<p><strong>ಕೋಲಾರ: </strong>ತಾಲ್ಲೂಕಿನ ಮಂಗಸಂದ್ರ ಸಮೀಪ ನಿರ್ಮಾಣ ಹಂತದಲ್ಲಿ ಸ್ಥಗಿತಗೊಂಡಿರುವ ಸ್ನಾತಕೋತ್ತರ ಕೇಂದ್ರದ ಕಟ್ಟಡ ಕಾಮಗಾರಿಗೆ ಕೂಡಲೇ ಚಾಲನೆ ಕೊಡಬೇಕು ಎಂದು ಆಗ್ರಹಿಸಿ ಕೇಂದ್ರದ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.<br /> <br /> ಬಾಲಕರ ಸರ್ಕಾರಿ ಕಾಲೇಜಿನ ಒಳ ಆವರಣದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕೇಂದ್ರದಲ್ಲಿ ಹಲವು ಸಮಸ್ಯೆಗಳಿವೆ. ಶೌಚಾಲಯ, ಗ್ರಂಥಾಲಯ, ವಿದ್ಯಾರ್ಥಿ ಕೊಠಡಿ, ಅಧ್ಯಾಪಕರ ಕೊಠಡಿ, ತರಗತಿ ಕೊಠಡಿಗಳ ಕೊರತೆ ಹೆಚ್ಚಿದೆ. ಇದೇ ವೇಳೆ, ಹೊಸ ಕಟ್ಟಡ ಕಾಮಗಾರಿ ಕೆಲವು ವರ್ಷಗಳಿಂದ ತೆವಳುತ್ತಿದೆ. <br /> ಕೆಲವು ತಿಂಗಳಿಂದ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಕಾಮಗಾರಿಯನ್ನು ಪೂರ್ಣ ಗೊಳಿಸಬೇಕು ಎಂದು ಧರಣಿ, ಪ್ರತಿಭಟನೆ ನಡೆಸಿದ ಸಂದರ್ಭಗಳಲ್ಲಿ ಭರವಸೆ ನೀಡುವ ವಿವಿ ಅಧಿಕಾರಿಗಳು ನಂತರ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ಕೇಂದ್ರದ ಎಲ್ಲರಿಗೂ ತೊಂದರೆಯಾಗಿದೆ ಎಂದು ಆರೋಪಿಸಿದರು.<br /> <br /> ಕೇಂದ್ರದಿಂದ ಮೆರವಣಿಗೆ ಹೊರಟ ವಿದ್ಯಾರ್ಥಿಗಳು ಕಾಲೇಜು ವೃತ್ತ, ಮೆಕ್ಕೆ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.</p>.<p>ವಿದ್ಯಾರ್ಥಿ ಮುಖಂಡ ಸುರೇಶ್ಗೌಡ, ವಿದ್ಯಾರ್ಥಿಗಳಾದ ದೇವರಾಜ್, ಶಂಕರ್, ಶ್ರೀನಿವಾಸ್, ಕೃಷ್ಣಪ್ಪ, ಹರೀಶ್, ತಿಮ್ಮರಾಯಪ್ಪ, ಮಂಜುನಾಥ್, ಶಿಲ್ಪ, ಭಾರ್ಗವಿ, ಮಂಜುಳ, ಜಯಮ್ಮ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ತಾಲ್ಲೂಕಿನ ಮಂಗಸಂದ್ರ ಸಮೀಪ ನಿರ್ಮಾಣ ಹಂತದಲ್ಲಿ ಸ್ಥಗಿತಗೊಂಡಿರುವ ಸ್ನಾತಕೋತ್ತರ ಕೇಂದ್ರದ ಕಟ್ಟಡ ಕಾಮಗಾರಿಗೆ ಕೂಡಲೇ ಚಾಲನೆ ಕೊಡಬೇಕು ಎಂದು ಆಗ್ರಹಿಸಿ ಕೇಂದ್ರದ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.<br /> <br /> ಬಾಲಕರ ಸರ್ಕಾರಿ ಕಾಲೇಜಿನ ಒಳ ಆವರಣದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕೇಂದ್ರದಲ್ಲಿ ಹಲವು ಸಮಸ್ಯೆಗಳಿವೆ. ಶೌಚಾಲಯ, ಗ್ರಂಥಾಲಯ, ವಿದ್ಯಾರ್ಥಿ ಕೊಠಡಿ, ಅಧ್ಯಾಪಕರ ಕೊಠಡಿ, ತರಗತಿ ಕೊಠಡಿಗಳ ಕೊರತೆ ಹೆಚ್ಚಿದೆ. ಇದೇ ವೇಳೆ, ಹೊಸ ಕಟ್ಟಡ ಕಾಮಗಾರಿ ಕೆಲವು ವರ್ಷಗಳಿಂದ ತೆವಳುತ್ತಿದೆ. <br /> ಕೆಲವು ತಿಂಗಳಿಂದ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಕಾಮಗಾರಿಯನ್ನು ಪೂರ್ಣ ಗೊಳಿಸಬೇಕು ಎಂದು ಧರಣಿ, ಪ್ರತಿಭಟನೆ ನಡೆಸಿದ ಸಂದರ್ಭಗಳಲ್ಲಿ ಭರವಸೆ ನೀಡುವ ವಿವಿ ಅಧಿಕಾರಿಗಳು ನಂತರ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ಕೇಂದ್ರದ ಎಲ್ಲರಿಗೂ ತೊಂದರೆಯಾಗಿದೆ ಎಂದು ಆರೋಪಿಸಿದರು.<br /> <br /> ಕೇಂದ್ರದಿಂದ ಮೆರವಣಿಗೆ ಹೊರಟ ವಿದ್ಯಾರ್ಥಿಗಳು ಕಾಲೇಜು ವೃತ್ತ, ಮೆಕ್ಕೆ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.</p>.<p>ವಿದ್ಯಾರ್ಥಿ ಮುಖಂಡ ಸುರೇಶ್ಗೌಡ, ವಿದ್ಯಾರ್ಥಿಗಳಾದ ದೇವರಾಜ್, ಶಂಕರ್, ಶ್ರೀನಿವಾಸ್, ಕೃಷ್ಣಪ್ಪ, ಹರೀಶ್, ತಿಮ್ಮರಾಯಪ್ಪ, ಮಂಜುನಾಥ್, ಶಿಲ್ಪ, ಭಾರ್ಗವಿ, ಮಂಜುಳ, ಜಯಮ್ಮ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>