<p>ಬೆಂಗಳೂರು: ನಗರದಲ್ಲಿರುವ ಎಲ್ಲ ಆಸ್ತಿಗಳನ್ನು ಗುರುತಿಸಿ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಬಿಬಿಎಂಪಿ, ಹೊಸ ಆಸ್ತಿ ಗುರುತಿನ ಸಂಖ್ಯೆ (ಪಿಐಡಿ) ನೀಡಲು ಮುಂದಾಗಿದೆ. ಪಾಲಿಕೆಯ ಆಯ್ದ ಐದು ವಾರ್ಡ್ಗಳಲ್ಲಿ ಹೊಸ ಪಿಐಡಿ ಸಂಖ್ಯೆ ನೀಡುವ ಪ್ರಕ್ರಿಯೆಗೆ ವಾರದಲ್ಲಿ ಚಾಲನೆ ದೊರೆಯಲಿದೆ.<br /> <br /> ಪಟ್ಟಾಭಿರಾಮನಗರ, ಭೈರಸಂದ್ರ, ಸುಬ್ರಹ್ಮಣ್ಯನಗರ, ಬಸವೇಶ್ವರನಗರ ಹಾಗೂ ಪ್ರಕಾಶನಗರ ವಾರ್ಡ್ಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡಿದ್ದು, ಸದ್ಯದಲ್ಲೇ ಈ ವಾರ್ಡ್ಗಳಲ್ಲಿನ ಆಸ್ತಿಗಳಿಗೆ ಹೊಸ ಪಿಐಡಿ ಸಂಖ್ಯೆ ನೀಡಲಿದೆ.<br /> <br /> ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಯುಕ್ತ ಎಂ.ಕೆ. ಶಂಕಲಿಂಗೇಗೌಡ, `ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲ ಆಸ್ತಿಗಳನ್ನು ಗುರುತಿಸಿ, ತೆರಿಗೆ ಸಂಗ್ರಹಿಸುವ ಉದ್ದೇಶದಿಂದ ಪ್ರಾಯೋಗಿಕ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಯೋಜನೆಯಡಿ ಆಯ್ದ ಐದು ವಾರ್ಡ್ಗಳಲ್ಲಿನ ಆಸ್ತಿಗಳಿಗೆ ಹೊಸ ಪಿಐಡಿ ಸಂಖ್ಯೆ ನೀಡಲಾಗುವುದು~ ಎಂದರು.<br /> <br /> ಈ ಐದು ವಾರ್ಡ್ಗಳಲ್ಲಿರುವ ಆಸ್ತಿಗಳ ವಿವರವನ್ನು `ಜಿಯಾಗ್ರಾಫಿಕಲ್ ಇನ್ಫರ್ಮೇಶನ್ ಸಿಸ್ಟಮ್~ (ಜಿಐಎಸ್) ವ್ಯವಸ್ಥೆಯಲ್ಲಿನ ಮಾಹಿತಿಯೊಂದಿಗೆ ತಾಳೆ ಹಾಕುವ ಪ್ರಕ್ರಿಯೆ ಇದೇ 15ರ ವೇಳೆಗೆ ಪೂರ್ಣಗೊಳ್ಳಲಿದೆ. ಜತೆಗೆ ಆಸ್ತಿಯ ಮೌಲ್ಯಮಾಪನ ಕೂಡ ಮಾಡಲಾಗುತ್ತಿದೆ ಎಂದರು.<br /> <br /> ಐದು ವಾರ್ಡ್ಗಳ ಆಸ್ತಿ ಮಾಹಿತಿ ಸಂಗ್ರಹಣೆ ಕಾರ್ಯ ಪೂರ್ಣಗೊಂಡಿದೆ. ವಾರದೊಳಗೆ ಪಾಲಿಕೆ ಅಧಿಕಾರಿಗಳು ಆಸ್ತಿದಾರರಿಗೆ ಪಿಐಡಿ ಸಂಖ್ಯೆಯುಳ್ಳ ಅರ್ಜಿ ನೀಡಲಿದ್ದಾರೆ. ಆಸ್ತಿ ಮಾಹಿತಿಗೆ ಸಂಬಂಧಪಟ್ಟ ಬದಲಾವಣೆಗಳಿಗೆ ಪೂರಕವಾದ ಮಾಹಿತಿಯನ್ನು ಆಸ್ತಿದಾರರು ಅರ್ಜಿಯೊಂದಿಗೆ ಸಲ್ಲಿಸಬಹುದು ಎಂದು ಹೇಳಿದರು.<br /> <br /> ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಆಸ್ತಿಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಎಲ್ಲ ಮಾಹಿತಿಯನ್ನು ಆನ್ಲೈನ್ನಲ್ಲಿ ಪ್ರಕಟಿಸಲಾಗುವುದು. ಇದರಿಂದ ಆಸ್ತಿ ತೆರಿಗೆ ಪಾವತಿ ವಿವರವನ್ನು ಸುಲಭವಾಗಿ ಪಡೆಯಬಹುದು. ಹಾಗೆಯೇ ತೆರಿಗೆ ಪಾವತಿಸದವರನ್ನು ಸುಲಭವಾಗಿ ಗುರುತಿಸಿ ತೆರಿಗೆ ಸಂಗ್ರಹಿಸಲು ಅನುಕೂಲವಾಗುತ್ತದೆ ಎಂದರು.