<p><strong>ಬೆಂಗಳೂರು:</strong> ‘ಗ್ರಾಮಾಂತರ ಪ್ರದೇಶಗಳಲ್ಲಿ ಒಂದು ವರ್ಷ ಕಾಲ ಸೇವೆ ಸಲ್ಲಿಸುವ ವೈದ್ಯಾಧಿಕಾರಿಗಳಿಗೆ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟು ಹಂಚಿಕೆಯಲ್ಲಿ ಶೇಕಡಾ 50ರಷ್ಟು ಮೀಸಲಾತಿ ನೀಡಲಾಗುವುದು’ ಎಂದು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಆಜಾದ್ ತಿಳಿಸಿದರು.<br /> <br /> ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಗರದ ನಿಮ್ಹಾನ್ಸ್ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ 13ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ವೈದ್ಯಕೀಯ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಿದ ಅವಧಿಯ ಆಧಾರದ ಮೇಲೆ ಅವರಿಗೆ ಸ್ನಾತಕೋತ್ತರ ಪದವಿಯಲ್ಲಿ ವಿಶೇಷ ಅಂಕಗಳನ್ನು ನೀಡಲಾಗುವುದು. ಈ ಸಂಬಂಧ ಭಾರತೀಯ ವೈದ್ಯಕೀಯ ಮಂಡಳಿಯ ನಿಯಮಾವಳಿಯಲ್ಲಿ ತಿದ್ದುಪಡಿ ತರಲಾಗಿದ್ದು, ಅದರಂತೆ ವೈದ್ಯಕೀಯ ಶಿಕ್ಷಣದಲ್ಲಿ ಡಿಪ್ಲೊಮಾ ಪಡೆದವರನ್ನು ವೈದ್ಯಕೀಯ ಸಿಬ್ಬಂದಿ ಎಂದೇ ಪರಿಗಣಿಸಲಾಗುವುದು’ ಎಂದರು.<br /> <br /> <strong>ಬೇಕಿದೆ 20, ಸಿಕ್ಕಿದೆ 10:</strong> ‘ವೈದ್ಯಕೀಯ ಕಾಲೇಜುಗಳು ದಕ್ಷಿಣ ಭಾರತದಲ್ಲಿ ಹೆಚ್ಚು ಕೇಂದ್ರಿಕೃತವಾಗಿವೆ. ಉತ್ತರ ಪ್ರದೇಶ, ಒಡಿಶಾ ಮತ್ತು ಮಧ್ಯಪ್ರದೇಶದಲ್ಲಿ ವೈದ್ಯರ ಕೊರತೆಯಿದ್ದು, ಈ ಭಾಗದಲ್ಲಿ ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಬೇಕಾದ ಅಗತ್ಯವಿದೆ. ಒಂದು ಕಾಲೇಜು ಸ್ಥಾಪನೆಗೆ 20 ಎಕರೆ ಅಗತ್ಯವಿದ್ದು, ಆದರೆ ಅಗತ್ಯಕ್ಕೆ ತಕ್ಕಷ್ಟು ಭೂಮಿ ಸಿಗುತ್ತಿಲ್ಲ. ಆದ್ದರಿಂದ 10 ಎಕರೆಯಲ್ಲೇ ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದೆ’ ಎಂದು ತಿಳಿಸಿದರು.<br /> <br /> ‘ಸಾರ್ವಜನಿಕ ಆಸ್ಪತ್ರೆಗಳು ಇತ್ತೀಚೆಗೆ ಉತ್ತಮ ಸೇವೆ ಸಲ್ಲಿಸಲು ಪ್ರಯತ್ನಿಸುತ್ತಿವೆ. ಖಾಸಗಿ ಆಸ್ಪತ್ರೆಗಳು ನೀಡುತ್ತಿರುವ ಅತ್ಯಾಧುನಿಕ ಸೌಲಭ್ಯಗಳನ್ನು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಅಳವಡಿಸುವುದು ಸವಾಲಿನ ವಿಷಯವಾಗಿದೆ. ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರನ್ನು ಶೋಷಿಸುತ್ತಿವೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.<br /> <br /> ‘ಕೇಂದ್ರ ಸರ್ಕಾರವು ಸಾಮಾನ್ಯ ಜನರಿಗೆ ಆರೋಗ್ಯ ಭದ್ರತೆಯನ್ನು ಒದಗಿಸುವುದರೊಂದಿಗೆ ನೈರ್ಮಲ್ಯ, ಪೋಷಕಾಂಶ ಮತ್ತು ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಗೆ ಹೆಚ್ಚು ಒತ್ತು ನೀಡುತ್ತಿದೆ’ ಎಂದು ತಿಳಿಸಿದರು. <br /> <br /> ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು 44 ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ವರ್ಣ ಪದಕ, 14 ಮಂದಿ ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಿದರು.