<p><strong>ವಿಜಾಪುರ:</strong> ಇದೇ 15ರಿಂದ ಆರಂಭಗೊಳ್ಳಲಿರುವ ಪಿಯುಸಿ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ 24,732 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 35 ಪರೀಕ್ಷಾ ಕೇಂದ್ರಗಳನ್ನು ಜಿಲ್ಲೆಯಾದ್ಯಂತ ತೆರೆಯಲಾಗಿದೆ. ಈ ಪೈಕಿ 8 ಸೂಕ್ಷ್ಮ, 6 ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ. <br /> <br /> `ಈ ಬಾರಿ ಯಾವುದೇ ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು. ಪರೀಕ್ಷಾ ಅಕ್ರಮಗಳು ನಡೆದರೆ, ಅಕ್ರಮದಲ್ಲಿ ತೊಡಗಿದ ವಿದ್ಯಾರ್ಥಿಯ ಜೊತೆಗೆ ಕೊಠಡಿ ಮೇಲ್ವಿಚಾರಕರು, ಉಸ್ತುವಾರಿ ಅಧಿಕಾರಿಗಳ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುವುದು. <br /> <br /> ಅಕ್ರಮ ನಡೆದ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು~ ಎಂದು ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಎಚ್ಚರಿಸಿದ್ದಾರೆ.ಪರೀಕ್ಷೆಯ ಪೂರ್ವ ಸಿದ್ಧತೆಯ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಎಲ್ಲ 35 ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಸಮಪರ್ಕವಾಗಿ ಪೀಠೋಪಕರಣ ವ್ಯವಸ್ಥೆ ಮಾಡಬೇಕು.<br /> <br /> ಯಾವುದೇ ಕಾರಣಕ್ಕೂ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಿಸಬಾರದು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯದಲ್ಲಿ ಏರು-ಪೇರಾದರೆ ಚಿಕಿತ್ಸೆ ನೀಡಲು ವೈದ್ಯಕೀಯ ವ್ಯವಸ್ಥೆ ಮಾಡಬೇಕು ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಸೂಚಿಸಿದರು.<br /> <br /> ಪರೀಕ್ಷಾ ಕೊಠಡಿಯೊಳಗೆ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಪರೀಕ್ಷಾರ್ಥಿಗಳ ಜೊತೆಗೆ ಪೋಷಕರು, ಕೇಂದ್ರ ಹಾಗೂ ಕೊಠಡಿಯೊಳಗೆ ಬರುವುದನ್ನು ತಡೆಯಬೇಕು. <br /> <br /> ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ಪ್ರಶ್ನೆ ಪತ್ರಿಕೆಗಳನ್ನು ಪೊಲೀಸ್ ಕಾವಲಿನಲ್ಲಿ ಪರೀಕ್ಷಾ ಕೇಂದ್ರಗಳಿಗೆ ಸಾಗಿಸಬೇಕು. ಪ್ರಶ್ನೆ ಪತ್ರಿಕೆ ಬಂಡಲ್ಗಳನ್ನು ಕಡ್ಡಾಯವಾಗಿ ವಿದ್ಯಾರ್ಥಿಗಳ ಸಮ್ಮುಖದಲ್ಲಿಯೇ ತೆರೆಯಬೇಕು ಎಂದು ಸೂಚಿಸಿದರು. <br /> <br /> ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕೇಂದ್ರಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ. ಜಿಲ್ಲೆಯ ಎಲ್ಲ 35 ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆ ನಡೆಯುವ ಸಮಯದಲ್ಲಿ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವುದು ಹಾಗೂ ಝರಾಕ್ಸ್ ಅಂಗಡಿಗಳನ್ನು ಬಂದ್ ಮಾಡಿಸುವ ಕುರಿತಂತೆ ಕ್ರಮಕೈಗೊಳ್ಳಲು ನಿರ್ಧರಿಸಲಾಯಿತು. <br /> <br /> ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋ ಚಿತ್ರಿಕರಣ ಮಾಡಲು ನಿರ್ಧರಿಸಲಾಯಿತು. ಜಿಲ್ಲಾ ಮಟ್ಟದ ಅಧಿಕಾರಿಗಳ ಜಾಗೃತ ದಳ ರಚಿಸಿ, ಅನಿರೀಕ್ಷಿತ ತಪಾಸಣೆ ನಡೆಸಲು ತೀರ್ಮಾನಿಸಲಾಯಿತು. <br /> ಈಗಾಗಲೇ ಜಾಗೃತ ದಳಕ್ಕೆ 107 ಜನರನ್ನು ನಿಯೋಜಿಸಿದ್ದು, ಏಳು ತಂಡಗಳನ್ನು ರಚಿಸಲಾಗಿದೆ.<br /> <br /> ಇದಲ್ಲದೇ ಜಿಲ್ಲಾ ಮಟ್ಟದ ಜಾಗೃತ ದಳ, ತಾಲ್ಲೂಕು ಮಟ್ಟದ ಜಾಗೃತ ದಳ ಹಾಗೂ ಕೇಂದ್ರವಾರು ಜಾಗೃತ ದಳವನ್ನು ನಿಯೋಜಿಸಲಾಗಿದೆ ಎಂದು ಪಿಯು ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಚೌರ್ ವಿವರಿಸಿದರು. <br /> <br /> ಪಿಯುಸಿ ಪರೀಕ್ಷೆಯ ಬೆನ್ನಲ್ಲೇ ಎಸ್.