<p><strong>ಬೀದರ್: </strong>ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ತಾವು ಆಯ್ಕೆಯಾದಲ್ಲಿ ಪರಿಷತ್ತಿಗೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಲು ಪ್ರಯತ್ನಿಸುವುದಾಗಿ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಶೇಖರಗೌಡ ಮಾಲಿಪಾಟೀಲ್ ತಿಳಿಸಿದರು.<br /> <br /> ಸದ್ಯ ಪರಿಷತ್ತಿಗೆ ಆರ್ಥಿಕ ಸ್ವಾವಲಂಬನೆ ಇಲ್ಲ. ತಮ್ಮನ್ನು ಆಯ್ಕೆ ಮಾಡಿದ್ದಲ್ಲಿ ಸರ್ಕಾರದ ಜೊತೆಗೆ ಸೌಹಾರ್ದ ಸಂಬಂಧ ಇಟ್ಟುಕೊಂಡು ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳಿಗೆ ಸರ್ಕಾರದಿಂದ ನೇರವಾಗಿ ಅನುದಾನ ಬರುವಂತೆ ಕಾರ್ಯನಿರ್ವಹಿಸುವುದಾಗಿ ಬುಧವಾರ ಪತ್ರಿಕಾಗೊಷ್ಠಿಯಲ್ಲಿ ಹೇಳಿದರು.</p>.<p>ಈಗಾಗಲೇ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿ ಎರಡು ಅವಧಿಗೆ ಕಾರ್ಯ ನಿರ್ವಹಿಸಿದ್ದೇನೆ. ಗಂಗಾವತಿಯಲ್ಲಿ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ್ದೇನೆ. ಕನ್ನಡ ಸಾಹಿತ್ಯ ಪರಿಷತ್ತನ್ನು ಅಗ್ರ ಶಕ್ತಿಯಾಗಿ ಬೆಳೆಸುವ ಉದ್ದೇಶದಿಂದ ಈ ಬಾರಿಯ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ ಎಂದು ತಿಳಿಸಿದರು.<br /> <br /> ಈವರೆಗೆ ಬೆಂಗಳೂರು ಹಾಗೂ ಮೈಸೂರು ಕಡೆಯವರು ಪರಿಷತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಪ್ರತಿನಿಧಿಯಾಗಿ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಉತ್ತರ ಕರ್ನಾಟಕದ ಎಲ್ಲ 15 ಜಿಲ್ಲೆಗಳಲ್ಲಿ ತಮಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.<br /> <br /> ಮತದಾರರು ಅವಕಾಶ ನೀಡಿದ್ದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆಯಾಗಿ ನೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಶತಮಾನೋತ್ಸವವನ್ನು ಯಶಸ್ವಿಯಾಗಿ ನಡೆಸಲಾಗುವುದು. ಶತಮಾನೋತ್ಸವ ಸಂದರ್ಭದಲ್ಲಿ 100 ಜನ ಸಾಹಿತಿಗಳ ಪರಿಚಯ ಒಳಗೊಂಡ ಸಂಪುಟ ಹೊರತರಲಾಗುವುದು ಎಂದು ತಿಳಿಸಿದರು.<br /> <br /> ಕನ್ನಡ ಭಾಷೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ಪರಿಹರಿಸಲು ಪ್ರಯತ್ನಿಸಲಾಗುವುದು. ಪರಿಷತ್ತನ್ನು ಅಖಂಡ ಕರ್ನಾಟಕದ ಬದುಕಿನ ಸಾಕ್ಷಿಪ್ರಜ್ಞೆಯಾಗಿ ಮುನ್ನಡೆಸಲಾಗುವುದು. ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕತಿಗೆ ಅಪಚಾರವಾದರೆ ಕನ್ನಡಿಗರೊಂದಿಗೆ ಬೀದಿಗಳಿದು ಹೋರಾಟ ನಡೆಸಲಾಗುವುದು ಎಂದು ಹೇಳಿದರು.<br /> <br /> ಗಡಿಭಾಗಗಳಲ್ಲಿ ಇರುವ ಕನ್ನಡ ಶಾಲೆಗಳ ಸಬಲೀಕರಣಕ್ಕೆ ಪ್ರಯತ್ನಿಸಲಾಗುವುದು. ಕನ್ನಡಪರ ಚಟುವಟಿಕೆಗಳನ್ನು ರಾಜ್ಯಾದ್ಯಂತ ನಡೆಸಲಾಗುವುದು. ಪರಿಷತ್ ಉಳಿಸಿ ಬೆಳೆಸಲು ಯೋಜನೆ ರೂಪಿಸಲಾಗುವುದು. ಕನ್ನಡದ ಮೇರು ಬರಹಗಾರರ ಮೌಲಿಕ ಕೃತಿಗಳ ಮರು ಮುದ್ರಣ ಹಾಗೂ ಅನುವಾದಕ್ಕೆ ಆದ್ಯತೆ ನೀಡಲಾಗುವುದು. <br /> <br /> ಯುವ ಬರಹಗಾರರ ಕೃತಿಗಳ ಪ್ರಕಟಣೆ, ಲಭ್ಯವಿರದ ಮಹತ್ವದ ಕೃತಿಗಳನ್ನು ಮರುಮುದ್ರಣ ಮಾಡಲಾಗುವುದು. ಕನ್ನಡದ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು. ಕೇಂದ್ರ ಸರ್ಕಾರದ ಉದ್ಯೋಗಳಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುವುದು ಎಂದು ವಿವರಿಸಿದರು.