<p><strong>ಬೆಳಗಾವಿ:</strong> `ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಗೆ ಪಾಲಿಕೆಯ ಮೇಯರ್ ಸ್ಥಾನವನ್ನು ನೀಡುವಂತೆ ಮೀಸಲಾತಿ ಘೋಷಣೆ ಮಾಡಬೇಕು' ಎಂದು ಅಖಿಲ ಭಾರತ ದಲಿತ ಯುವ ಸಂಘದ ರಾಷ್ಟ್ರೀಯ ಅಧ್ಯಕ್ಷ ಮಲ್ಲೇಶ ಚೌಗುಲೆ ಹೇಳಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೆ ಪಾಲಿಕೆಯಲ್ಲಿ ದಲಿತ ಸಮಾಜಕ್ಕೆ ಸೇರಿದ ಇಬ್ಬರು ಮುಖಂಡರು ಮಾತ್ರ ಮೇಯರ್ ಆಗಿದ್ದಾರೆ. ಆದರೆ, ಇಬ್ಬರು ಮುಖಂಡರನ್ನು ರಾಜಕೀಯ ಹುನ್ನಾರ ನಡೆಸಿ, ಪಾಲಿಕೆ ಸೂಪರ್ಸೀಡ್ ಮಾಡಿ ಕೆಲವೇ ತಿಂಗಳುಗಳಲ್ಲಿ ಅಧಿಕಾರದಿಂದ ಕೆಳಗಿಳಿಸಲಾಗಿದೆ. ವಿಜಯ ಮೋರೆ 9 ತಿಂಗಳು ಹಾಗೂ ಮಂದಾ ಬಾಳೇಕುಂದ್ರಿ 4 ತಿಂಗಳು ಮಾತ್ರ ಮೇಯರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಇದರಿಂದಾಗಿ ದಲಿತರಿಗೆ ಅನ್ಯಾಯವಾಗಿದೆ. ಆದ್ದರಿಂದ ಈ ಬಾರಿ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಗೆ ಮೇಯರ್ ಸ್ಥಾನ ಒದಗಿಸುವ ಮೂಲಕ ದಲಿತರಿಗೆ ನ್ಯಾಯ ದೊರಕಿಸಬೇಕು ಒತ್ತಾಯಿಸಿದರು.<br /> <br /> ಇಲ್ಲಿನ ಸದಾಶಿವ ನಗರದ ವಸತಿ ನಿಲಯದಲ್ಲಿ ಜಗಜೀವನರಾಮ್ ಅವರ ಪುತ್ಥಳಿಯನ್ನು ಕಳೆದ ಎರಡು ವರ್ಷಗಳಿಂದ ಬಟ್ಟೆ ಕಟ್ಟಿ ಇಡಲಾಗಿದ್ದು, ಇನ್ನೂ ಉದ್ಘಾಟನೆ ಮಾಡಿಲ್ಲ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಹಲವು ಬಾರಿ ಪ್ರತಿಭಟನೆ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಆಗಸ್ಟ್ 15 ರೊಳಗಾಗಿ ಜಗಜೀವನರಾಮ್ ಅವರ ಪುತ್ಥಳಿಯನ್ನು ಉದ್ಘಾಟನೆ ಮಾಡಬೇಕು. ಇಲ್ಲದಿದ್ದರೆ ಆಗಸ್ಟ್ 15 ರಂದು ಧ್ವಜಾರೋಹಣವನ್ನು ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.<br /> <br /> `ಈ ಬಾರಿಯ ಪಾಲಿಕೆಯ ಚುನಾವಣೆಯಲ್ಲಿ 45ನೇ ವಾರ್ಡಿನಿಂದ ಆಯ್ಕೆಯಾಗಿರುವ ಮೈನಾಬಾಯಿ ಚೌಗುಲೆ ಎಂಬ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಗೆ ಮೇಯರ್ ಸ್ಥಾನವನ್ನು ನೀಡಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು' ಎಂದು ಪ್ರೊ. ಡಿ.ಕೆ.