<p><strong>ಚಿಂತಾಮಣಿ: </strong>ಪರಂಪರೆಯು ನಿಂತ ನೀರಾಗದೆ ಸದಾ ಚಲಿಸುತ್ತಿರುತ್ತದೆ. ತಮ್ಮತನವನ್ನು ಉಳಿಸಿಕೊಂಡು ಬದಲಾವಣೆಗೆ ಪ್ರೋತ್ಸಾಹ ನೀಡಬೇಕು ಎಂದು ಕವಿ ಬಿ.ಆರ್.ಲಕ್ಷ್ಮಣರಾವ್ ಇಲ್ಲಿ ಗುರುವಾರ ಅಭಿಪ್ರಾಯಪಟ್ಟರು.<br /> <br /> ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ‘ಪರಂಪರೆ ಕೂಟ’ ಉದ್ಘಾಟಿಸಿ ಮಾತನಾಡಿ, ಪರಂಪರೆ ಎಂದರೆ ಹಿಂದೆ ಇದ್ದ ಹಾಗೆ ಇರಬೇಕು ಎನ್ನುವುದು ತಪ್ಪು ಕಲ್ಪನೆಯಾಗಿದೆ. ಪರಂಪರೆ ಎನ್ನುವುದು ಸ್ಥಗಿತಗೊಳ್ಳುವುದಿಲ್ಲ, ಕಾಲಕ್ಕೆ ತಕ್ಕಂತೆ ಬದಲಾವಣೆ ಬಯಸುತ್ತದೆ. ಆದರೆ ನಮ್ಮತನ ಉಳಿಸಿಕೊಂಡು ಬದಲಾವಣೆಯಾಗಬೇಕು ಎಂದರು.<br /> <br /> ಹಿರಿಯ ಸಾಹಿತಿ ಉತ್ತನೂರು ರಾಜಮ್ಮ ಮಾತನಾಡಿ, ಬದುಕು ಹಾಗೂ ಪರಂಪರೆಯ ವ್ಯತ್ಯಾಸವನ್ನು ಅರಿತುಕೊಳ್ಳಬೇಕು. ಸಂಪ್ರದಾಯ, ಸಂಸ್ಕೃತಿ, ಸಾಹಿತ್ಯ ನಶಿಸದಂತೆ ಉಳಿಸಿಕೊಂಡು ಮುಂದುವರಿಯಬೇಕು. ಗ್ರಾಮೀಣ ಭಾಗಗಳಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಆಚಾರ, ವಿಚಾರ, ಸಂಪ್ರದಾಯಗಳು ಪರಂಪರೆಯ ಅಂಗವಾಗಿವೆ ಎಂದು ಹೇಳಿದರು.<br /> <br /> ಕಾಲೇಜು ಶಿಕ್ಷಣ ಇಲಾಖೆಯ ಡಾ.ಜಗದೀಶ್ ಮಾತನಾಡಿ, ರಾಜ್ಯದ 155 ತಾಲ್ಲೂಕುಗಳಲ್ಲಿ ಪರಂಪರೆ ಕೂಟ ಸ್ಥಾಪಿಸಲಾಗಿದೆ. ಇತಿಹಾಸದ ಪರಂಪರೆ ಉಳಿಸಿ ಬೆಳೆಸುವ ಸಲುವಾಗಿ ಕಾಲೇಜುಗಳಲ್ಲಿ ಇಂತಹ ಕೂಟ ಹಮ್ಮಿಕೊಳ್ಳಲಾಗುತ್ತಿದೆ ಎಂದರು. <br /> <br /> ಉಪನ್ಯಾಸಕ ಎಂ.ಎನ್.ರಘು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಜಿ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಸಿ.ಬಿ.ಹನುಮಂತಪ್ಪ, ನಿವೃತ್ತ ಪ್ರಾಂಶುಪಾಲ ಪ್ರೊ.ವೆಂಕಟಶಿವಾರೆಡ್ಡಿ, ಕವಿ ಜಿ.ಶ್ರೀನಿವಾಸಯ್ಯ ಮಾತನಾಡಿದರು. ಜನಪದ ಕಲಾವಿದರಾದ ಮುನಿರೆಡ್ಡಿ, ಗಂಗುಲಮ್ಮ, ನರಸಿಂಹಪ್ಪ ಜನಪದಗೀತೆಗಳನ್ನು ಹಾಡಿದರು. ಉಪನ್ಯಾಸಕ ಕೃಷ್ಣಪ್ಪ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ಪರಂಪರೆಯು ನಿಂತ ನೀರಾಗದೆ ಸದಾ ಚಲಿಸುತ್ತಿರುತ್ತದೆ. ತಮ್ಮತನವನ್ನು ಉಳಿಸಿಕೊಂಡು ಬದಲಾವಣೆಗೆ ಪ್ರೋತ್ಸಾಹ ನೀಡಬೇಕು ಎಂದು ಕವಿ ಬಿ.