<br /> <br /> ಬೀದರ್ ಜಿಲ್ಲೆಯ ಮತದಾರ ಬಾಂಧವರು ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ತಾವು ಆಯ್ಕೆಯಾದಲ್ಲಿ ಪರಿಷತ್ತಿಗೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಲು ಪ್ರಯತ್ನಿಸುವುದಾಗಿ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಶೇಖರಗೌಡ ಮಾಲಿಪಾಟೀಲ್ ತಿಳಿಸಿದರು.<br /> <br /> ಸದ್ಯ ಪರಿಷತ್ತಿಗೆ ಆರ್ಥಿಕ ಸ್ವಾವಲಂಬನೆ ಇಲ್ಲ. ತಮ್ಮನ್ನು ಆಯ್ಕೆ ಮಾಡಿದ್ದಲ್ಲಿ ಸರ್ಕಾರದ ಜೊತೆಗೆ ಸೌಹಾರ್ದ ಸಂಬಂಧ ಇಟ್ಟುಕೊಂಡು ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳಿಗೆ ಸರ್ಕಾರದಿಂದ ನೇರವಾಗಿ ಅನುದಾನ ಬರುವಂತೆ ಕಾರ್ಯನಿರ್ವಹಿಸುವುದಾಗಿ ಬುಧವಾರ ಪತ್ರಿಕಾಗೊಷ್ಠಿಯಲ್ಲಿ ಹೇಳಿದರು.</p>.<p>ಈಗಾಗಲೇ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿ ಎರಡು ಅವಧಿಗೆ ಕಾರ್ಯ ನಿರ್ವಹಿಸಿದ್ದೇನೆ. ಗಂಗಾವತಿಯಲ್ಲಿ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ್ದೇನೆ. ಕನ್ನಡ ಸಾಹಿತ್ಯ ಪರಿಷತ್ತನ್ನು ಅಗ್ರ ಶಕ್ತಿಯಾಗಿ ಬೆಳೆಸುವ ಉದ್ದೇಶದಿಂದ ಈ ಬಾರಿಯ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ ಎಂದು ತಿಳಿಸಿದರು.<br /> <br /> ಈವರೆಗೆ ಬೆಂಗಳೂರು ಹಾಗೂ ಮೈಸೂರು ಕಡೆಯವರು ಪರಿಷತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಪ್ರತಿನಿಧಿಯಾಗಿ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಉತ್ತರ ಕರ್ನಾಟಕದ ಎಲ್ಲ 15 ಜಿಲ್ಲೆಗಳಲ್ಲಿ ತಮಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.<br /> <br /> ಮತದಾರರು ಅವಕಾಶ ನೀಡಿದ್ದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆಯಾಗಿ ನೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಶತಮಾನೋತ್ಸವವನ್ನು ಯಶಸ್ವಿಯಾಗಿ ನಡೆಸಲಾಗುವುದು. ಶತಮಾನೋತ್ಸವ ಸಂದರ್ಭದಲ್ಲಿ 100 ಜನ ಸಾಹಿತಿಗಳ ಪರಿಚಯ ಒಳಗೊಂಡ ಸಂಪುಟ ಹೊರತರಲಾಗುವುದು ಎಂದು ತಿಳಿಸಿದರು.<br /> <br /> ಕನ್ನಡ ಭಾಷೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ಪರಿಹರಿಸಲು ಪ್ರಯತ್ನಿಸಲಾಗುವುದು. ಪರಿಷತ್ತನ್ನು ಅಖಂಡ ಕರ್ನಾಟಕದ ಬದುಕಿನ ಸಾಕ್ಷಿಪ್ರಜ್ಞೆಯಾಗಿ ಮುನ್ನಡೆಸಲಾಗುವುದು. ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕತಿಗೆ ಅಪಚಾರವಾದರೆ ಕನ್ನಡಿಗರೊಂದಿಗೆ ಬೀದಿಗಳಿದು ಹೋರಾಟ ನಡೆಸಲಾಗುವುದು ಎಂದು ಹೇಳಿದರು.<br /> <br /> ಗಡಿಭಾಗಗಳಲ್ಲಿ ಇರುವ ಕನ್ನಡ ಶಾಲೆಗಳ ಸಬಲೀಕರಣಕ್ಕೆ ಪ್ರಯತ್ನಿಸಲಾಗುವುದು. ಕನ್ನಡಪರ ಚಟುವಟಿಕೆಗಳನ್ನು ರಾಜ್ಯಾದ್ಯಂತ ನಡೆಸಲಾಗುವುದು. ಪರಿಷತ್ ಉಳಿಸಿ ಬೆಳೆಸಲು ಯೋಜನೆ ರೂಪಿಸಲಾಗುವುದು. ಕನ್ನಡದ ಮೇರು ಬರಹಗಾರರ ಮೌಲಿಕ ಕೃತಿಗಳ ಮರು ಮುದ್ರಣ ಹಾಗೂ ಅನುವಾದಕ್ಕೆ ಆದ್ಯತೆ ನೀಡಲಾಗುವುದು. <br /> <br /> ಯುವ ಬರಹಗಾರರ ಕೃತಿಗಳ ಪ್ರಕಟಣೆ, ಲಭ್ಯವಿರದ ಮಹತ್ವದ ಕೃತಿಗಳನ್ನು ಮರುಮುದ್ರಣ ಮಾಡಲಾಗುವುದು. ಕನ್ನಡದ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು. ಕೇಂದ್ರ ಸರ್ಕಾರದ ಉದ್ಯೋಗಳಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುವುದು ಎಂದು ವಿವರಿಸಿದರು.<br /> <br /> ಬೀದರ್ ಜಿಲ್ಲೆಯ ಮತದಾರ ಬಾಂಧವರು ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>