ಎಸ್.ಎಲ್.ಸಿ. ಪರೀಕ್ಷೆಯೂ ಆರಂಭಗೊಳ್ಳಲಿರುವುದರಿಂದ ವಿದ್ಯಾರ್ಥಿಗಳಿಗೆ ಓದಲು ಅನುಕೂಲ ಮಾಡಿಕೊಡಲು, ರಾತ್ರಿ 10ರ ನಂತರ ಸಾರ್ವಜನಿಕವಾಗಿ ಸೌಂಡ್ ಸಿಸ್ಟಮ್ ಮೂಲಕ ಶಬ್ದ ಮಾಲಿನ್ಯ ಮಾಡುವುದನ್ನು ನಿರ್ಬಂಧಿಸುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು. <br /> <br /> <strong>35 ಕೇಂದ್ರ: </strong>ವಿಜಾಪುರ ನಗರದಲ್ಲಿ 12, ವಿಜಾಪುರ ತಾಲ್ಲೂಕಿನಲ್ಲಿ 3, ಸಿಂದಗಿ ತಾಲ್ಲೂಕಿನಲ್ಲಿ 5, ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ 5, ಇಂಡಿ ತಾಲ್ಲೂಕಿನಲ್ಲಿ 7, ಮುದ್ದೇಬಿಹಾಳ ತಾಲ್ಲೂಕಿನಲ್ಲಿ 3 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. <br /> <br /> <strong>ಪರೀಕ್ಷಾರ್ಥಿಗಳು: </strong>ಪ್ರಥಮ ಬಾರಿಗೆ 16,160 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುತ್ತಿದ್ದು, ಖಾಸಗಿಯಾಗಿ 1,344 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 7,228 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.<br /> <br /> ಪ್ರಭಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಫ್.ಎ. ಟ್ರಾಸ್ಗರ್, ಉಪ ವಿಭಾಗಾಧಿಕಾರಿ ಸುರೇಶ ಜಿರಲಿ, ಬಸವನ ಬಾಗೇವಾಡಿ ತಹಶೀಲ್ದಾರ ಮಹಾದೇವ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಹಕೀಂ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳ ಪ್ರಾಚಾರ್ಯರು, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ:</strong> ಇದೇ 15ರಿಂದ ಆರಂಭಗೊಳ್ಳಲಿರುವ ಪಿಯುಸಿ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ 24,732 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 35 ಪರೀಕ್ಷಾ ಕೇಂದ್ರಗಳನ್ನು ಜಿಲ್ಲೆಯಾದ್ಯಂತ ತೆರೆಯಲಾಗಿದೆ. ಈ ಪೈಕಿ 8 ಸೂಕ್ಷ್ಮ, 6 ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ. <br /> <br /> `ಈ ಬಾರಿ ಯಾವುದೇ ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು. ಪರೀಕ್ಷಾ ಅಕ್ರಮಗಳು ನಡೆದರೆ, ಅಕ್ರಮದಲ್ಲಿ ತೊಡಗಿದ ವಿದ್ಯಾರ್ಥಿಯ ಜೊತೆಗೆ ಕೊಠಡಿ ಮೇಲ್ವಿಚಾರಕರು, ಉಸ್ತುವಾರಿ ಅಧಿಕಾರಿಗಳ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುವುದು. <br /> <br /> ಅಕ್ರಮ ನಡೆದ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು~ ಎಂದು ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಎಚ್ಚರಿಸಿದ್ದಾರೆ.ಪರೀಕ್ಷೆಯ ಪೂರ್ವ ಸಿದ್ಧತೆಯ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಎಲ್ಲ 35 ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಸಮಪರ್ಕವಾಗಿ ಪೀಠೋಪಕರಣ ವ್ಯವಸ್ಥೆ ಮಾಡಬೇಕು.<br /> <br /> ಯಾವುದೇ ಕಾರಣಕ್ಕೂ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಿಸಬಾರದು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯದಲ್ಲಿ ಏರು-ಪೇರಾದರೆ ಚಿಕಿತ್ಸೆ ನೀಡಲು ವೈದ್ಯಕೀಯ ವ್ಯವಸ್ಥೆ ಮಾಡಬೇಕು ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಸೂಚಿಸಿದರು.