<p><strong>ಟೋಕಿಯೊ (ಎಪಿ): </strong>ಫುಕುಶಿಮಾ ಪರಮಾಣು ದುರಂತದ ಮೂರನೇ ವರ್ಷಾಚರಣೆ ಸಂದರ್ಭದಲ್ಲಿ ಭಾನುವಾರ ಪರಮಾಣು ಇಂಧನದ ಬಳಕೆ ನಿಲ್ಲಿಸುವಂತೆ ಆಗ್ರಹಿಸಿ ಜಪಾನ್ನ ವಿವಿಧ ನಗರಗಳಲ್ಲಿ ಸಾವಿರಾರು ಜನ ಪ್ರತಿಭಟನೆ ನಡೆಸಿದರು.<br /> <br /> ಫುಕುಶಿಮಾ ಪರಮಾಣು ಸ್ಥಾವರದಲ್ಲಿ ಸ್ಥಗಿತಗೊಂಡಿರುವ 48 ಘಟಕಗಳ ಮರುಚಾಲನೆಗೆ ಮುಂದಾಗಿರುವ ಜಪಾನ್ ಸರ್ಕಾರದ ಕ್ರಮವನ್ನು ಖಂಡಿಸಿ ಈ ಪ್ರತಿಭಟನೆ ನಡೆಯಿತು. ಅಣು ಸ್ಥಾವರಕ್ಕೆ ಚಾಲನೆ ನೀಡುವುದನ್ನು ವಿರೋಧಿಸಿ ದೇಶದ ವಿವಿಧೆಡೆಯಿಂದ ಕುಟುಂಬ ಸಮೇತರಾಗಿ ಬಂದಿದ್ದ ಸಾವಿರಾರು ಜನರು ಬೃಹತ್ ರ್್ಯಾಲಿಯಲ್ಲಿ ಪಾಲ್ಗೊಂಡಿದ್ದರು. <br /> <br /> ಟೋಕಿಯೊ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಾಕಾರರು, ಡೋಲು ಬಾರಿಸುತ್ತ, ಪರಮಾಣು ಘಟಕ ಬೇಡ ಎಂಬ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ಪರಮಾಣು ಘಟಕಗಳ ಮರುಸ್ಥಾಪನೆಗೆ ಮುಂದಾಗಬಾರದು ಎಂದು ಸರ್ಕಾರವವನ್ನು ಒತ್ತಾಯಿಸಿದ್ದಾರೆ.<br /> <br /> ಆಸ್ಕರ್ ಪ್ರಶಸ್ತಿ ಪುರಸ್ಕೃತ ರಿಯೂಚಿ ಸಕಮೊಟೊ ಹಾಗೂ ನೊಬೆಲ್ ಪ್ರಶಸ್ತಿ ಪುರಸ್ಕೃತ ಲೇಖಕ ಕೆಂಝಬುರೊ ಓಯಿ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 2011ರ ಮಾರ್ಚ್ 11ರಂದು ನಡೆದ ಈ ಘೋರ ಘಟನೆಯಿಂದಾದ ಅವಘಡವನ್ನು ಜಪಾನ್ ಜನತೆ ಇನ್ನೂ ಮರೆತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೋಕಿಯೊ (ಎಪಿ): </strong>ಫುಕುಶಿಮಾ ಪರಮಾಣು ದುರಂತದ ಮೂರನೇ ವರ್ಷಾಚರಣೆ ಸಂದರ್ಭದಲ್ಲಿ ಭಾನುವಾರ ಪರಮಾಣು ಇಂಧನದ ಬಳಕೆ ನಿಲ್ಲಿಸುವಂತೆ ಆಗ್ರಹಿಸಿ ಜಪಾನ್ನ ವಿವಿಧ ನಗರಗಳಲ್ಲಿ ಸಾವಿರಾರು ಜನ ಪ್ರತಿಭಟನೆ ನಡೆಸಿದರು.<br /> <br /> ಫುಕುಶಿಮಾ ಪರಮಾಣು ಸ್ಥಾವರದಲ್ಲಿ ಸ್ಥಗಿತಗೊಂಡಿರುವ 48 ಘಟಕಗಳ ಮರುಚಾಲನೆಗೆ ಮುಂದಾಗಿರುವ ಜಪಾನ್ ಸರ್ಕಾರದ ಕ್ರಮವನ್ನು ಖಂಡಿಸಿ ಈ ಪ್ರತಿಭಟನೆ ನಡೆಯಿತು. ಅಣು ಸ್ಥಾವರಕ್ಕೆ ಚಾಲನೆ ನೀಡುವುದನ್ನು ವಿರೋಧಿಸಿ ದೇಶದ ವಿವಿಧೆಡೆಯಿಂದ ಕುಟುಂಬ ಸಮೇತರಾಗಿ ಬಂದಿದ್ದ ಸಾವಿರಾರು ಜನರು ಬೃಹತ್ ರ್್ಯಾಲಿಯಲ್ಲಿ ಪಾಲ್ಗೊಂಡಿದ್ದರು. <br /> <br /> ಟೋಕಿಯೊ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಾಕಾರರು, ಡೋಲು ಬಾರಿಸುತ್ತ, ಪರಮಾಣು ಘಟಕ ಬೇಡ ಎಂಬ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ಪರಮಾಣು ಘಟಕಗಳ ಮರುಸ್ಥಾಪನೆಗೆ ಮುಂದಾಗಬಾರದು ಎಂದು ಸರ್ಕಾರವವನ್ನು ಒತ್ತಾಯಿಸಿದ್ದಾರೆ.<br /> <br /> ಆಸ್ಕರ್ ಪ್ರಶಸ್ತಿ ಪುರಸ್ಕೃತ ರಿಯೂಚಿ ಸಕಮೊಟೊ ಹಾಗೂ ನೊಬೆಲ್ ಪ್ರಶಸ್ತಿ ಪುರಸ್ಕೃತ ಲೇಖಕ ಕೆಂಝಬುರೊ ಓಯಿ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 2011ರ ಮಾರ್ಚ್ 11ರಂದು ನಡೆದ ಈ ಘೋರ ಘಟನೆಯಿಂದಾದ ಅವಘಡವನ್ನು ಜಪಾನ್ ಜನತೆ ಇನ್ನೂ ಮರೆತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>