ಮಂತ್ರೇಶಿ ಆಗ್ರಹಿಸಿದರು.<br /> <br /> ಇಲ್ಲಿನ ಶಿವಬಸವ ನಗರದಲ್ಲಿರುವ ಆರ್.ಎನ್.ಶೆಟ್ಟಿ ಕಾಲೇಜಿನಲ್ಲಿ ಎಂ.ಟೆಕ್ ಪದವೀಧರರಾದ ಪರಶುರಾಮ ಹಲಗೇಕರ ಎಂಬುವರು ಕಳೆದ 9 ವರ್ಷಗಳಿಂದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಾಚಾರ್ಯರಾಗುವ ಎಲ್ಲ ಅರ್ಹತೆಗಳನ್ನು ಅವರು ಹೊಂದಿದ್ದಾರೆ. ಆದರೆ, ಅವರಿಗೆ ಪ್ರಾಚಾರ್ಯ ಹುದ್ದೆ ನೀಡದೇ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.<br /> <br /> `ಬ್ಯಾಂಕ್ಗಳು, ವಿಮೆ ಕಂಪೆನಿಗಳು, ಪಾಲಿಕೆ, ಪ್ರಾಧಿಕಾರ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಆರ್ಟಿಇ ಕಾಯ್ದೆಯಡಿ ವಕೀಲರನ್ನು ನೇಮಿಸಿಕೊಳ್ಳುವ ಅಧಿಕಾರವಿರುತ್ತದೆ. ಆದರೆ, ಇವುಗಳು ದಲಿತ ಸಮಾಜಕ್ಕೆ ಸೇರಿದ ವಕೀಲರನ್ನು ನೇಮಕ ಮಾಡಿಕೊಳ್ಳಲು ನಿರ್ಲಕ್ಷ್ಯ ತಾಳುತ್ತಿವೆ' ಎಂದು ವಕೀಲ ಸತೀಶ ಕರಾಳೆ ಆಪಾದಿಸಿದರು.<br /> <br /> ಬಾಲಚಂದ್ರ ಕಾಳೆ, ಗಜಾನನ ದೇವರಮನಿ, ಸುಧಾಕರ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> `ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಗೆ ಪಾಲಿಕೆಯ ಮೇಯರ್ ಸ್ಥಾನವನ್ನು ನೀಡುವಂತೆ ಮೀಸಲಾತಿ ಘೋಷಣೆ ಮಾಡಬೇಕು' ಎಂದು ಅಖಿಲ ಭಾರತ ದಲಿತ ಯುವ ಸಂಘದ ರಾಷ್ಟ್ರೀಯ ಅಧ್ಯಕ್ಷ ಮಲ್ಲೇಶ ಚೌಗುಲೆ ಹೇಳಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೆ ಪಾಲಿಕೆಯಲ್ಲಿ ದಲಿತ ಸಮಾಜಕ್ಕೆ ಸೇರಿದ ಇಬ್ಬರು ಮುಖಂಡರು ಮಾತ್ರ ಮೇಯರ್ ಆಗಿದ್ದಾರೆ. ಆದರೆ, ಇಬ್ಬರು ಮುಖಂಡರನ್ನು ರಾಜಕೀಯ ಹುನ್ನಾರ ನಡೆಸಿ, ಪಾಲಿಕೆ ಸೂಪರ್ಸೀಡ್ ಮಾಡಿ ಕೆಲವೇ ತಿಂಗಳುಗಳಲ್ಲಿ ಅಧಿಕಾರದಿಂದ ಕೆಳಗಿಳಿಸಲಾಗಿದೆ. ವಿಜಯ ಮೋರೆ 9 ತಿಂಗಳು ಹಾಗೂ ಮಂದಾ ಬಾಳೇಕುಂದ್ರಿ 4 ತಿಂಗಳು ಮಾತ್ರ ಮೇಯರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಇದರಿಂದಾಗಿ ದಲಿತರಿಗೆ ಅನ್ಯಾಯವಾಗಿದೆ. ಆದ್ದರಿಂದ ಈ ಬಾರಿ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಗೆ ಮೇಯರ್ ಸ್ಥಾನ ಒದಗಿಸುವ ಮೂಲಕ ದಲಿತರಿಗೆ ನ್ಯಾಯ ದೊರಕಿಸಬೇಕು ಒತ್ತಾಯಿಸಿದರು.