<p>ಹಸಿರು ಮಕ್ಕಳಿಗೆ ಉತ್ಸಾಹ ನೀಡುವ `ಚಿಲುಮೆ~ ಎನ್ನಲಾಗುತ್ತದೆ. ಇದನ್ನರಿತ ಬಾಗೇಪಲ್ಲಿ ತಾಲ್ಲೂಕಿನ ಚೇಳೂರು ಹೋಬಳಿ ಷೇರ್ಖಾನ್ ಕೋಟೆ ಗ್ರಾಮದ ಸರ್ಕಾರಿ ಶಾಲೆ ವಿಭಿನ್ನ ಪ್ರಯೋಗ ಮಾಡಿದೆ. ಇಲ್ಲಿನ ಶಾಲಾ ಆವರಣದಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಕೈತೋಟ ಬೆಳೆಸಿದ್ದಾರೆ. <br /> ತೋಟವು ಹೂ-ಎಲೆಗಳಿಂದ ನಳನಳಿಸುತ್ತಿದೆ.<br /> <br /> ಈ ಶಾಲೆಯು ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಗಡಿಭಾಗದಲ್ಲಿದ್ದು, ಪಟ್ಟಣದಿಂದ ಸುಮಾರು 34 ಕಿ.ಮೀ. ದೂರ ಇದೆ. ಪ್ರತಿ ತಿಂಗಳು ಒಂದಿಲ್ಲೊಂದು ವಿಶೇಷ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳುವ ಈ ಶಾಲೆಯು ಇತ್ತೀಚಿನ ದಿನಗಳಲ್ಲಿ ಪರಿಸರತ್ತ ಹೆಚ್ಚಿನ ಆಸಕ್ತಿ ತೋರುತ್ತಿದೆ. ಈ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಮಾತ್ರವಲ್ಲದೇ ಆಯಾ ಗ್ರಾಮದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ.<br /> <br /> `ಪರಿಸರ ಜಾಗೃತಿ ಮತ್ತು ಕಾಳಜಿ ಕುರಿತು ಪಠ್ಯಪುಸ್ತಕಗಳಲ್ಲಿ ಬೋಧನೆ ಮಾಡಿದರೆ ಸಾಲದು. ವಿದ್ಯಾರ್ಥಿಗಳಲ್ಲಿ ನೈಜ ಪರಿಸರ ಕಾಳಜಿ ಮೂಡಿಸಲು ಪರಿಸರದ ಪಾಠವನ್ನೂ ಮಾಡುತ್ತೇವೆ. ಶಾಲಾ ಆವರಣದಲ್ಲಿ ಬಣ್ಣಬಣ್ಣದ ಹೂಗಳನ್ನು, ಕಾಯಿಗಳನ್ನು ಮತ್ತು ಸುಗಂಧ ಸೂಸುವ ಸಸ್ಯಗಳನ್ನು ಬೆಳೆಸಿದ್ದೇವೆ. <br /> ಹೂಗಿಡಗಳು ಅಲ್ಲದೇ ಹಣ್ಣುತರಕಾರಿಗಳನ್ನು ಮತ್ತು ಸಸ್ಯಗಳನ್ನು ಬೆಳೆಸಿದ್ದೇವೆ. ತರಕಾರಿ-ಸೊಪ್ಪುಗಳನ್ನು ಮಧ್ಯಾಹ್ನದ ಬಿಸಿಯೂಟಕ್ಕೆ ಬಳಸುತ್ತೇವೆ~ ಎಂದು ಶಾಲೆಯ ಮುಖ್ಯ ಶಿಕ್ಷಕಿ ಸರಸ್ವತಮ್ಮ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `1962ರಲ್ಲಿ ಸ್ಥಾಪನೆಗೊಂಡ ನಮ್ಮ ಶಾಲೆಯು ಕುಡಿಯುವ ನೀರು, ಶೌಚಾಲಯ ಸೌಲಭ್ಯ ಮತ್ತು ಕಾಂಪೌಂಡ್ ಒಳಗೊಂಡಿದೆ. ಉತ್ತಮ ವಾತಾವರಣದಲ್ಲಿ ವಿದ್ಯಾಭ್ಯಾಸ ಮಾಡಲು ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರುತ್ತಾರೆ. ಹೈದರಾಬಾದ್ನ ಮಾನ್ಸೆಂಟೊ ಮಾನವ ಹಕ್ಕುಗಳ ಸಂಸ್ಥೆಯು ನಮ್ಮ ಶಾಲೆಗೆ `ಉತ್ತಮ ಪರಿಸರ ಸ್ನೇಹಿ~ ಪ್ರಶಸ್ತಿ ನೀಡಿ ಪುರಸ್ಕರಿಸಿದೆ. ಸಂಸ್ಥೆ ವತಿಯಿಂದ ಶಾಲೆಗೆ ಉಚಿತವಾಗಿ ಕಂಪ್ಯೂಟರ್ಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಉದ್ದೇಶ~ ಎಂದು ಅವರು ತಿಳಿಸಿದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಸಿರು