<p><span style="font-size: 26px;"><strong>ಕೊಳ್ಳೇಗಾಲ: </strong>ಮಕ್ಕಳು ಪರಿಸರ ರಕ್ಷಣೆಗೆ ಮುಂದಾಗುವ ಮೂಲಕ ಹಿರಿಯರಿಗೆ ಮಾದರಿಯಾಗಬೇಕು ಎಂದು ತಹಶೀಲ್ದಾರ್ ಎಂ. ನಂಜುಂಡಯ್ಯ ತಿಳಿಸಿದರು.</span><br /> <br /> ಸಂತ ಫ್ರಾನ್ಸಿಸ್ ಅಸ್ಸಿಸಿ ಸಭಾಂಗಣದಲ್ಲಿ ರೋಟರಿ ಸಂಸ್ಥೆ, ಅರಣ್ಯ ಇಲಾಖೆ, ಪ್ಲಾನೆಟ್ ಗ್ರೀನ್, ರೋಟ್ರ್ಯಾಕ್ಟ್ ಸಂಸ್ಥೆ, ಅಸ್ಸಿಸಿ ಪ್ರೌಢಶಾಲೆ ಚಿಗುರುವನ ಎಕೋ ಕ್ಲಬ್ ಸಹಯೋಗದೊಡನೆ ಪರಿಸರ ಜಾಗೃತಿ ಸಪ್ತಾಹ-2013ರ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಭಾಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಕೃತಿ ಮುನಿದರೆ ಉಂಟಾಗುವ ಅವಘಡ ನಮ್ಮ ಕಣ್ಮುಂದೆ ಇದೆ. ಜನರು ಪರಿಸರವನ್ನು ತಮ್ಮ ಸ್ವಾರ್ಥಕ್ಕಾಗಿ ಹಾಳು ಮಾಡದೆ ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸಲು ಎಚ್ಚರಿಕೆ ವಹಿಸಬೇಕಿದೆ ಎಂದು ಹೇಳಿದರು.<br /> <br /> ಸಂತ ಫ್ರಾನ್ಸಿಸ್ ಅಸ್ಸಿಸಿ ಚರ್ಚ್ ಫಾದರ್ ಜೇವಿಯರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೋಟರಿ ಸಂಸ್ಥೆ ಅಧ್ಯಕ್ಷ ಬಿ.ಕೆ. ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.<br /> <br /> ರೋಟರಿ ಪ್ರಿಸರ್ವ್ ಪ್ಲಾನೆಟ್ ಅರ್ಥ್ ಚೇರ್ಮನ್ ಟಿ.ಜಾನ್ಪೀಟರ್, ಮಾಜಿ ಅಧ್ಯಕ್ಷ ಕೆ. ಪುಟ್ಟರಸಶೆಟ್ಟಿ, ಯೂಥ್ ಸರ್ವೀಸ್ ಚೇರ್ಮನ್ ಜೋಸೆಫ್ ಅಲೆಕ್ಸಾಂಡರ್, ಮುಖ್ಯ ಶಿಕ್ಷಕಿ ರೋಸ್ ಕಮಲಕುಮಾರಿ, ಅರಣ್ಯ ಅಧಿಕಾರಿ ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಕೊಳ್ಳೇಗಾಲ: </strong>ಮಕ್ಕಳು ಪರಿಸರ ರಕ್ಷಣೆಗೆ ಮುಂದಾಗುವ ಮೂಲಕ ಹಿರಿಯರಿಗೆ ಮಾದರಿಯಾಗಬೇಕು ಎಂದು ತಹಶೀಲ್ದಾರ್ ಎಂ. ನಂಜುಂಡಯ್ಯ ತಿಳಿಸಿದರು.</span><br /> <br /> ಸಂತ ಫ್ರಾನ್ಸಿಸ್ ಅಸ್ಸಿಸಿ ಸಭಾಂಗಣದಲ್ಲಿ ರೋಟರಿ ಸಂಸ್ಥೆ, ಅರಣ್ಯ ಇಲಾಖೆ, ಪ್ಲಾನೆಟ್ ಗ್ರೀನ್, ರೋಟ್ರ್ಯಾಕ್ಟ್ ಸಂಸ್ಥೆ, ಅಸ್ಸಿಸಿ ಪ್ರೌಢಶಾಲೆ ಚಿಗುರುವನ ಎಕೋ ಕ್ಲಬ್ ಸಹಯೋಗದೊಡನೆ ಪರಿಸರ ಜಾಗೃತಿ ಸಪ್ತಾಹ-2013ರ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಭಾಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಕೃತಿ ಮುನಿದರೆ ಉಂಟಾಗುವ ಅವಘಡ ನಮ್ಮ ಕಣ್ಮುಂದೆ ಇದೆ. ಜನರು ಪರಿಸರವನ್ನು ತಮ್ಮ ಸ್ವಾರ್ಥಕ್ಕಾಗಿ ಹಾಳು ಮಾಡದೆ ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸಲು ಎಚ್ಚರಿಕೆ ವಹಿಸಬೇಕಿದೆ ಎಂದು ಹೇಳಿದರು.<br /> <br /> ಸಂತ ಫ್ರಾನ್ಸಿಸ್ ಅಸ್ಸಿಸಿ ಚರ್ಚ್ ಫಾದರ್ ಜೇವಿಯರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೋಟರಿ ಸಂಸ್ಥೆ ಅಧ್ಯಕ್ಷ ಬಿ.ಕೆ. ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.<br /> <br /> ರೋಟರಿ ಪ್ರಿಸರ್ವ್ ಪ್ಲಾನೆಟ್ ಅರ್ಥ್ ಚೇರ್ಮನ್ ಟಿ.ಜಾನ್ಪೀಟರ್, ಮಾಜಿ ಅಧ್ಯಕ್ಷ ಕೆ. ಪುಟ್ಟರಸಶೆಟ್ಟಿ, ಯೂಥ್ ಸರ್ವೀಸ್ ಚೇರ್ಮನ್ ಜೋಸೆಫ್ ಅಲೆಕ್ಸಾಂಡರ್, ಮುಖ್ಯ ಶಿಕ್ಷಕಿ ರೋಸ್ ಕಮಲಕುಮಾರಿ, ಅರಣ್ಯ ಅಧಿಕಾರಿ ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>