<p><strong>ಸೋಮವಾರಪೇಟೆ: </strong>ಸರ್ಕಾರಿ ಸೇವೆಯಲ್ಲಿ ಸುದೀರ್ಘ ಕಾಲವನ್ನು ಕ್ರಮಿಸಿರುವ ನಿವೃತ್ತ ನೌಕರರು ಸಾಮಾಜಿಕ ಸ್ವಾಸ್ಥ್ಯ ರಕ್ಷಣೆಯಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ ಎಂದು ತಹಶೀಲ್ದಾರ್ ಎನ್. ವೆಂಕಟಾಚಲಪ್ಪ ಅಭಿಪ್ರಾಯಪಟ್ಟರು.<br /> <br /> ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಈಚೆಗೆ ನಡೆದ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ಮಹಮ್ಮದ್ ಮಾತನಾಡಿ, ರಾಜ್ಯದಲ್ಲಿ 4.60 ಲಕ್ಷ ನಿವೃತ್ತ ಸರ್ಕಾರಿ ನೌಕರರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿವೃತ್ತ ನೌಕರರ ನಡುವೆ ಪಿಂಚಣಿ ತಾರತಮ್ಯವಿದೆ. ಇದನ್ನು ನಿವಾರಿಸುವಂತೆ ಮನವಿ ಮಾಡಿಕೊಳ್ಳಲು ಸದ್ಯದಲ್ಲಿಯೇ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಬೇಕು ಎಂದರು.<br /> <br /> ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಸಿ.ರಾಜಶೇಖರ್, ನಿವೃತ್ತ ಪ್ರಾಂಶುಪಾಲ ದಾಮೋದರ್ ಹಾಜರಿದ್ದರು.<br /> ಶಿಕ್ಷಣ ಇಲಾಖೆಯ ಡಿ.ಪಿ. ಹೂವಯ್ಯ, ತಾಲ್ಲೂಕು ಪಂಚಾಯಿತಿಯ ಕೆ.ಬಿ. ಈರಪ್ಪ, ಕಂದಾಯ ಇಲಾಖೆಯ ಪಿ.ಯು. ಸರೋಜಾ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ: </strong>ಸರ್ಕಾರಿ ಸೇವೆಯಲ್ಲಿ ಸುದೀರ್ಘ ಕಾಲವನ್ನು ಕ್ರಮಿಸಿರುವ ನಿವೃತ್ತ ನೌಕರರು ಸಾಮಾಜಿಕ ಸ್ವಾಸ್ಥ್ಯ ರಕ್ಷಣೆಯಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ ಎಂದು ತಹಶೀಲ್ದಾರ್ ಎನ್. ವೆಂಕಟಾಚಲಪ್ಪ ಅಭಿಪ್ರಾಯಪಟ್ಟರು.<br /> <br /> ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಈಚೆಗೆ ನಡೆದ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ಮಹಮ್ಮದ್ ಮಾತನಾಡಿ, ರಾಜ್ಯದಲ್ಲಿ 4.60 ಲಕ್ಷ ನಿವೃತ್ತ ಸರ್ಕಾರಿ ನೌಕರರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿವೃತ್ತ ನೌಕರರ ನಡುವೆ ಪಿಂಚಣಿ ತಾರತಮ್ಯವಿದೆ. ಇದನ್ನು ನಿವಾರಿಸುವಂತೆ ಮನವಿ ಮಾಡಿಕೊಳ್ಳಲು ಸದ್ಯದಲ್ಲಿಯೇ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಬೇಕು ಎಂದರು.<br /> <br /> ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಸಿ.ರಾಜಶೇಖರ್, ನಿವೃತ್ತ ಪ್ರಾಂಶುಪಾಲ ದಾಮೋದರ್ ಹಾಜರಿದ್ದರು.<br /> ಶಿಕ್ಷಣ ಇಲಾಖೆಯ ಡಿ.ಪಿ. ಹೂವಯ್ಯ, ತಾಲ್ಲೂಕು ಪಂಚಾಯಿತಿಯ ಕೆ.ಬಿ. ಈರಪ್ಪ, ಕಂದಾಯ ಇಲಾಖೆಯ ಪಿ.ಯು. ಸರೋಜಾ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>