<p>ದೇವನಹಳ್ಳಿ: ಪ್ರಕೃತಿ ಮಾನವನಿಗೆ ಎಲ್ಲಾ ರೀತಿಯಿಂದ ಸಹಕರಿಸಿ ಕೊಡುಗೆ ನೀಡುತ್ತಿದ್ದರೆ ಪ್ರತಿಯಾಗಿ ಮಾನವ ಅದಕ್ಕೆ ಏನು ಮಾಡಿದ್ದಾನೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ನಾಗೇಶ್ ತಿಳಿಸಿದರು.<br /> <br /> ತಾಲ್ಲೂಕಿನ ಗಡಿಯಂಚಿನ ಚನ್ನಗಿರಿ ಬೆಟ್ಟದ ತಪ್ಪಲಲ್ಲಿ ದೇವನಹಳ್ಳಿ ಸರಸ್ವತಿ ಸಂಗೀತ ವಿದ್ಯಾಲಯದ ವತಿಯಿಂದ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ಸರಸ್ವತಿ ಸಂಗೀತ ವಿದ್ಯಾಲಯ ಸಂಸ್ಥೆ ಅಧ್ಯಕ್ಷ ಕಲ್ಪನಾ ವಿಶ್ವನಾಥ ಮಾತನಾಡಿ, ಸಂಗೀತ ಹಾಗೂ ಪರಿಸರ ಒಂದೇ ನಾಣ್ಯದ ಎರಡು ಮುಖಗಳು. ಗಾಯಕನ ಮತ್ತು ಸಂಗೀತ ರಚನೆಕಾರರಿಗೆ ಪ್ರಕೃತಿ ಸ್ಫೂರ್ತಿಯ ತಾಣ. ಈ ಹಿನ್ನೆಲೆಯಲ್ಲಿ ಸಂಗೀತದೊಂದಿಗೆ ಪರಿಸರ ಪ್ರಜ್ಞೆ ಮೂಡಿಸಲಾಗುತ್ತಿದೆ ಎಂದರು.<br /> <br /> ಕಾರ್ಯದರ್ಶಿ ಗೋಪಾಲ್ ಮಾತನಾಡಿ, ಸಂಸ್ಥೆಯು ಗಾಯನ ಸ್ಪರ್ಧೆ, ಚಾರಣ ಶಿಬಿರ, ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡು ಮಾನಸಿಕ, ದೈಹಿಕ ಸಾಮರ್ಥ್ಯದ ಜೊತೆಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದೆ ಎಂದರು.<br /> <br /> ಕಾರ್ಯಕ್ರಮದಲ್ಲಿ ಸರಸ್ವತಿ ಸಂಗೀತ ವಿದ್ಯಾಲಯ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ಪ್ರಕೃತಿ ಮಾನವನಿಗೆ ಎಲ್ಲಾ ರೀತಿಯಿಂದ ಸಹಕರಿಸಿ ಕೊಡುಗೆ ನೀಡುತ್ತಿದ್ದರೆ ಪ್ರತಿಯಾಗಿ ಮಾನವ ಅದಕ್ಕೆ ಏನು ಮಾಡಿದ್ದಾನೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ನಾಗೇಶ್ ತಿಳಿಸಿದರು.<br /> <br /> ತಾಲ್ಲೂಕಿನ ಗಡಿಯಂಚಿನ ಚನ್ನಗಿರಿ ಬೆಟ್ಟದ ತಪ್ಪಲಲ್ಲಿ ದೇವನಹಳ್ಳಿ ಸರಸ್ವತಿ ಸಂಗೀತ ವಿದ್ಯಾಲಯದ ವತಿಯಿಂದ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ಸರಸ್ವತಿ ಸಂಗೀತ ವಿದ್ಯಾಲಯ ಸಂಸ್ಥೆ ಅಧ್ಯಕ್ಷ ಕಲ್ಪನಾ ವಿಶ್ವನಾಥ ಮಾತನಾಡಿ, ಸಂಗೀತ ಹಾಗೂ ಪರಿಸರ ಒಂದೇ ನಾಣ್ಯದ ಎರಡು ಮುಖಗಳು. ಗಾಯಕನ ಮತ್ತು ಸಂಗೀತ ರಚನೆಕಾರರಿಗೆ ಪ್ರಕೃತಿ ಸ್ಫೂರ್ತಿಯ ತಾಣ. ಈ ಹಿನ್ನೆಲೆಯಲ್ಲಿ ಸಂಗೀತದೊಂದಿಗೆ ಪರಿಸರ ಪ್ರಜ್ಞೆ ಮೂಡಿಸಲಾಗುತ್ತಿದೆ ಎಂದರು.<br /> <br /> ಕಾರ್ಯದರ್ಶಿ ಗೋಪಾಲ್ ಮಾತನಾಡಿ, ಸಂಸ್ಥೆಯು ಗಾಯನ ಸ್ಪರ್ಧೆ, ಚಾರಣ ಶಿಬಿರ, ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡು ಮಾನಸಿಕ, ದೈಹಿಕ ಸಾಮರ್ಥ್ಯದ ಜೊತೆಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದೆ ಎಂದರು.<br /> <br /> ಕಾರ್ಯಕ್ರಮದಲ್ಲಿ ಸರಸ್ವತಿ ಸಂಗೀತ ವಿದ್ಯಾಲಯ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>