<p><strong>ಚಿಕ್ಕೋಡಿ: </strong>`ವಿಸ್ತಾರವಾಗಿರುವ ಸ್ಪರ್ಧಾ ಜಗತ್ತಿನಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಹಿರಿದಾದ ಕನಸುಗಳನ್ನು ಹೆಣೆದುಕೊಂಡು ಆ ಉನ್ನತ ಗುರಿ ಸಾಧನೆಗೆ ಕಠಿಣ ಪರಿಶ್ರಮ ಪಡಬೇಕು. ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಲು ಪರಿಶ್ರಮಕ್ಕೆ ಪರ್ಯಾಯವೇ ಇಲ್ಲ~ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಪ್ರೊ.ಪಿ.ವಿ. ಶಿವಪುಲ್ಲಯ್ಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.<br /> <br /> ಪಟ್ಟಣದ ಕೆಎಲ್ಇ ಸಂಸ್ಥೆಯ ಕೆ.ಎಲ್.ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಎರಡು ದಿನಗಳ ರಾಷ್ಟ್ರಮಟ್ಟದ ತಾಂತ್ರಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿ ಗೊಂದಲಗಳಿಗೆ ಈಡಾಗದೇ, ಭವಿಷ್ಯತ್ತಿನ ಕುರಿತು ಸ್ಪಷ್ಟ ನಿರ್ಧಾರ ಹೊಂದಿರಬೇಕು. ಆಯ್ದುಕೊಂಡ ಕ್ಷೇತ್ರದಲ್ಲಿ ವಿಶಿಷ್ಟವಾದ ಸಾಧನೆಯನ್ನು ಮಾಡಿ ತೋರಿಸಲು ಸತತ ಪರಿಶ್ರಮ ವಹಿಸಬೇಕು. ವಿಷಯವನ್ನು ಆಳವಾಗಿ ಅಧ್ಯಯನಗೈದು ನೂತನ ಅವಿಷ್ಕಾರದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. <br /> <br /> ಅಧ್ಯಕ್ಷತೆ ವಹಿಸಿದ್ದ ಕೆ.ಎಲ್.ಇ ಸ್ವಾಯತ್ತ ವಿಶ್ವವಿದ್ಯಾಲಯದ ಕುಲಪತಿ ಡಾ. ಚಂದ್ರಕಾಂತ ಕೋಕಾಟೆ ಅವರು, ವಿದ್ಯಾರ್ಥಿಗಳು ಸವಾಲುಗಳನ್ನು ಸ್ವೀಕರಿಸಿದಾಗಲೇ ಸಾಮರ್ಥ್ಯ ವೃದ್ದಿಯಾಗುತ್ತದೆ. ಸೋಲುಗಳನ್ನು ನಿರಾಶಾಭಾವದಿಂದ ಕಾಣದೇ ಸೋಲನ್ನೇ ಸವಾಲಾಗಿ ಪರಿಗಣಿಸಿ ಗೆಲುವಿನತ್ತ ಚಿಂತನೆ ಹರಿಸಬೇಕು ಎಂದು ಹೇಳಿದರು.<br /> <br /> ಪ್ರಾಚಾರ್ಯ ಡಾ. ಬಸವರಾಜ ಕಟಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಾದ ಕೇಶವ ಮುತಾಲಿಕ, ಕೇಶವ, ದೀನಾನಾಥ ಕುಲಕರ್ಣಿ, ಪ್ರಕಾಶ ಬಂಧಾರೆ, ಶಾಂಭವಿ ಅನಿಸಿಕೆಗಳನ್ನು ಹಂಚಿಕೊಂಡರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.<br /> <br /> ಸಂಯೋಜಕರಾದ ಪ್ರೊ.ಬಿ.ಪಿ. ಹಲಗಲಿ, ಪ್ರೊ. ಪ್ರಭು ಚೌಧರಿ, ಪ್ರೊ.ವೀರಭದ್ರ, ಪ್ರೊ.ಪಿ.ಬಿ. ಮುತಾಲಿಕದೇಸಾಯಿ, ಪ್ರೊ.ದರ್ಶನ ಬಿಳ್ಳೂರ, ಪ್ರೊ. ಸುನೀಲ ಹೆಬ್ಬಾಳೆ, ಪ್ರೊ. ಎನ್.ಎಂ. ಗಿರೀಶ, ಪ್ರೊ. ಚಂದ್ರಶೇಖರ ಸುಳ್ಳದ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.