<p><strong>ಕೊಪ್ಪಳ</strong>: ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ನವೆಂಬರ್ ಅಂತ್ಯದ ವರೆಗಿನ ಅವಧಿಯಲ್ಲಿ ಪರಿಶಿಷ್ಟರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಅಲ್ಲದೇ, ದೌರ್ಜನ್ಯಕ್ಕೆ ಒಳಗಾಗಿರುವ ಪರಿಶಿಷ್ಟ ವ್ಯಕ್ತಿಗಳ ಸಂಖ್ಯೆಯಲ್ಲಿ ಸಹ ಹೆಚ್ಚಳವಾಗಿರುವುದು ಸಮಾಜ ಕಲ್ಯಾಣ ಇಲಾಖೆ ಒದಗಿಸಿರುವ ಅಂಕಿ–ಅಂಶಗಳಿಂದ ಸ್ಪಷ್ಟವಾಗುತ್ತದೆ.<br /> <br /> 2012ರ ಜನವರಿಯಿಂದ ಡಿಸೆಂಬರ್ ವರೆಗಿನ ಅವಧಿಯಲ್ಲಿ ಒಟ್ಟು 14 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಒಟ್ಟು 22 ಜನರು ದೌರ್ಜನ್ಯಕ್ಕೆ ಒಳಗಾಗಿದ್ದು, ₨ 6.35 ಲಕ್ಷ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಒದಗಿಸಿರುವ ದಾಖಲೆಗಳು ಹೇಳುತ್ತವೆ.<br /> <br /> ಇನ್ನು, ಪ್ರಸಕ್ತ ಸಾಲಿನಲ್ಲಿ ನವೆಂಬರ್ ಅಂತ್ಯದ ವರೆಗಿನ ಅವಧಿಯಲ್ಲಿ ಒಟ್ಟು 27 ಇಂತಹ ಪ್ರಕರಣಗಳು ದಾಖಲಾಗಿವೆ. ಒಟ್ಟು 92 ಜನರು ದೌರ್ಜನ್ಯಕ್ಕೆ ಒಳಗಾಗಿದ್ದು, ಒಟ್ಟು ₨ 15.25 ಲಕ್ಷ ಪರಿಹಾರ ಧನ ಮಂಜೂರು ಮಾಡಿರುವುದಾಗಿ ಇವೇ ದಾಖಲೆಗಳು ಸ್ಪಷ್ಟಪಡಿಸುತ್ತವೆ.<br /> <br /> 2012ರಲ್ಲಿ 4 ಜಾತಿ ನಿಂದನೆ ಪ್ರಕರಣಗಳು ದಾಖಲಾಗಿದ್ದರೆ, ಜಾತಿ ನಿಂದನೆ ಮತ್ತು ಹೊಡೆದಾಟಕ್ಕೆ ಸಂಬಂಧಿಸಿದಂತೆ 8 ಪ್ರಕರಣಗಳು ದಾಖಲಾಗಿವೆ. ಹೊಡೆದಾಟ ಹಾಗೂ ಕೊಲೆಗೆ ಸಂಬಂಧಿಸಿದಂತೆ ತಲಾ ಒಂದು ಪ್ರಕರಣ ದಾಖಲಾಗಿವೆ. ಆದರೆ, ಈ ವರ್ಷ ಜಾತಿ ನಿಂದನೆ ಮತ್ತು ಹೊಡೆದಾಟಕ್ಕೆ ಸಂಬಂಧಿಸಿದಂತೆ 20 ಪ್ರಕರಣಗಳು ದಾಖಲಾಗಿದ್ದರೆ, ಜಾತಿ ನಿಂದನೆ ಮತ್ತು ಮಾನಭಂಗಕ್ಕೆ ಸಂಬಂಧಿಸಿದಂತೆ 6 ಹಾಗೂ ಮರಣಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ದಾಖಲಾಗಿದೆ ಎಂದು ಇವೇ ದಾಖಲೆಗಳಿಂದ ಸ್ಪಷ್ಟವಾಗುತ್ತದೆ.<br /> <br /> ಪ್ರಕರಣಗಳ ಸಂಖ್ಯೆ ಹೆಚ್ಚಾಗಿಲ್ಲ?: ಆದರೆ, ಜಿಲ್ಲೆಯಲ್ಲಿ ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶುಭ ಅವರು ಸಮರ್ಥನೆ ಮಾಡುತ್ತಾರೆ.<br /> <br /> ‘2012 ಹಾಗೂ 2013ರಲ್ಲಿ ಅಷ್ಟೇ ಪ್ರಮಾಣದ ಪ್ರಕರಣಗಳು ದಾಖಲಾಗಿವೆ. ಆದರೆ, ಈ ವರ್ಷ ದೌರ್ಜನ್ಯಕ್ಕೆ ಒಳಗಾಗಿರುವ ಜನರ ಸಂಖ್ಯೆ ಹೆಚ್ಚಾಗಿದೆ ಅಷ್ಟೇ’ ಎಂದೂ ಹೇಳಿದರು.