<p><strong>ಹುಕ್ಕೇರಿ:</strong> ಜ್ಞಾನಪೀಠ ಪ್ರಶಸ್ತಿ ಪಡೆ ಯುವಲ್ಲಿ ಡಾ.ಚಂದ್ರಶೇಖರ ಕಂಬಾರ ರಿಗಿಂತ ಕಾದಂಬರಿಕಾರ ಎಸ್.ಎಲ್.ಬೈರಪ್ಪ ಅವರೆ ಸೂಕ್ತ ಎಂಬ ಹೇಳಿಕೆ ಯನ್ನು ನೀಡಿದ ಹಿರಿಯ ಪತ್ರಕರ್ತ ಡಾ. ಪಾಟೀಲ ಪುಟ್ಟಪ್ಪ ಅವರ ಆಕ್ಷೇಪದ ಅಭಿಪ್ರಾಯವನ್ನು ಡಾ.ಕಂಬಾರರ ಊರಲ್ಲಿ ಬುಧವಾರ ಹಮ್ಮಿಕೊಂಡ `ಅಭಿನಂದನಾ ಸಭೆ~ ಯಲ್ಲಿ ಖಂಡಿಸಲಾಯಿತು.<br /> <br /> ಗ್ರಾಮದ ವತಿಯಿಂದ ಡಾ. ಚಂದ್ರ ಶೇಖರ ಕಂಬಾರರ ಮನೆಯ ಮುಂದೆ ಹಮ್ಮಿಕೊಂಡ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೆಕಾಂತ ಭೂಷಿ ಮಾತನಾಡಿ ಡಾ.ಪಾಟೀಲ ಪುಟ್ಟಪ್ಪನ ವರು ಡಾ. ಕಂಬಾರರ ವಿರುದ್ಧ ನೀಡಿದ ಹೇಳಿಕೆ ಅವರ ಸಣ್ಣತನವನ್ನು ಪ್ರದರ್ಶಿಸಿದೆ ಎಂದರು.<br /> <br /> ಉತ್ತರ ಕರ್ನಾಟಕದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ಎರಡನೆಯ ವ್ಯಕ್ತಿ ಡಾ. ಚಂದ್ರಶೇಖರ ಕಂಬಾರ ಆಗಿದ್ದು, ಅದನ್ನು ಹೆಮ್ಮೆ ಪಡುವ ಬದಲು ತಮ್ಮ ಯೋಗ್ಯತೆಗೆ ಅಗೌರವ ಹೇಳಿಕೆ ನೀಡಿದ್ದು ವಿಷಾದನೀಯ ಎಂದರು.<br /> ಆಗ್ರಹ: ಡಾ. ಪಾಟೀಲ ಪುಟ್ಟಪ್ಪ ನವರು ಡಾ. ಕಂಬಾರರ ವಿರುದ್ಧ ನೀಡಿದ ಹೇಳಿಕೆ ವಾಪಸ್ ಪಡೆಯ ಬೇಕೆಂದು ಆಗ್ರಹಿಸಲಾಯಿತು.<br /> <br /> ಉಪಾಧ್ಯಕ್ಷ ಮಲ್ಲಪ್ಪ ಮುಗಳಿ ಒಳ ಗೊಂಡು ಗ್ರಾಮ ಪಂಚಾಯಿತಿ ಸದ ಸ್ಯರು, ಹಿರಿಯರು ಮತ್ತು ಗ್ರಾಮಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ:</strong> ಜ್ಞಾನಪೀಠ ಪ್ರಶಸ್ತಿ ಪಡೆ ಯುವಲ್ಲಿ ಡಾ.ಚಂದ್ರಶೇಖರ ಕಂಬಾರ ರಿಗಿಂತ ಕಾದಂಬರಿಕಾರ ಎಸ್.ಎಲ್.ಬೈರಪ್ಪ ಅವರೆ ಸೂಕ್ತ ಎಂಬ ಹೇಳಿಕೆ ಯನ್ನು ನೀಡಿದ ಹಿರಿಯ ಪತ್ರಕರ್ತ ಡಾ. ಪಾಟೀಲ ಪುಟ್ಟಪ್ಪ ಅವರ ಆಕ್ಷೇಪದ ಅಭಿಪ್ರಾಯವನ್ನು ಡಾ.ಕಂಬಾರರ ಊರಲ್ಲಿ ಬುಧವಾರ ಹಮ್ಮಿಕೊಂಡ `ಅಭಿನಂದನಾ ಸಭೆ~ ಯಲ್ಲಿ ಖಂಡಿಸಲಾಯಿತು.<br /> <br /> ಗ್ರಾಮದ ವತಿಯಿಂದ ಡಾ. ಚಂದ್ರ ಶೇಖರ ಕಂಬಾರರ ಮನೆಯ ಮುಂದೆ ಹಮ್ಮಿಕೊಂಡ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೆಕಾಂತ ಭೂಷಿ ಮಾತನಾಡಿ ಡಾ.ಪಾಟೀಲ ಪುಟ್ಟಪ್ಪನ ವರು ಡಾ. ಕಂಬಾರರ ವಿರುದ್ಧ ನೀಡಿದ ಹೇಳಿಕೆ ಅವರ ಸಣ್ಣತನವನ್ನು ಪ್ರದರ್ಶಿಸಿದೆ ಎಂದರು.<br /> <br /> ಉತ್ತರ ಕರ್ನಾಟಕದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ಎರಡನೆಯ ವ್ಯಕ್ತಿ ಡಾ. ಚಂದ್ರಶೇಖರ ಕಂಬಾರ ಆಗಿದ್ದು, ಅದನ್ನು ಹೆಮ್ಮೆ ಪಡುವ ಬದಲು ತಮ್ಮ ಯೋಗ್ಯತೆಗೆ ಅಗೌರವ ಹೇಳಿಕೆ ನೀಡಿದ್ದು ವಿಷಾದನೀಯ ಎಂದರು.<br /> ಆಗ್ರಹ: ಡಾ. ಪಾಟೀಲ ಪುಟ್ಟಪ್ಪ ನವರು ಡಾ. ಕಂಬಾರರ ವಿರುದ್ಧ ನೀಡಿದ ಹೇಳಿಕೆ ವಾಪಸ್ ಪಡೆಯ ಬೇಕೆಂದು ಆಗ್ರಹಿಸಲಾಯಿತು.<br /> <br /> ಉಪಾಧ್ಯಕ್ಷ ಮಲ್ಲಪ್ಪ ಮುಗಳಿ ಒಳ ಗೊಂಡು ಗ್ರಾಮ ಪಂಚಾಯಿತಿ ಸದ ಸ್ಯರು, ಹಿರಿಯರು ಮತ್ತು ಗ್ರಾಮಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>