<p><strong>ಎಲ್ಲೂರು (ಪಡುಬಿದ್ರಿ):</strong> ಯುಪಿಸಿಎಲ್ ವಿದ್ಯುತ್ ಸ್ಥಾವರದ ಒಂದನೇ ಘಟಕದ ಪರವಾನಗಿ ನವೀಕರಿಸಬಾರದು. ಎರಡನೇ ಘಟಕಕ್ಕೆ ಪರವಾನಗಿ ನೀಡಬಾರದು ಎಂದು ಎಲ್ಲೂರು ಗ್ರಾಮ ಪಂಚಾಯಿತಿ ಆಗ್ರಹಿಸಿದೆ. <br /> <br /> ಎಲ್ಲೂರು ಗ್ರಾ.ಪಂ ಸಭಾಂಗಣದಲ್ಲಿ ಅಧ್ಯಕ್ಷೆ ಸುಮನಾ ಎಸ್. ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ವಿಶೇಷ ಸಭೆಯಲ್ಲಿ ಈ ಬಗ್ಗೆ ಗ್ರಾ.ಪಂ. ಆಡಳಿತ ನಿರ್ಣಯ ಕೈಗೊಂಡಿದೆ. ನಿರ್ಣಯದ ಪ್ರತಿಯನ್ನು ಬೆಂಗಳೂರಿನ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ರವಾನಿಸಿದೆ. <br /> <br /> ಯುಪಿಸಿಎಲ್ಗೆ ಇದುವರೆಗೂ ಗ್ರಾ.ಪಂ. ವತಿಯಿಂದ ಯಾವುದೇ ಪರವಾನಗಿ ನೀಡಿಲ್ಲ. ಆದರೂ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಪರವಾನಿಗೆ ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ. ಈಗಾಗಲೇ ಘಟಕದಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಎದುರಾಗಿದೆ. <br /> <br /> ಈಗಾಗಲೇ ಅನೇಕ ಸಾವು, ನೋವು ಸಂಭವಿಸಿದೆ. ಆರೋಗ್ಯ, ಕೃಷಿ ಕುಡಿಯುವ ನೀರು, ಸುತ್ತಮುತ್ತಲಿನ ಮರಗಿಡಗಳಿಗೆ ಹಾನಿ ಉಂಟಾಗಿದ್ದು, ಇದರಿಂದಾಗಿ ಸ್ಥಳೀಯರು ಜೀವನ ನಡೆಸುವುದೇ ಕಷ್ಟವಾಗಿ ಮಾರ್ಪಟ್ಟಿದೆ. <br /> <br /> ಕಂಪೆನಿಗೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿದ್ದು, ಗ್ರಾ.ಪಂ ಗ್ರಾಮ ಸಭೆಯನ್ನಾಗಲೀ, ಸಾಮಾನ್ಯ ಸಭೆಯನ್ನಾಗಲೀ ನಡೆಸುವಂತಿಲ್ಲ. ಗ್ರಾಮಸ್ಥರು ನಮ್ಮನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಆದ್ದರಿಂದ ನೀವು ಈಗ ನೀಡಿರುವ ಪರವಾನಗಿ ನವೀಕರಿಸಬಾರದು ಮತ್ತು ಮುಂದಿನ ಯಾವುದೇ ಹೊಸ ಘಟಕಕ್ಕೆ ಪರವಾನಗಿ ನೀಡಬಾರದು. <br /> <br /> ಪಂಚಾಯಿತಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮಸ್ಥರಲ್ಲಿ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕು~ ಎಂದು ಸಭೆಯಲ್ಲಿ ಸರ್ವಾನುಮತದ ನಿರ್ಣಯಕೈಗೊಳ್ಳಲಾಯಿತು. ನಿರ್ಣಯ ಪ್ರತಿಯನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಲ್ಲೂರು (ಪಡುಬಿದ್ರಿ):</strong> ಯುಪಿಸಿಎಲ್ ವಿದ್ಯುತ್ ಸ್ಥಾವರದ ಒಂದನೇ ಘಟಕದ ಪರವಾನಗಿ ನವೀಕರಿಸಬಾರದು. ಎರಡನೇ ಘಟಕಕ್ಕೆ ಪರವಾನಗಿ ನೀಡಬಾರದು ಎಂದು ಎಲ್ಲೂರು ಗ್ರಾಮ ಪಂಚಾಯಿತಿ ಆಗ್ರಹಿಸಿದೆ. <br /> <br /> ಎಲ್ಲೂರು ಗ್ರಾ.ಪಂ ಸಭಾಂಗಣದಲ್ಲಿ ಅಧ್ಯಕ್ಷೆ ಸುಮನಾ ಎಸ್. ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ವಿಶೇಷ ಸಭೆಯಲ್ಲಿ ಈ ಬಗ್ಗೆ ಗ್ರಾ.ಪಂ. ಆಡಳಿತ ನಿರ್ಣಯ ಕೈಗೊಂಡಿದೆ. ನಿರ್ಣಯದ ಪ್ರತಿಯನ್ನು ಬೆಂಗಳೂರಿನ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ರವಾನಿಸಿದೆ. <br /> <br /> ಯುಪಿಸಿಎಲ್ಗೆ ಇದುವರೆಗೂ ಗ್ರಾ.ಪಂ. ವತಿಯಿಂದ ಯಾವುದೇ ಪರವಾನಗಿ ನೀಡಿಲ್ಲ. ಆದರೂ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಪರವಾನಿಗೆ ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ. ಈಗಾಗಲೇ ಘಟಕದಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಎದುರಾಗಿದೆ. <br /> <br /> ಈಗಾಗಲೇ ಅನೇಕ ಸಾವು, ನೋವು ಸಂಭವಿಸಿದೆ. ಆರೋಗ್ಯ, ಕೃಷಿ ಕುಡಿಯುವ ನೀರು, ಸುತ್ತಮುತ್ತಲಿನ ಮರಗಿಡಗಳಿಗೆ ಹಾನಿ ಉಂಟಾಗಿದ್ದು, ಇದರಿಂದಾಗಿ ಸ್ಥಳೀಯರು ಜೀವನ ನಡೆಸುವುದೇ ಕಷ್ಟವಾಗಿ ಮಾರ್ಪಟ್ಟಿದೆ. <br /> <br /> ಕಂಪೆನಿಗೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿದ್ದು, ಗ್ರಾ.ಪಂ ಗ್ರಾಮ ಸಭೆಯನ್ನಾಗಲೀ, ಸಾಮಾನ್ಯ ಸಭೆಯನ್ನಾಗಲೀ ನಡೆಸುವಂತಿಲ್ಲ. ಗ್ರಾಮಸ್ಥರು ನಮ್ಮನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಆದ್ದರಿಂದ ನೀವು ಈಗ ನೀಡಿರುವ ಪರವಾನಗಿ ನವೀಕರಿಸಬಾರದು ಮತ್ತು ಮುಂದಿನ ಯಾವುದೇ ಹೊಸ ಘಟಕಕ್ಕೆ ಪರವಾನಗಿ ನೀಡಬಾರದು. <br /> <br /> ಪಂಚಾಯಿತಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮಸ್ಥರಲ್ಲಿ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕು~ ಎಂದು ಸಭೆಯಲ್ಲಿ ಸರ್ವಾನುಮತದ ನಿರ್ಣಯಕೈಗೊಳ್ಳಲಾಯಿತು. ನಿರ್ಣಯ ಪ್ರತಿಯನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>