<br /> <br /> ಹಾಗೆ ನೋಡಿದರೆ, ಕಳೆದ ವರ್ಷ 14 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷ ದಾಖಲಾದ ಪ್ರಕರಣಗಳ ಸಂಖ್ಯೆ 27. ಅಲ್ಲದೇ, ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಹೆಚ್ಚಾಗಿದೆ ಎಂದರೆ, ಪರಿಶಿಷ್ಟರ ಮೇಲಿನ ದೌರ್ಜನ್ಯವೂ ಹೆಚ್ಚಾದಂತೆ ಅಲ್ಲವೇ ಎಂಬ ‘ಪ್ರಜಾವಾಣಿ’ಯ ಪ್ರಶ್ನೆಗೆ ಅವರು ಸಮರ್ಪಕ ಉತ್ತರ ನೀಡದೇ ಜಾರಿಕೊಂಡರು.<br /> <br /> ಕಾರ್ಯಕ್ರಮವೇ ನಡೆದಿಲ್ಲ!: ವಿಚಿತ್ರ ಎಂದರೆ, ಜಿಲ್ಲೆಯಲ್ಲಿ ಪರಿಶಿಷ್ಟರ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಕುರಿತಂತೆ ಈ ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಅರಿವು ಮೂಡಿ-ಸುವ ಕಾರ್ಯಕ್ರಮಗಳೇ ನಡೆದಿಲ್ಲ!<br /> <br /> ‘ದೌರ್ಜನ್ಯ ಪ್ರಕರಣಗಳು ನಡೆದ ಸಂದರ್ಭದಲ್ಲಿ ಹಾಗೂ ಇತರ ದಿನಗಳಲ್ಲಿ ಈ ಕಾಯ್ದೆ ಕುರಿತಂತೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಆದರೆ, ಈ ವರ್ಷ ಇಂತಹ ಕಾರ್ಯಕ್ರಮಗಳು ನಡೆದಿಲ್ಲ. 15 ದಿನಗಳ ಒಳಗಾಗಿ ಇಂತಹ ಕಾರ್ಯಕ್ರಮ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶುಭ ಹೇಳುತ್ತಾರೆ.<br /> <br /> ‘ಈ ಕಾರ್ಯಕ್ರಮಗಳಿಗೆ ಇಂತಿಷ್ಟೇ ಬಜೆಟ್ ಎಂಬುದು ಇರುವುದಿಲ್ಲ. ಉನ್ನತ ಕಚೇರಿಯಿಂದ ಬಿಡುಗಡೆಯಾಗುವ ಅನುದಾನದಲ್ಲಿಯೇ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ನವೆಂಬರ್ ಅಂತ್ಯದ ವರೆಗಿನ ಅವಧಿಯಲ್ಲಿ ಪರಿಶಿಷ್ಟರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಅಲ್ಲದೇ, ದೌರ್ಜನ್ಯಕ್ಕೆ ಒಳಗಾಗಿರುವ ಪರಿಶಿಷ್ಟ ವ್ಯಕ್ತಿಗಳ ಸಂಖ್ಯೆಯಲ್ಲಿ ಸಹ ಹೆಚ್ಚಳವಾಗಿರುವುದು ಸಮಾಜ ಕಲ್ಯಾಣ ಇಲಾಖೆ ಒದಗಿಸಿರುವ ಅಂಕಿ–ಅಂಶಗಳಿಂದ ಸ್ಪಷ್ಟವಾಗುತ್ತದೆ.<br /> <br /> 2012ರ ಜನವರಿಯಿಂದ ಡಿಸೆಂಬರ್ ವರೆಗಿನ ಅವಧಿಯಲ್ಲಿ ಒಟ್ಟು 14 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಒಟ್ಟು 22 ಜನರು ದೌರ್ಜನ್ಯಕ್ಕೆ ಒಳಗಾಗಿದ್ದು, ₨ 6.35 ಲಕ್ಷ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಒದಗಿಸಿರುವ ದಾಖಲೆಗಳು ಹೇಳುತ್ತವೆ.<br /> <br /> ಇನ್ನು, ಪ್ರಸಕ್ತ ಸಾಲಿನಲ್ಲಿ ನವೆಂಬರ್ ಅಂತ್ಯದ ವರೆಗಿನ ಅವಧಿಯಲ್ಲಿ ಒಟ್ಟು 27 ಇಂತಹ ಪ್ರಕರಣಗಳು ದಾಖಲಾಗಿವೆ. ಒಟ್ಟು 92 ಜನರು ದೌರ್ಜನ್ಯಕ್ಕೆ ಒಳಗಾಗಿದ್ದು, ಒಟ್ಟು ₨ 15.25 ಲಕ್ಷ ಪರಿಹಾರ ಧನ ಮಂಜೂರು ಮಾಡಿರುವುದಾಗಿ ಇವೇ ದಾಖಲೆಗಳು ಸ್ಪಷ್ಟಪಡಿಸುತ್ತವೆ.