<p><strong>ಹೊಸಕೋಟೆ:</strong> ಕೈಮಗ್ಗ ಮತ್ತು ಜವಳಿ ಇಲಾಖೆ ವಸತಿಯು ಕಾರ್ಯಾಗಾರ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನೇಕಾರರಿಗೆ ವಸತಿ ನಿರ್ಮಿಸಿಕೊಳ್ಳುವಲ್ಲಿ ಪ್ರಥಮ ಬಾರಿಗೆ ಒಂದು ಲಕ್ಷ ರೂಪಾಯಿಗಳ ಅನುದಾನ ನೀಡುತ್ತಿದೆ ಎಂದು ಇಲಾಖೆಯ ಉಪ ನಿರ್ದೇಶಕ ಎಸ್.ಪ್ರಕಾಶ್ ಹೇಳಿದರು.<br /> <br /> ಅಖಿಲ ಕರ್ನಾಟಕ ನೇಕಾರರ ರಕ್ಷಣಾ ವೇದಿಕೆ, ಚೌಡೇಶ್ವರಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಸಹಕಾರ ಸಂಘ ಹಾಗು ಜವಳಿ ಮತ್ತು ಕೈಮಗ್ಗ ಇಲಾಖೆ ಅಶ್ರಯದಲ್ಲಿ ಶುಕ್ರವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ನೇಕಾರರ 5,417 ಮಕ್ಕಳಿಗೆ 86 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗಿದ್ದು, ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. <br /> <br /> ನೇಕಾರರಿಗೆ ಆರೋಗ್ಯ ವಿಮಾ ಯೋಜನೆ, ಕ್ರೆಡಿಟ್ ಕಾರ್ಡ್ ಯೋಜನೆ ಸೇರಿದಂತೆ ಅವರಿಗೆ ಸಹಾಯ ಮಾಡುವಲ್ಲಿ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ನೇಕಾರರು ಅವುಗಳ ಪ್ರಯೋಜನ ಪಡೆದು ಅಭಿವೃದ್ಧಿ ಹೊಂದಬೇಕು ಎಂದು ಸಲಹೆ ಮಾಡಿದರು.<br /> <br /> ಅಖಿಲ ಕರ್ನಾಟಕ ನೇಕಾರರ ಸಹಕಾರ ಸಂಘದ ಅಧ್ಯಕ್ಷ ಎಂ.ಚೌಡಪ್ಪ ಮಾತನಾಡಿ, ನೇಕಾರರ ಅನುಕೂಲಕ್ಕಾಗಿ ಹೊಸಕೋಟೆಯಲ್ಲಿ ನೇಕಾರರ ಬ್ಯಾಂಕ್ ಸ್ಥಾಪಿಸಲು, ಮಾರಾಟ ಮಳಿಗೆ ನಿರ್ಮಿಸಲು ಯೋಜಿಸಲಾಗಿದೆ ಎಂದು ಹೇಳಿದರು. <br /> <br /> ಸಮಾರಂಭದ ಸಾನ್ನಿಧ್ಯ ವಹಿಸಿದ್ದ ತಪಸೀಹಳ್ಳಿಯ ದಿವ್ಯ ಜ್ಞಾನಾನಂದಗಿರಿ ಸ್ವಾಮಿ, ನೇಕಾರರು ತಪ್ಪದೆ ತಮ್ಮ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಡಿಸುವಂತಾಬೇಕು ಎಂದು ಹೇಳಿದರು.<br /> <br /> ಸಹಾಯಕ ನಿರ್ದೇಶಕ ಆರ್.ಲಿಂಗರಾಜು ಮಾತನಾಡಿದರು. ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಸೊಣ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. <br /> <br /> ವೇದಿಕೆ ಕಾರ್ಯದರ್ಶಿ ಪ್ರಕಾಶ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ಕೈಮಗ್ಗ ಮತ್ತು ಜವಳಿ ಇಲಾಖೆ ವಸತಿಯು ಕಾರ್ಯಾಗಾರ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನೇಕಾರರಿಗೆ ವಸತಿ ನಿರ್ಮಿಸಿಕೊಳ್ಳುವಲ್ಲಿ ಪ್ರಥಮ ಬಾರಿಗೆ ಒಂದು ಲಕ್ಷ ರೂಪಾಯಿಗಳ ಅನುದಾನ ನೀಡುತ್ತಿದೆ ಎಂದು ಇಲಾಖೆಯ ಉಪ ನಿರ್ದೇಶಕ ಎಸ್.ಪ್ರಕಾಶ್ ಹೇಳಿದರು.<br /> <br /> ಅಖಿಲ ಕರ್ನಾಟಕ ನೇಕಾರರ ರಕ್ಷಣಾ ವೇದಿಕೆ, ಚೌಡೇಶ್ವರಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಸಹಕಾರ ಸಂಘ ಹಾಗು ಜವಳಿ ಮತ್ತು ಕೈಮಗ್ಗ ಇಲಾಖೆ ಅಶ್ರಯದಲ್ಲಿ ಶುಕ್ರವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ನೇಕಾರರ 5,417 ಮಕ್ಕಳಿಗೆ 86 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗಿದ್ದು, ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. <br /> <br /> ನೇಕಾರರಿಗೆ ಆರೋಗ್ಯ ವಿಮಾ ಯೋಜನೆ, ಕ್ರೆಡಿಟ್ ಕಾರ್ಡ್ ಯೋಜನೆ ಸೇರಿದಂತೆ ಅವರಿಗೆ ಸಹಾಯ ಮಾಡುವಲ್ಲಿ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ನೇಕಾರರು ಅವುಗಳ ಪ್ರಯೋಜನ ಪಡೆದು ಅಭಿವೃದ್ಧಿ ಹೊಂದಬೇಕು ಎಂದು ಸಲಹೆ ಮಾಡಿದರು.<br /> <br /> ಅಖಿಲ ಕರ್ನಾಟಕ ನೇಕಾರರ ಸಹಕಾರ ಸಂಘದ ಅಧ್ಯಕ್ಷ ಎಂ.ಚೌಡಪ್ಪ ಮಾತನಾಡಿ, ನೇಕಾರರ ಅನುಕೂಲಕ್ಕಾಗಿ ಹೊಸಕೋಟೆಯಲ್ಲಿ ನೇಕಾರರ ಬ್ಯಾಂಕ್ ಸ್ಥಾಪಿಸಲು, ಮಾರಾಟ ಮಳಿಗೆ ನಿರ್ಮಿಸಲು ಯೋಜಿಸಲಾಗಿದೆ ಎಂದು ಹೇಳಿದರು. <br /> <br /> ಸಮಾರಂಭದ ಸಾನ್ನಿಧ್ಯ ವಹಿಸಿದ್ದ ತಪಸೀಹಳ್ಳಿಯ ದಿವ್ಯ ಜ್ಞಾನಾನಂದಗಿರಿ ಸ್ವಾಮಿ, ನೇಕಾರರು ತಪ್ಪದೆ ತಮ್ಮ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಡಿಸುವಂತಾಬೇಕು ಎಂದು ಹೇಳಿದರು.<br /> <br /> ಸಹಾಯಕ ನಿರ್ದೇಶಕ ಆರ್.ಲಿಂಗರಾಜು ಮಾತನಾಡಿದರು. ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಸೊಣ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. <br /> <br /> ವೇದಿಕೆ ಕಾರ್ಯದರ್ಶಿ ಪ್ರಕಾಶ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>