ಮಕ್ಕಳಿಗೆ ಉತ್ಸಾಹ ನೀಡುವ `ಚಿಲುಮೆ~ ಎನ್ನಲಾಗುತ್ತದೆ. ಇದನ್ನರಿತ ಬಾಗೇಪಲ್ಲಿ ತಾಲ್ಲೂಕಿನ ಚೇಳೂರು ಹೋಬಳಿ ಷೇರ್ಖಾನ್ ಕೋಟೆ ಗ್ರಾಮದ ಸರ್ಕಾರಿ ಶಾಲೆ ವಿಭಿನ್ನ ಪ್ರಯೋಗ ಮಾಡಿದೆ. ಇಲ್ಲಿನ ಶಾಲಾ ಆವರಣದಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಕೈತೋಟ ಬೆಳೆಸಿದ್ದಾರೆ. <br /> ತೋಟವು ಹೂ-ಎಲೆಗಳಿಂದ ನಳನಳಿಸುತ್ತಿದೆ.<br /> <br /> ಈ ಶಾಲೆಯು ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಗಡಿಭಾಗದಲ್ಲಿದ್ದು, ಪಟ್ಟಣದಿಂದ ಸುಮಾರು 34 ಕಿ.ಮೀ. ದೂರ ಇದೆ. ಪ್ರತಿ ತಿಂಗಳು ಒಂದಿಲ್ಲೊಂದು ವಿಶೇಷ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳುವ ಈ ಶಾಲೆಯು ಇತ್ತೀಚಿನ ದಿನಗಳಲ್ಲಿ ಪರಿಸರತ್ತ ಹೆಚ್ಚಿನ ಆಸಕ್ತಿ ತೋರುತ್ತಿದೆ. ಈ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಮಾತ್ರವಲ್ಲದೇ ಆಯಾ ಗ್ರಾಮದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ.<br /> <br /> `ಪರಿಸರ ಜಾಗೃತಿ ಮತ್ತು ಕಾಳಜಿ ಕುರಿತು ಪಠ್ಯಪುಸ್ತಕಗಳಲ್ಲಿ ಬೋಧನೆ ಮಾಡಿದರೆ ಸಾಲದು. ವಿದ್ಯಾರ್ಥಿಗಳಲ್ಲಿ ನೈಜ ಪರಿಸರ ಕಾಳಜಿ ಮೂಡಿಸಲು ಪರಿಸರದ ಪಾಠವನ್ನೂ ಮಾಡುತ್ತೇವೆ. ಶಾಲಾ ಆವರಣದಲ್ಲಿ ಬಣ್ಣಬಣ್ಣದ ಹೂಗಳನ್ನು, ಕಾಯಿಗಳನ್ನು ಮತ್ತು ಸುಗಂಧ ಸೂಸುವ ಸಸ್ಯಗಳನ್ನು ಬೆಳೆಸಿದ್ದೇವೆ. <br /> ಹೂಗಿಡಗಳು ಅಲ್ಲದೇ ಹಣ್ಣುತರಕಾರಿಗಳನ್ನು ಮತ್ತು ಸಸ್ಯಗಳನ್ನು ಬೆಳೆಸಿದ್ದೇವೆ. ತರಕಾರಿ-ಸೊಪ್ಪುಗಳನ್ನು ಮಧ್ಯಾಹ್ನದ ಬಿಸಿಯೂಟಕ್ಕೆ ಬಳಸುತ್ತೇವೆ~ ಎಂದು ಶಾಲೆಯ ಮುಖ್ಯ ಶಿಕ್ಷಕಿ ಸರಸ್ವತಮ್ಮ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `1962ರಲ್ಲಿ ಸ್ಥಾಪನೆಗೊಂಡ ನಮ್ಮ ಶಾಲೆಯು ಕುಡಿಯುವ ನೀರು, ಶೌಚಾಲಯ ಸೌಲಭ್ಯ ಮತ್ತು ಕಾಂಪೌಂಡ್ ಒಳಗೊಂಡಿದೆ. ಉತ್ತಮ ವಾತಾವರಣದಲ್ಲಿ ವಿದ್ಯಾಭ್ಯಾಸ ಮಾಡಲು ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರುತ್ತಾರೆ. ಹೈದರಾಬಾದ್ನ ಮಾನ್ಸೆಂಟೊ ಮಾನವ ಹಕ್ಕುಗಳ ಸಂಸ್ಥೆಯು ನಮ್ಮ ಶಾಲೆಗೆ `ಉತ್ತಮ ಪರಿಸರ ಸ್ನೇಹಿ~ ಪ್ರಶಸ್ತಿ ನೀಡಿ ಪುರಸ್ಕರಿಸಿದೆ. ಸಂಸ್ಥೆ ವತಿಯಿಂದ ಶಾಲೆಗೆ ಉಚಿತವಾಗಿ ಕಂಪ್ಯೂಟರ್ಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಉದ್ದೇಶ~ ಎಂದು ಅವರು ತಿಳಿಸಿದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>