<br /> <br /> ನಗರದಲ್ಲಿ ಇರುವ ಸುಮಾರು 92,000 ರಸ್ತೆಗಳಿಗೂ ಹೊಸ ಸಂಖ್ಯೆ ನೀಡಲಾಗುವುದು. ಎಲ್ಲ ಪ್ರಕ್ರಿಯೆ ಪೂರ್ಣಗೊಂಡರೆ ಏಪ್ರಿಲ್ನಿಂದ ರಸ್ತೆಗಳಿಗೆ ಹೊಸ ಸಂಖ್ಯೆಗಳನ್ನು ನಮೂದಿಸಲು ಚಿಂತಿಸಲಾಗಿದೆ ಎಂದು ಮಾಹಿತಿ ನೀಡಿದರು.<br /> <br /> ಮೇಯರ್ ಪಿ. ಶಾರದಮ್ಮ, `ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 16 ಲಕ್ಷ ಆಸ್ತಿಗಳಿವೆ ಎಂಬ ಅಂದಾಜು ಇದೆ. ಆದರೆ ಐದಾರು ಲಕ್ಷ ಮಂದಿ ಆಸ್ತಿದಾರರು ತೆರಿಗೆ ಪಾವತಿಸುತ್ತಿಲ್ಲ. ಈ ಹೊಸ ವ್ಯವಸ್ಥೆಯಿಂದ ತೆರಿಗೆ ಪಾವತಿಸದವರನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ~ ಎಂದರು.<br /> <br /> ಆಡಳಿತ ಪಕ್ಷದ ನಾಯಕ ಬಿ.ಆರ್. ನಂಜುಂಡಪ್ಪ, ಆಯುಕ್ತರ ಮಾಹಿತಿ ತಂತ್ರಜ್ಞಾನ ಸಲಹೆಗಾರ ಟಿ. ಶೇಷಾದ್ರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದಲ್ಲಿರುವ ಎಲ್ಲ ಆಸ್ತಿಗಳನ್ನು ಗುರುತಿಸಿ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಬಿಬಿಎಂಪಿ, ಹೊಸ ಆಸ್ತಿ ಗುರುತಿನ ಸಂಖ್ಯೆ (ಪಿಐಡಿ) ನೀಡಲು ಮುಂದಾಗಿದೆ. ಪಾಲಿಕೆಯ ಆಯ್ದ ಐದು ವಾರ್ಡ್ಗಳಲ್ಲಿ ಹೊಸ ಪಿಐಡಿ ಸಂಖ್ಯೆ ನೀಡುವ ಪ್ರಕ್ರಿಯೆಗೆ ವಾರದಲ್ಲಿ ಚಾಲನೆ ದೊರೆಯಲಿದೆ.<br /> <br /> ಪಟ್ಟಾಭಿರಾಮನಗರ, ಭೈರಸಂದ್ರ, ಸುಬ್ರಹ್ಮಣ್ಯನಗರ, ಬಸವೇಶ್ವರನಗರ ಹಾಗೂ ಪ್ರಕಾಶನಗರ ವಾರ್ಡ್ಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡಿದ್ದು, ಸದ್ಯದಲ್ಲೇ ಈ ವಾರ್ಡ್ಗಳಲ್ಲಿನ ಆಸ್ತಿಗಳಿಗೆ ಹೊಸ ಪಿಐಡಿ ಸಂಖ್ಯೆ ನೀಡಲಿದೆ.<br /> <br /> ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಯುಕ್ತ ಎಂ.ಕೆ. ಶಂಕಲಿಂಗೇಗೌಡ, `ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲ ಆಸ್ತಿಗಳನ್ನು ಗುರುತಿಸಿ, ತೆರಿಗೆ ಸಂಗ್ರಹಿಸುವ ಉದ್ದೇಶದಿಂದ ಪ್ರಾಯೋಗಿಕ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಯೋಜನೆಯಡಿ ಆಯ್ದ ಐದು ವಾರ್ಡ್ಗಳಲ್ಲಿನ ಆಸ್ತಿಗಳಿಗೆ ಹೊಸ ಪಿಐಡಿ ಸಂಖ್ಯೆ ನೀಡಲಾಗುವುದು~ ಎಂದರು.