<p><strong>ಸಿಂದಗಿ:</strong> ಪರಿಸರ ರಕ್ಷಣೆ ಪ್ರತಿಯೊಬ್ಬ ವ್ಯಕ್ತಿಯ ಆದ್ಯ ಕರ್ತವ್ಯ. ಪರಿಸರ ನಾಶಗೊಂಡರೆ ಇಡೀ ಮನುಕುಲವೇ ನಾಶವಾದಂತೆ ಎಂದು ಸಾಮಾಜಿಕ ಅರಣ್ಯ ಇಲಾಖೆ ಅರಣ್ಯಾಧಿಕಾರಿ ಎ.ಎಸ್. ನೇಗಿನಾಳ ಅಭಿಪ್ರಾಯಪಟ್ಟರು.<br /> <br /> ಪಟ್ಟಣದ ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಸುರಭಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಕ್ಲಬ್ ಕಲ್ಯಾಣ ನಗರ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> ಶಾಲಾ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯ ಬೇಕಿದೆ ಎಂದು ಸಲಹೆ ನೀಡಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಅಧ್ಯಕ್ಷ ಮಹಿಪತಿ ದೇಸಾಯಿ ಪಟ್ಟಣದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿ ಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಕಾರ್ಯ ಕೈಗೆತ್ತಿಕೊಳ್ಳುವುದರ ಜೊತೆಗೆ ಶಾಲಾ ಆವರಣದಲ್ಲಿ ಗಿಡಗಳನ್ನು ಬೆಳೆ ಸುವ ಯೋಜನೆ ರೋಟರಿ ಸಂಸ್ಥೆ ಹಾಕಿ ಕೊಂಡಿದೆ ಎಂದು ಮಾತನಾಡಿದರು.<br /> <br /> ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶರದ ನಾಡಗೌಡ ಅತಿಥಿಗಳಾಗಿದ್ದರು. ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ಡಾ.ಗಿರೀಶ ಕುಲಕರ್ಣಿ, ಡಾ.ಮಹಾಂತೇಶ ಹಿರೇಮಠ, ಡಾ.ಪ್ರಕಾಶ ಉಪ್ಪಿನ, ಡಾ.ಸಂಗಮೇಶ ಪಾಟೀಲ, ಕಲಕೇರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಲ್ಲೂ ಬಿರಾದಾರ, ಡಾ.ಚಂದ್ರ ಶೇಖರ ಹಿರೇಗೌಡರ ಪಾಲ್ಗೊಂಡಿದ್ದರು.<br /> <br /> ರೋಟರಿ ಸಂಸ್ಥೆಯ ಕಾರ್ಯದರ್ಶಿ ಡಾ.ಸುನೀಲ ಪಾಟೀಲ ಸ್ವಾಗತಿಸಿದರು. ಡಾ.ಮಹಾಂತೇಶ ಹಿರೇಮಠ ನಿರೂಪಿಸಿದರು. ನಾಗರಾಜ ಕಲಬುರ್ಗಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ಪರಿಸರ ರಕ್ಷಣೆ ಪ್ರತಿಯೊಬ್ಬ ವ್ಯಕ್ತಿಯ ಆದ್ಯ ಕರ್ತವ್ಯ. ಪರಿಸರ ನಾಶಗೊಂಡರೆ ಇಡೀ ಮನುಕುಲವೇ ನಾಶವಾದಂತೆ ಎಂದು ಸಾಮಾಜಿಕ ಅರಣ್ಯ ಇಲಾಖೆ ಅರಣ್ಯಾಧಿಕಾರಿ ಎ.ಎಸ್. ನೇಗಿನಾಳ ಅಭಿಪ್ರಾಯಪಟ್ಟರು.<br /> <br /> ಪಟ್ಟಣದ ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಸುರಭಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಕ್ಲಬ್ ಕಲ್ಯಾಣ ನಗರ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> ಶಾಲಾ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯ ಬೇಕಿದೆ ಎಂದು ಸಲಹೆ ನೀಡಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಅಧ್ಯಕ್ಷ ಮಹಿಪತಿ ದೇಸಾಯಿ ಪಟ್ಟಣದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿ ಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಕಾರ್ಯ ಕೈಗೆತ್ತಿಕೊಳ್ಳುವುದರ ಜೊತೆಗೆ ಶಾಲಾ ಆವರಣದಲ್ಲಿ ಗಿಡಗಳನ್ನು ಬೆಳೆ ಸುವ ಯೋಜನೆ ರೋಟರಿ ಸಂಸ್ಥೆ ಹಾಕಿ ಕೊಂಡಿದೆ ಎಂದು ಮಾತನಾಡಿದರು.<br /> <br /> ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶರದ ನಾಡಗೌಡ ಅತಿಥಿಗಳಾಗಿದ್ದರು. ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ಡಾ.ಗಿರೀಶ ಕುಲಕರ್ಣಿ, ಡಾ.ಮಹಾಂತೇಶ ಹಿರೇಮಠ, ಡಾ.ಪ್ರಕಾಶ ಉಪ್ಪಿನ, ಡಾ.ಸಂಗಮೇಶ ಪಾಟೀಲ, ಕಲಕೇರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಲ್ಲೂ ಬಿರಾದಾರ, ಡಾ.ಚಂದ್ರ ಶೇಖರ ಹಿರೇಗೌಡರ ಪಾಲ್ಗೊಂಡಿದ್ದರು.<br /> <br /> ರೋಟರಿ ಸಂಸ್ಥೆಯ ಕಾರ್ಯದರ್ಶಿ ಡಾ.ಸುನೀಲ ಪಾಟೀಲ ಸ್ವಾಗತಿಸಿದರು. ಡಾ.ಮಹಾಂತೇಶ ಹಿರೇಮಠ ನಿರೂಪಿಸಿದರು. ನಾಗರಾಜ ಕಲಬುರ್ಗಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>