<p>ಸೋಮವಾರಪೇಟೆ: ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರ ಕೆ.ಜಿ.ಸುರೇಶ್ ಹೇಳಿದರು.<br /> <br /> ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯನ್ನು ವಿಶ್ವಪಾರಂಪರಿಕ ತಾಣದ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಪ್ರಯತ್ನಿಸಿದರೆ ತಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಈ ಹಿಂದೆ ರಂಜನ್ ಹೇಳಿಕೆ ನೀಡಿದ್ದರು. ಅದನ್ನು ಕೆ.ಪಿ.ಚಂದ್ರಕಲಾ ತಪ್ಪಾಗಿ ತಿಳಿದುಕೊಂಡು ಶಾಸಕರ ರಾಜೀನಾಮೆಗೆ ಒತ್ತಾಯಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.<br /> <br /> ಸಂಸದರು ರಾಜೀನಾಮೆ ನೀಡಲಿ: ಜಿಲ್ಲೆ ವಿಶ್ವಪಾರಂಪರಿಕ ತಾಣದ ಪಟ್ಟಿಗೆ ಸೇರಲು, ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವೇ ಕಾರಣ, ಇದರ ನೈತಿಕ ಹೊಣೆ ಹೊತ್ತು ಇಲ್ಲಿಯ ಕಾಂಗ್ರೆಸ್ ಸಂಸದ ಎಚ್. ವಿಶ್ವನಾಥ್ ಕೂಡಲೇ ರಾಜೀನಾಮೆ ನೀಡಿ ಹೋರಾಟಕ್ಕೆ ಇಳಿಯಬೇಕು ಎಂದು ಸುರೇಶ್ ಆಗ್ರಹಿಸಿದರು. <br /> <br /> ಪ್ರಾರಂಭದಿಂದಲೂ ಶಾಸಕ ಅಪ್ಪಚ್ಚು ರಂಜನ್, ಜಿಲ್ಲೆ ವಿಶ್ವಪಾರಂಪರಿಕ ತಾಣದ ಪಟ್ಟಿಗೆ ಸೇರ್ಪಡೆಗೊಂಡರೆ, ಗುಡ್ಡಗಾಡು ಪ್ರದೇಶದಲ್ಲಿ ಜೀವಿಸುತ್ತಿರುವ ಕೊಡಗಿನ ಜನತೆ ಸಂಕಷ್ಟಕ್ಕೆ ಸಿಲುಕುತ್ತಾರೆ. ಎಂಬ ಸದುದ್ದೇಶದಿಂದ ವಿರೋಧಿಸಿದ್ದರು.<br /> <br /> ಈಗ ಎಲ್ಲವೂ ಕೈಮೀರಿ ಹೋಗಿದೆ. ಇನ್ನು ಮುಂದೆ ಪಕ್ಷಾತೀತವಾಗಿ ಹೋರಾಟ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಬೇಕಾಗಿದೆ. ವಿಶ್ವಪಾರಂಪರಿಕ ತಾಣದ ಪಟ್ಟ ನಮಗೆ ಬೇಡ ಎಂದು ಹೇಳಿದರು. ಗೋಷ್ಠಿಯಲ್ಲಿ ಪಟ್ಟಣ್ಣ ಪಂಚಾಯಿತಿ ಅಧ್ಯಕ್ಷ ಎನ್.ಎಸ್.ಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೋಮವಾರಪೇಟೆ: ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರ ಕೆ.ಜಿ.ಸುರೇಶ್ ಹೇಳಿದರು.<br /> <br /> ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯನ್ನು ವಿಶ್ವಪಾರಂಪರಿಕ ತಾಣದ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಪ್ರಯತ್ನಿಸಿದರೆ ತಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಈ ಹಿಂದೆ ರಂಜನ್ ಹೇಳಿಕೆ ನೀಡಿದ್ದರು. ಅದನ್ನು ಕೆ.ಪಿ.ಚಂದ್ರಕಲಾ ತಪ್ಪಾಗಿ ತಿಳಿದುಕೊಂಡು ಶಾಸಕರ ರಾಜೀನಾಮೆಗೆ ಒತ್ತಾಯಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.<br /> <br /> ಸಂಸದರು ರಾಜೀನಾಮೆ ನೀಡಲಿ: ಜಿಲ್ಲೆ ವಿಶ್ವಪಾರಂಪರಿಕ ತಾಣದ ಪಟ್ಟಿಗೆ ಸೇರಲು, ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವೇ ಕಾರಣ, ಇದರ ನೈತಿಕ ಹೊಣೆ ಹೊತ್ತು ಇಲ್ಲಿಯ ಕಾಂಗ್ರೆಸ್ ಸಂಸದ ಎಚ್. ವಿಶ್ವನಾಥ್ ಕೂಡಲೇ ರಾಜೀನಾಮೆ ನೀಡಿ ಹೋರಾಟಕ್ಕೆ ಇಳಿಯಬೇಕು ಎಂದು ಸುರೇಶ್ ಆಗ್ರಹಿಸಿದರು. <br /> <br /> ಪ್ರಾರಂಭದಿಂದಲೂ ಶಾಸಕ ಅಪ್ಪಚ್ಚು ರಂಜನ್, ಜಿಲ್ಲೆ ವಿಶ್ವಪಾರಂಪರಿಕ ತಾಣದ ಪಟ್ಟಿಗೆ ಸೇರ್ಪಡೆಗೊಂಡರೆ, ಗುಡ್ಡಗಾಡು ಪ್ರದೇಶದಲ್ಲಿ ಜೀವಿಸುತ್ತಿರುವ ಕೊಡಗಿನ ಜನತೆ ಸಂಕಷ್ಟಕ್ಕೆ ಸಿಲುಕುತ್ತಾರೆ. ಎಂಬ ಸದುದ್ದೇಶದಿಂದ ವಿರೋಧಿಸಿದ್ದರು.<br /> <br /> ಈಗ ಎಲ್ಲವೂ ಕೈಮೀರಿ ಹೋಗಿದೆ. ಇನ್ನು ಮುಂದೆ ಪಕ್ಷಾತೀತವಾಗಿ ಹೋರಾಟ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಬೇಕಾಗಿದೆ. ವಿಶ್ವಪಾರಂಪರಿಕ ತಾಣದ ಪಟ್ಟ ನಮಗೆ ಬೇಡ ಎಂದು ಹೇಳಿದರು. ಗೋಷ್ಠಿಯಲ್ಲಿ ಪಟ್ಟಣ್ಣ ಪಂಚಾಯಿತಿ ಅಧ್ಯಕ್ಷ ಎನ್.ಎಸ್.ಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>