<br /> <br /> ಇಲ್ಲಿನ ಸದಾಶಿವ ನಗರದ ವಸತಿ ನಿಲಯದಲ್ಲಿ ಜಗಜೀವನರಾಮ್ ಅವರ ಪುತ್ಥಳಿಯನ್ನು ಕಳೆದ ಎರಡು ವರ್ಷಗಳಿಂದ ಬಟ್ಟೆ ಕಟ್ಟಿ ಇಡಲಾಗಿದ್ದು, ಇನ್ನೂ ಉದ್ಘಾಟನೆ ಮಾಡಿಲ್ಲ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಹಲವು ಬಾರಿ ಪ್ರತಿಭಟನೆ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಆಗಸ್ಟ್ 15 ರೊಳಗಾಗಿ ಜಗಜೀವನರಾಮ್ ಅವರ ಪುತ್ಥಳಿಯನ್ನು ಉದ್ಘಾಟನೆ ಮಾಡಬೇಕು. ಇಲ್ಲದಿದ್ದರೆ ಆಗಸ್ಟ್ 15 ರಂದು ಧ್ವಜಾರೋಹಣವನ್ನು ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.<br /> <br /> `ಈ ಬಾರಿಯ ಪಾಲಿಕೆಯ ಚುನಾವಣೆಯಲ್ಲಿ 45ನೇ ವಾರ್ಡಿನಿಂದ ಆಯ್ಕೆಯಾಗಿರುವ ಮೈನಾಬಾಯಿ ಚೌಗುಲೆ ಎಂಬ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಗೆ ಮೇಯರ್ ಸ್ಥಾನವನ್ನು ನೀಡಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು' ಎಂದು ಪ್ರೊ. ಡಿ.ಕೆ.ಮಂತ್ರೇಶಿ ಆಗ್ರಹಿಸಿದರು.<br /> <br /> ಇಲ್ಲಿನ ಶಿವಬಸವ ನಗರದಲ್ಲಿರುವ ಆರ್.ಎನ್.ಶೆಟ್ಟಿ ಕಾಲೇಜಿನಲ್ಲಿ ಎಂ.ಟೆಕ್ ಪದವೀಧರರಾದ ಪರಶುರಾಮ ಹಲಗೇಕರ ಎಂಬುವರು ಕಳೆದ 9 ವರ್ಷಗಳಿಂದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಾಚಾರ್ಯರಾಗುವ ಎಲ್ಲ ಅರ್ಹತೆಗಳನ್ನು ಅವರು ಹೊಂದಿದ್ದಾರೆ. ಆದರೆ, ಅವರಿಗೆ ಪ್ರಾಚಾರ್ಯ ಹುದ್ದೆ ನೀಡದೇ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.<br /> <br /> `ಬ್ಯಾಂಕ್ಗಳು, ವಿಮೆ ಕಂಪೆನಿಗಳು, ಪಾಲಿಕೆ, ಪ್ರಾಧಿಕಾರ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಆರ್ಟಿಇ ಕಾಯ್ದೆಯಡಿ ವಕೀಲರನ್ನು ನೇಮಿಸಿಕೊಳ್ಳುವ ಅಧಿಕಾರವಿರುತ್ತದೆ. ಆದರೆ, ಇವುಗಳು ದಲಿತ ಸಮಾಜಕ್ಕೆ ಸೇರಿದ ವಕೀಲರನ್ನು ನೇಮಕ ಮಾಡಿಕೊಳ್ಳಲು ನಿರ್ಲಕ್ಷ್ಯ ತಾಳುತ್ತಿವೆ' ಎಂದು ವಕೀಲ ಸತೀಶ ಕರಾಳೆ ಆಪಾದಿಸಿದರು.<br /> <br /> ಬಾಲಚಂದ್ರ ಕಾಳೆ, ಗಜಾನನ ದೇವರಮನಿ, ಸುಧಾಕರ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>