<br /> <br /> ಈ ಐದು ವಾರ್ಡ್ಗಳಲ್ಲಿರುವ ಆಸ್ತಿಗಳ ವಿವರವನ್ನು `ಜಿಯಾಗ್ರಾಫಿಕಲ್ ಇನ್ಫರ್ಮೇಶನ್ ಸಿಸ್ಟಮ್~ (ಜಿಐಎಸ್) ವ್ಯವಸ್ಥೆಯಲ್ಲಿನ ಮಾಹಿತಿಯೊಂದಿಗೆ ತಾಳೆ ಹಾಕುವ ಪ್ರಕ್ರಿಯೆ ಇದೇ 15ರ ವೇಳೆಗೆ ಪೂರ್ಣಗೊಳ್ಳಲಿದೆ. ಜತೆಗೆ ಆಸ್ತಿಯ ಮೌಲ್ಯಮಾಪನ ಕೂಡ ಮಾಡಲಾಗುತ್ತಿದೆ ಎಂದರು.<br /> <br /> ಐದು ವಾರ್ಡ್ಗಳ ಆಸ್ತಿ ಮಾಹಿತಿ ಸಂಗ್ರಹಣೆ ಕಾರ್ಯ ಪೂರ್ಣಗೊಂಡಿದೆ. ವಾರದೊಳಗೆ ಪಾಲಿಕೆ ಅಧಿಕಾರಿಗಳು ಆಸ್ತಿದಾರರಿಗೆ ಪಿಐಡಿ ಸಂಖ್ಯೆಯುಳ್ಳ ಅರ್ಜಿ ನೀಡಲಿದ್ದಾರೆ. ಆಸ್ತಿ ಮಾಹಿತಿಗೆ ಸಂಬಂಧಪಟ್ಟ ಬದಲಾವಣೆಗಳಿಗೆ ಪೂರಕವಾದ ಮಾಹಿತಿಯನ್ನು ಆಸ್ತಿದಾರರು ಅರ್ಜಿಯೊಂದಿಗೆ ಸಲ್ಲಿಸಬಹುದು ಎಂದು ಹೇಳಿದರು.<br /> <br /> ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಆಸ್ತಿಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಎಲ್ಲ ಮಾಹಿತಿಯನ್ನು ಆನ್ಲೈನ್ನಲ್ಲಿ ಪ್ರಕಟಿಸಲಾಗುವುದು. ಇದರಿಂದ ಆಸ್ತಿ ತೆರಿಗೆ ಪಾವತಿ ವಿವರವನ್ನು ಸುಲಭವಾಗಿ ಪಡೆಯಬಹುದು. ಹಾಗೆಯೇ ತೆರಿಗೆ ಪಾವತಿಸದವರನ್ನು ಸುಲಭವಾಗಿ ಗುರುತಿಸಿ ತೆರಿಗೆ ಸಂಗ್ರಹಿಸಲು ಅನುಕೂಲವಾಗುತ್ತದೆ ಎಂದರು.<br /> <br /> ನಗರದಲ್ಲಿ ಇರುವ ಸುಮಾರು 92,000 ರಸ್ತೆಗಳಿಗೂ ಹೊಸ ಸಂಖ್ಯೆ ನೀಡಲಾಗುವುದು. ಎಲ್ಲ ಪ್ರಕ್ರಿಯೆ ಪೂರ್ಣಗೊಂಡರೆ ಏಪ್ರಿಲ್ನಿಂದ ರಸ್ತೆಗಳಿಗೆ ಹೊಸ ಸಂಖ್ಯೆಗಳನ್ನು ನಮೂದಿಸಲು ಚಿಂತಿಸಲಾಗಿದೆ ಎಂದು ಮಾಹಿತಿ ನೀಡಿದರು.<br /> <br /> ಮೇಯರ್ ಪಿ. ಶಾರದಮ್ಮ, `ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 16 ಲಕ್ಷ ಆಸ್ತಿಗಳಿವೆ ಎಂಬ ಅಂದಾಜು ಇದೆ. ಆದರೆ ಐದಾರು ಲಕ್ಷ ಮಂದಿ ಆಸ್ತಿದಾರರು ತೆರಿಗೆ ಪಾವತಿಸುತ್ತಿಲ್ಲ. ಈ ಹೊಸ ವ್ಯವಸ್ಥೆಯಿಂದ ತೆರಿಗೆ ಪಾವತಿಸದವರನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ~ ಎಂದರು.<br /> <br /> ಆಡಳಿತ ಪಕ್ಷದ ನಾಯಕ ಬಿ.ಆರ್. ನಂಜುಂಡಪ್ಪ, ಆಯುಕ್ತರ ಮಾಹಿತಿ ತಂತ್ರಜ್ಞಾನ ಸಲಹೆಗಾರ ಟಿ. ಶೇಷಾದ್ರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>