<br /> <br /> 2012ರಲ್ಲಿ 4 ಜಾತಿ ನಿಂದನೆ ಪ್ರಕರಣಗಳು ದಾಖಲಾಗಿದ್ದರೆ, ಜಾತಿ ನಿಂದನೆ ಮತ್ತು ಹೊಡೆದಾಟಕ್ಕೆ ಸಂಬಂಧಿಸಿದಂತೆ 8 ಪ್ರಕರಣಗಳು ದಾಖಲಾಗಿವೆ. ಹೊಡೆದಾಟ ಹಾಗೂ ಕೊಲೆಗೆ ಸಂಬಂಧಿಸಿದಂತೆ ತಲಾ ಒಂದು ಪ್ರಕರಣ ದಾಖಲಾಗಿವೆ. ಆದರೆ, ಈ ವರ್ಷ ಜಾತಿ ನಿಂದನೆ ಮತ್ತು ಹೊಡೆದಾಟಕ್ಕೆ ಸಂಬಂಧಿಸಿದಂತೆ 20 ಪ್ರಕರಣಗಳು ದಾಖಲಾಗಿದ್ದರೆ, ಜಾತಿ ನಿಂದನೆ ಮತ್ತು ಮಾನಭಂಗಕ್ಕೆ ಸಂಬಂಧಿಸಿದಂತೆ 6 ಹಾಗೂ ಮರಣಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ದಾಖಲಾಗಿದೆ ಎಂದು ಇವೇ ದಾಖಲೆಗಳಿಂದ ಸ್ಪಷ್ಟವಾಗುತ್ತದೆ.<br /> <br /> ಪ್ರಕರಣಗಳ ಸಂಖ್ಯೆ ಹೆಚ್ಚಾಗಿಲ್ಲ?: ಆದರೆ, ಜಿಲ್ಲೆಯಲ್ಲಿ ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶುಭ ಅವರು ಸಮರ್ಥನೆ ಮಾಡುತ್ತಾರೆ.<br /> <br /> ‘2012 ಹಾಗೂ 2013ರಲ್ಲಿ ಅಷ್ಟೇ ಪ್ರಮಾಣದ ಪ್ರಕರಣಗಳು ದಾಖಲಾಗಿವೆ. ಆದರೆ, ಈ ವರ್ಷ ದೌರ್ಜನ್ಯಕ್ಕೆ ಒಳಗಾಗಿರುವ ಜನರ ಸಂಖ್ಯೆ ಹೆಚ್ಚಾಗಿದೆ ಅಷ್ಟೇ’ ಎಂದೂ ಹೇಳಿದರು.<br /> <br /> ಹಾಗೆ ನೋಡಿದರೆ, ಕಳೆದ ವರ್ಷ 14 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷ ದಾಖಲಾದ ಪ್ರಕರಣಗಳ ಸಂಖ್ಯೆ 27. ಅಲ್ಲದೇ, ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಹೆಚ್ಚಾಗಿದೆ ಎಂದರೆ, ಪರಿಶಿಷ್ಟರ ಮೇಲಿನ ದೌರ್ಜನ್ಯವೂ ಹೆಚ್ಚಾದಂತೆ ಅಲ್ಲವೇ ಎಂಬ ‘ಪ್ರಜಾವಾಣಿ’ಯ ಪ್ರಶ್ನೆಗೆ ಅವರು ಸಮರ್ಪಕ ಉತ್ತರ ನೀಡದೇ ಜಾರಿಕೊಂಡರು.<br /> <br /> ಕಾರ್ಯಕ್ರಮವೇ ನಡೆದಿಲ್ಲ!: ವಿಚಿತ್ರ ಎಂದರೆ, ಜಿಲ್ಲೆಯಲ್ಲಿ ಪರಿಶಿಷ್ಟರ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಕುರಿತಂತೆ ಈ ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಅರಿವು ಮೂಡಿ-ಸುವ ಕಾರ್ಯಕ್ರಮಗಳೇ ನಡೆದಿಲ್ಲ!<br /> <br /> ‘ದೌರ್ಜನ್ಯ ಪ್ರಕರಣಗಳು ನಡೆದ ಸಂದರ್ಭದಲ್ಲಿ ಹಾಗೂ ಇತರ ದಿನಗಳಲ್ಲಿ ಈ ಕಾಯ್ದೆ ಕುರಿತಂತೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಆದರೆ, ಈ ವರ್ಷ ಇಂತಹ ಕಾರ್ಯಕ್ರಮಗಳು ನಡೆದಿಲ್ಲ. 15 ದಿನಗಳ ಒಳಗಾಗಿ ಇಂತಹ ಕಾರ್ಯಕ್ರಮ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶುಭ ಹೇಳುತ್ತಾರೆ.<br /> <br /> ‘ಈ ಕಾರ್ಯಕ್ರಮಗಳಿಗೆ ಇಂತಿಷ್ಟೇ ಬಜೆಟ್ ಎಂಬುದು ಇರುವುದಿಲ್ಲ. ಉನ್ನತ ಕಚೇರಿಯಿಂದ ಬಿಡುಗಡೆಯಾಗುವ ಅನುದಾನದಲ್ಲಿಯೇ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>