<br /> <br /> ದೀಪಾ ಕುರೇರ ಸ್ವಾಗತಿಸಿದರು. ವಿನಯಾ ಕುಡತರಕರ ಮತ್ತು ರಾಮಕೃಷ್ಣನ್ ನಿರೂಪಿಸಿದರು. ಸಂಯೋಜಕರಾದ ಎಚ್. ಮುರುಗೇಶ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ: </strong>`ವಿಸ್ತಾರವಾಗಿರುವ ಸ್ಪರ್ಧಾ ಜಗತ್ತಿನಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಹಿರಿದಾದ ಕನಸುಗಳನ್ನು ಹೆಣೆದುಕೊಂಡು ಆ ಉನ್ನತ ಗುರಿ ಸಾಧನೆಗೆ ಕಠಿಣ ಪರಿಶ್ರಮ ಪಡಬೇಕು. ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಲು ಪರಿಶ್ರಮಕ್ಕೆ ಪರ್ಯಾಯವೇ ಇಲ್ಲ~ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಪ್ರೊ.ಪಿ.ವಿ. ಶಿವಪುಲ್ಲಯ್ಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.<br /> <br /> ಪಟ್ಟಣದ ಕೆಎಲ್ಇ ಸಂಸ್ಥೆಯ ಕೆ.ಎಲ್.ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಎರಡು ದಿನಗಳ ರಾಷ್ಟ್ರಮಟ್ಟದ ತಾಂತ್ರಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿ ಗೊಂದಲಗಳಿಗೆ ಈಡಾಗದೇ, ಭವಿಷ್ಯತ್ತಿನ ಕುರಿತು ಸ್ಪಷ್ಟ ನಿರ್ಧಾರ ಹೊಂದಿರಬೇಕು. ಆಯ್ದುಕೊಂಡ ಕ್ಷೇತ್ರದಲ್ಲಿ ವಿಶಿಷ್ಟವಾದ ಸಾಧನೆಯನ್ನು ಮಾಡಿ ತೋರಿಸಲು ಸತತ ಪರಿಶ್ರಮ ವಹಿಸಬೇಕು. ವಿಷಯವನ್ನು ಆಳವಾಗಿ ಅಧ್ಯಯನಗೈದು ನೂತನ ಅವಿಷ್ಕಾರದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. <br /> <br /> ಅಧ್ಯಕ್ಷತೆ ವಹಿಸಿದ್ದ ಕೆ.ಎಲ್.ಇ ಸ್ವಾಯತ್ತ ವಿಶ್ವವಿದ್ಯಾಲಯದ ಕುಲಪತಿ ಡಾ. ಚಂದ್ರಕಾಂತ ಕೋಕಾಟೆ ಅವರು, ವಿದ್ಯಾರ್ಥಿಗಳು ಸವಾಲುಗಳನ್ನು ಸ್ವೀಕರಿಸಿದಾಗಲೇ ಸಾಮರ್ಥ್ಯ ವೃದ್ದಿಯಾಗುತ್ತದೆ. ಸೋಲುಗಳನ್ನು ನಿರಾಶಾಭಾವದಿಂದ ಕಾಣದೇ ಸೋಲನ್ನೇ ಸವಾಲಾಗಿ ಪರಿಗಣಿಸಿ ಗೆಲುವಿನತ್ತ ಚಿಂತನೆ ಹರಿಸಬೇಕು ಎಂದು ಹೇಳಿದರು.<br /> <br /> ಪ್ರಾಚಾರ್ಯ ಡಾ. ಬಸವರಾಜ ಕಟಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಾದ ಕೇಶವ ಮುತಾಲಿಕ, ಕೇಶವ, ದೀನಾನಾಥ ಕುಲಕರ್ಣಿ, ಪ್ರಕಾಶ ಬಂಧಾರೆ, ಶಾಂಭವಿ ಅನಿಸಿಕೆಗಳನ್ನು ಹಂಚಿಕೊಂಡರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.<br /> <br /> ಸಂಯೋಜಕರಾದ ಪ್ರೊ.ಬಿ.ಪಿ. ಹಲಗಲಿ, ಪ್ರೊ. ಪ್ರಭು ಚೌಧರಿ, ಪ್ರೊ.ವೀರಭದ್ರ, ಪ್ರೊ.ಪಿ.ಬಿ. ಮುತಾಲಿಕದೇಸಾಯಿ, ಪ್ರೊ.ದರ್ಶನ ಬಿಳ್ಳೂರ, ಪ್ರೊ. ಸುನೀಲ ಹೆಬ್ಬಾಳೆ, ಪ್ರೊ. ಎನ್.ಎಂ. ಗಿರೀಶ, ಪ್ರೊ. ಚಂದ್ರಶೇಖರ ಸುಳ್ಳದ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.<br /> <br /> ದೀಪಾ ಕುರೇರ ಸ್ವಾಗತಿಸಿದರು. ವಿನಯಾ ಕುಡತರಕರ ಮತ್ತು ರಾಮಕೃಷ್ಣನ್ ನಿರೂಪಿಸಿದರು. ಸಂಯೋಜಕರಾದ ಎಚ್. ಮುರುಗೇಶ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>