<p><strong>ದೊಡ್ಡಬಳ್ಳಾಪುರ:</strong> ನಗರೀಕರಣದ ಪ್ರಭಾವದಿಂದ ಉಂಟಾದ ಪರಿಸರ ಮಾಲಿನ್ಯದಿಂದಾಗಿ ಇಂದು ಅಸ್ತಮಾ, ಉಸಿರಾಟ ತೊಂದರೆ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಸ್.ಪಿ.ರಾಜಣ್ಣ ಹೇಳಿದರು.<br /> <br /> ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮನುಜಮತ ವಿಶ್ವಪಥ ಯುವ ವೇದಿಕೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ನಮ್ಮ ಸುತ್ತ ಮುತ್ತ ಪರಿಸರವನ್ನು ಕಾಪಾಡಿಕೊಳ್ಳುವ ಮೂಲಕ ಗಿಡಮರ ಬೆಳೆಸುವಲ್ಲಿ ಇಂದಿನ ಪೀಳಿಗೆ ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು.<br /> ಹವಾಮಾನ ವೈಪರಿತ್ಯಗಳಿಂದಾಗಿ ವಿಶ್ವದಲ್ಲಿ ಅನೇಕ ವಿಸ್ಮಯಗಳನ್ನು ಕಾಣುವಂತಾಗಿದೆ ಎಂದು ತಿಳಿಸಿದರು.<br /> <br /> ಭೂತಾಪಮಾನ, ಉಷ್ಣ ವಾತಾವರಣ ಮೊದಲಾಗಿ ಜೀವಿಗಳಿಗೆ ಮಾರಕವಾದ ವಾತಾವರಣ ಮೂಡಲು ಮನುಷ್ಯನ ದುರಾಸೆಯೇ ಕಾರಣವಾಗಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳದಿದ್ದರೆ ಮುಂದಿನ ಪರಿಸ್ಥಿತಿ ಭೀಕರವಾಗಿರುತ್ತದೆ ಎಂದು ಅವರು ವಿವರಿಸಿದರು.<br /> <br /> ಕಾಲೇಜಿನ ಆವರಣದಲ್ಲಿ ಹಲವಾರು ಸಸಿಗಳನ್ನು ನೆಡಲಾಯಿತು. ಇದೇ ವೇಳೆ ಅಂತಿಮ ಬಿ.ಎ. ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು. ವಿದ್ಯಾರ್ಥಿಗಳಿಗೆ ಸಸಿ ನೆಟ್ಟ ನೆನಪಿಗಾಗಿ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಡಿ.ಶ್ರೀಕಾಂತ, ಕನ್ನಡ ವಿಭಾಗದ ಮುಖ್ಯಸ್ಥ ಸಿ. ರಾಮಚಂದ್ರ, ಉಪನ್ಯಾಸಕ ಪ್ರವೀಣ್ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ನಗರೀಕರಣದ ಪ್ರಭಾವದಿಂದ ಉಂಟಾದ ಪರಿಸರ ಮಾಲಿನ್ಯದಿಂದಾಗಿ ಇಂದು ಅಸ್ತಮಾ, ಉಸಿರಾಟ ತೊಂದರೆ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಸ್.ಪಿ.ರಾಜಣ್ಣ ಹೇಳಿದರು.<br /> <br /> ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮನುಜಮತ ವಿಶ್ವಪಥ ಯುವ ವೇದಿಕೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ನಮ್ಮ ಸುತ್ತ ಮುತ್ತ ಪರಿಸರವನ್ನು ಕಾಪಾಡಿಕೊಳ್ಳುವ ಮೂಲಕ ಗಿಡಮರ ಬೆಳೆಸುವಲ್ಲಿ ಇಂದಿನ ಪೀಳಿಗೆ ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು.<br /> ಹವಾಮಾನ ವೈಪರಿತ್ಯಗಳಿಂದಾಗಿ ವಿಶ್ವದಲ್ಲಿ ಅನೇಕ ವಿಸ್ಮಯಗಳನ್ನು ಕಾಣುವಂತಾಗಿದೆ ಎಂದು ತಿಳಿಸಿದರು.<br /> <br /> ಭೂತಾಪಮಾನ, ಉಷ್ಣ ವಾತಾವರಣ ಮೊದಲಾಗಿ ಜೀವಿಗಳಿಗೆ ಮಾರಕವಾದ ವಾತಾವರಣ ಮೂಡಲು ಮನುಷ್ಯನ ದುರಾಸೆಯೇ ಕಾರಣವಾಗಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳದಿದ್ದರೆ ಮುಂದಿನ ಪರಿಸ್ಥಿತಿ ಭೀಕರವಾಗಿರುತ್ತದೆ ಎಂದು ಅವರು ವಿವರಿಸಿದರು.<br /> <br /> ಕಾಲೇಜಿನ ಆವರಣದಲ್ಲಿ ಹಲವಾರು ಸಸಿಗಳನ್ನು ನೆಡಲಾಯಿತು. ಇದೇ ವೇಳೆ ಅಂತಿಮ ಬಿ.ಎ. ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು. ವಿದ್ಯಾರ್ಥಿಗಳಿಗೆ ಸಸಿ ನೆಟ್ಟ ನೆನಪಿಗಾಗಿ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಡಿ.ಶ್ರೀಕಾಂತ, ಕನ್ನಡ ವಿಭಾಗದ ಮುಖ್ಯಸ್ಥ ಸಿ. ರಾಮಚಂದ್ರ, ಉಪನ್ಯಾಸಕ ಪ್ರವೀಣ್ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>