ಆರ್.ಲಕ್ಷ್ಮಣರಾವ್ ಇಲ್ಲಿ ಗುರುವಾರ ಅಭಿಪ್ರಾಯಪಟ್ಟರು.<br /> <br /> ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ‘ಪರಂಪರೆ ಕೂಟ’ ಉದ್ಘಾಟಿಸಿ ಮಾತನಾಡಿ, ಪರಂಪರೆ ಎಂದರೆ ಹಿಂದೆ ಇದ್ದ ಹಾಗೆ ಇರಬೇಕು ಎನ್ನುವುದು ತಪ್ಪು ಕಲ್ಪನೆಯಾಗಿದೆ. ಪರಂಪರೆ ಎನ್ನುವುದು ಸ್ಥಗಿತಗೊಳ್ಳುವುದಿಲ್ಲ, ಕಾಲಕ್ಕೆ ತಕ್ಕಂತೆ ಬದಲಾವಣೆ ಬಯಸುತ್ತದೆ. ಆದರೆ ನಮ್ಮತನ ಉಳಿಸಿಕೊಂಡು ಬದಲಾವಣೆಯಾಗಬೇಕು ಎಂದರು.<br /> <br /> ಹಿರಿಯ ಸಾಹಿತಿ ಉತ್ತನೂರು ರಾಜಮ್ಮ ಮಾತನಾಡಿ, ಬದುಕು ಹಾಗೂ ಪರಂಪರೆಯ ವ್ಯತ್ಯಾಸವನ್ನು ಅರಿತುಕೊಳ್ಳಬೇಕು. ಸಂಪ್ರದಾಯ, ಸಂಸ್ಕೃತಿ, ಸಾಹಿತ್ಯ ನಶಿಸದಂತೆ ಉಳಿಸಿಕೊಂಡು ಮುಂದುವರಿಯಬೇಕು. ಗ್ರಾಮೀಣ ಭಾಗಗಳಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಆಚಾರ, ವಿಚಾರ, ಸಂಪ್ರದಾಯಗಳು ಪರಂಪರೆಯ ಅಂಗವಾಗಿವೆ ಎಂದು ಹೇಳಿದರು.<br /> <br /> ಕಾಲೇಜು ಶಿಕ್ಷಣ ಇಲಾಖೆಯ ಡಾ.ಜಗದೀಶ್ ಮಾತನಾಡಿ, ರಾಜ್ಯದ 155 ತಾಲ್ಲೂಕುಗಳಲ್ಲಿ ಪರಂಪರೆ ಕೂಟ ಸ್ಥಾಪಿಸಲಾಗಿದೆ. ಇತಿಹಾಸದ ಪರಂಪರೆ ಉಳಿಸಿ ಬೆಳೆಸುವ ಸಲುವಾಗಿ ಕಾಲೇಜುಗಳಲ್ಲಿ ಇಂತಹ ಕೂಟ ಹಮ್ಮಿಕೊಳ್ಳಲಾಗುತ್ತಿದೆ ಎಂದರು. <br /> <br /> ಉಪನ್ಯಾಸಕ ಎಂ.ಎನ್.ರಘು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಜಿ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಸಿ.ಬಿ.ಹನುಮಂತಪ್ಪ, ನಿವೃತ್ತ ಪ್ರಾಂಶುಪಾಲ ಪ್ರೊ.ವೆಂಕಟಶಿವಾರೆಡ್ಡಿ, ಕವಿ ಜಿ.ಶ್ರೀನಿವಾಸಯ್ಯ ಮಾತನಾಡಿದರು. ಜನಪದ ಕಲಾವಿದರಾದ ಮುನಿರೆಡ್ಡಿ, ಗಂಗುಲಮ್ಮ, ನರಸಿಂಹಪ್ಪ ಜನಪದಗೀತೆಗಳನ್ನು ಹಾಡಿದರು. ಉಪನ್ಯಾಸಕ ಕೃಷ್ಣಪ್ಪ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>