ ವಸ್ತುಗಳಾಗಿದ್ದು ಅವುಗಳ ನಾಶದಿಂದ ಗತಕಾಲದ ವೈಭವವನ್ನು ನಾಶಗೊಳಿಸಿದಂತಾಗುತ್ತದೆ ಎಂದರು.<br /> <br /> ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಕಾಲೇಜು ಆವರಣದಿಂದ ಪ್ರಾರಂಭಗೊಂಡು,ಗಾಂಧಿ ವೃತ್ತದವರೆಗೆ ಸಾಗಿ, ಪ್ರಾಚೀನ ಪರಂಪರೆಗಳ ಉಳಿವಿನ ಬಗ್ಗೆ ಘೋಷಣೆಗಳನ್ನು ಕೂಗಿದರು.ಈ ಜಾಥಾದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು, ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ: </strong>ಪ್ರಾಚೀನ ಸ್ಮಾರಕಗಳು ಜನರಿಂದ ಕುರೂಪಗೊಳ್ಳುತ್ತಿವೆ. ಯುವ ವಿದ್ಯಾವಂತರು ತಮ್ಮ ಸುತ್ತಮುತ್ತಲಿನ ಪ್ರಾಚೀನ ಪರಂಪರೆಗಳನ್ನು ರಕ್ಷಿಸುವಲ್ಲಿ ಮುಂದಾಗುವಂತೆ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣರೆಡ್ಡಿ ಕರೆ ನೀಡಿದರು.<br /> <br /> ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಪ್ರಾಚ್ಯ ವಸ್ತು ಸಂಗ್ರಹಾಲಯ ಮತ್ತು ಪರಂಪರಾ ಕೂಟ ಮಂಗಳವಾರ ಹಮ್ಮಿಕೊಂಡ ಸ್ಮಾರಕಗಳ ಜಾಗೃತಿ ಜಾಥಾವನ್ನು ಉದ್ದೇಶಿಸಿ ಮಾತನಾಡಿದರು.<br /> <br /> ಪ್ರಾಚೀನ ಸ್ಮಾರಕಗಳ ರಕ್ಷಣೆ ನಮ್ಮೆಲರ್ಲ ಹೊಣೆಯಾಗಿದೆಯೆಂದು ಪರಂಪರೆಕೂಟದ ಸಂಚಾಲಕ ಎಚ್.ಈಶಪ್ಪ ಹೇಳಿ, ಪ್ರಾಚೀನ ಸ್ಮಾರಕಗಳು ನಮ್ಮ ಸಂಸ್ಕೃತಿಯ ಅಮೂಲ್ಯ ವಸ್ತುಗಳಾಗಿದ್ದು ಅವುಗಳ ನಾಶದಿಂದ ಗತಕಾಲದ ವೈಭವವನ್ನು ನಾಶಗೊಳಿಸಿದಂತಾಗುತ್ತದೆ ಎಂದರು.<br /> <br /> ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಕಾಲೇಜು ಆವರಣದಿಂದ ಪ್ರಾರಂಭಗೊಂಡು,ಗಾಂಧಿ ವೃತ್ತದವರೆಗೆ ಸಾಗಿ, ಪ್ರಾಚೀನ ಪರಂಪರೆಗಳ ಉಳಿವಿನ ಬಗ್ಗೆ ಘೋಷಣೆಗಳನ್ನು ಕೂಗಿದರು.ಈ ಜಾಥಾದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು, ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>