<br /> <br /> ಪರೀಕ್ಷಾ ಕೊಠಡಿಯೊಳಗೆ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಪರೀಕ್ಷಾರ್ಥಿಗಳ ಜೊತೆಗೆ ಪೋಷಕರು, ಕೇಂದ್ರ ಹಾಗೂ ಕೊಠಡಿಯೊಳಗೆ ಬರುವುದನ್ನು ತಡೆಯಬೇಕು. <br /> <br /> ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ಪ್ರಶ್ನೆ ಪತ್ರಿಕೆಗಳನ್ನು ಪೊಲೀಸ್ ಕಾವಲಿನಲ್ಲಿ ಪರೀಕ್ಷಾ ಕೇಂದ್ರಗಳಿಗೆ ಸಾಗಿಸಬೇಕು. ಪ್ರಶ್ನೆ ಪತ್ರಿಕೆ ಬಂಡಲ್ಗಳನ್ನು ಕಡ್ಡಾಯವಾಗಿ ವಿದ್ಯಾರ್ಥಿಗಳ ಸಮ್ಮುಖದಲ್ಲಿಯೇ ತೆರೆಯಬೇಕು ಎಂದು ಸೂಚಿಸಿದರು. <br /> <br /> ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕೇಂದ್ರಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ. ಜಿಲ್ಲೆಯ ಎಲ್ಲ 35 ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆ ನಡೆಯುವ ಸಮಯದಲ್ಲಿ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವುದು ಹಾಗೂ ಝರಾಕ್ಸ್ ಅಂಗಡಿಗಳನ್ನು ಬಂದ್ ಮಾಡಿಸುವ ಕುರಿತಂತೆ ಕ್ರಮಕೈಗೊಳ್ಳಲು ನಿರ್ಧರಿಸಲಾಯಿತು. <br /> <br /> ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋ ಚಿತ್ರಿಕರಣ ಮಾಡಲು ನಿರ್ಧರಿಸಲಾಯಿತು. ಜಿಲ್ಲಾ ಮಟ್ಟದ ಅಧಿಕಾರಿಗಳ ಜಾಗೃತ ದಳ ರಚಿಸಿ, ಅನಿರೀಕ್ಷಿತ ತಪಾಸಣೆ ನಡೆಸಲು ತೀರ್ಮಾನಿಸಲಾಯಿತು. <br /> ಈಗಾಗಲೇ ಜಾಗೃತ ದಳಕ್ಕೆ 107 ಜನರನ್ನು ನಿಯೋಜಿಸಿದ್ದು, ಏಳು ತಂಡಗಳನ್ನು ರಚಿಸಲಾಗಿದೆ.<br /> <br /> ಇದಲ್ಲದೇ ಜಿಲ್ಲಾ ಮಟ್ಟದ ಜಾಗೃತ ದಳ, ತಾಲ್ಲೂಕು ಮಟ್ಟದ ಜಾಗೃತ ದಳ ಹಾಗೂ ಕೇಂದ್ರವಾರು ಜಾಗೃತ ದಳವನ್ನು ನಿಯೋಜಿಸಲಾಗಿದೆ ಎಂದು ಪಿಯು ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಚೌರ್ ವಿವರಿಸಿದರು. <br /> <br /> ಪಿಯುಸಿ ಪರೀಕ್ಷೆಯ ಬೆನ್ನಲ್ಲೇ ಎಸ್.ಎಸ್.ಎಲ್.ಸಿ. ಪರೀಕ್ಷೆಯೂ ಆರಂಭಗೊಳ್ಳಲಿರುವುದರಿಂದ ವಿದ್ಯಾರ್ಥಿಗಳಿಗೆ ಓದಲು ಅನುಕೂಲ ಮಾಡಿಕೊಡಲು, ರಾತ್ರಿ 10ರ ನಂತರ ಸಾರ್ವಜನಿಕವಾಗಿ ಸೌಂಡ್ ಸಿಸ್ಟಮ್ ಮೂಲಕ ಶಬ್ದ ಮಾಲಿನ್ಯ ಮಾಡುವುದನ್ನು ನಿರ್ಬಂಧಿಸುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು. <br /> <br /> <strong>35 ಕೇಂದ್ರ: </strong>ವಿಜಾಪುರ ನಗರದಲ್ಲಿ 12, ವಿಜಾಪುರ ತಾಲ್ಲೂಕಿನಲ್ಲಿ 3, ಸಿಂದಗಿ ತಾಲ್ಲೂಕಿನಲ್ಲಿ 5, ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ 5, ಇಂಡಿ ತಾಲ್ಲೂಕಿನಲ್ಲಿ 7, ಮುದ್ದೇಬಿಹಾಳ ತಾಲ್ಲೂಕಿನಲ್ಲಿ 3 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. <br /> <br /> <strong>ಪರೀಕ್ಷಾರ್ಥಿಗಳು: </strong>ಪ್ರಥಮ ಬಾರಿಗೆ 16,160 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುತ್ತಿದ್ದು, ಖಾಸಗಿಯಾಗಿ 1,344 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 7,228 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.<br /> <br /> ಪ್ರಭಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಫ್.ಎ. ಟ್ರಾಸ್ಗರ್, ಉಪ ವಿಭಾಗಾಧಿಕಾರಿ ಸುರೇಶ ಜಿರಲಿ, ಬಸವನ ಬಾಗೇವಾಡಿ ತಹಶೀಲ್ದಾರ ಮಹಾದೇವ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಹಕೀಂ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳ ಪ್ರಾಚಾರ್ಯರು, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>