<br /> ಧಾರವಾಡದ ಎಸ್ಡಿಎಂ ದಂತ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯ ಜುಲ್ಫಿನ್ ಶೇಖ್ ಮತ್ತು ಮಂಗಳೂರಿನ ಯೇನಪೋಯ ವೈದ್ಯಕೀಯ ಕಾಲೇಜಿನ ರೂಪಶ್ರೀ ಅವರು ದಂತ ಮತ್ತು ವೈದ್ಯಕೀಯ ವಿಭಾಗದಲ್ಲಿ ಐದು ಚಿನ್ನದ ಪದಕಗಳನ್ನು ಪಡೆದುಕೊಂಡರು.</p>.<p>ವೈದ್ಯಕೀಯ ಸಚಿವ ಎಸ್.ಎ.ರಾಮದಾಸ್, ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್.ರಮಾನಂದ ಶೆಟ್ಟಿ, ಕುಲಸಚಿವ ಡಾ.ಡಿ.ಪ್ರೇಮ್ಕುಮಾರ್, ಮೌಲ್ಯಮಾಪನ ಕುಲಸಚಿವ ಡಾ.ಜಿ.ಎಸ್.ವೆಂಕಟೇಶ್ ಉಪಸ್ಥಿತರಿದ್ದರು.</p>.<p>ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಘಟಿಕೋತ್ಸವ; <br /> ಶೇಕಡ 50ರಷ್ಟು ಮೀಸಲು ಪ್ರಕಟ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗ್ರಾಮಾಂತರ ಪ್ರದೇಶಗಳಲ್ಲಿ ಒಂದು ವರ್ಷ ಕಾಲ ಸೇವೆ ಸಲ್ಲಿಸುವ ವೈದ್ಯಾಧಿಕಾರಿಗಳಿಗೆ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟು ಹಂಚಿಕೆಯಲ್ಲಿ ಶೇಕಡಾ 50ರಷ್ಟು ಮೀಸಲಾತಿ ನೀಡಲಾಗುವುದು’ ಎಂದು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಆಜಾದ್ ತಿಳಿಸಿದರು.<br /> <br /> ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಗರದ ನಿಮ್ಹಾನ್ಸ್ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ 13ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ವೈದ್ಯಕೀಯ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಿದ ಅವಧಿಯ ಆಧಾರದ ಮೇಲೆ ಅವರಿಗೆ ಸ್ನಾತಕೋತ್ತರ ಪದವಿಯಲ್ಲಿ ವಿಶೇಷ ಅಂಕಗಳನ್ನು ನೀಡಲಾಗುವುದು. ಈ ಸಂಬಂಧ ಭಾರತೀಯ ವೈದ್ಯಕೀಯ ಮಂಡಳಿಯ ನಿಯಮಾವಳಿಯಲ್ಲಿ ತಿದ್ದುಪಡಿ ತರಲಾಗಿದ್ದು, ಅದರಂತೆ ವೈದ್ಯಕೀಯ ಶಿಕ್ಷಣದಲ್ಲಿ ಡಿಪ್ಲೊಮಾ ಪಡೆದವರನ್ನು ವೈದ್ಯಕೀಯ ಸಿಬ್ಬಂದಿ ಎಂದೇ ಪರಿಗಣಿಸಲಾಗುವುದು’ ಎಂದರು.<br /> <br /> <strong>ಬೇಕಿದೆ 20, ಸಿಕ್ಕಿದೆ 10:</strong> ‘ವೈದ್ಯಕೀಯ ಕಾಲೇಜುಗಳು ದಕ್ಷಿಣ ಭಾರತದಲ್ಲಿ ಹೆಚ್ಚು ಕೇಂದ್ರಿಕೃತವಾಗಿವೆ. ಉತ್ತರ ಪ್ರದೇಶ, ಒಡಿಶಾ ಮತ್ತು ಮಧ್ಯಪ್ರದೇಶದಲ್ಲಿ ವೈದ್ಯರ ಕೊರತೆಯಿದ್ದು, ಈ ಭಾಗದಲ್ಲಿ ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಬೇಕಾದ ಅಗತ್ಯವಿದೆ. ಒಂದು ಕಾಲೇಜು ಸ್ಥಾಪನೆಗೆ 20 ಎಕರೆ ಅಗತ್ಯವಿದ್ದು, ಆದರೆ ಅಗತ್ಯಕ್ಕೆ ತಕ್ಕಷ್ಟು ಭೂಮಿ ಸಿಗುತ್ತಿಲ್ಲ. ಆದ್ದರಿಂದ 10 ಎಕರೆಯಲ್ಲೇ ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದೆ’ ಎಂದು ತಿಳಿಸಿದರು.<br /> <br /> ‘ಸಾರ್ವಜನಿಕ ಆಸ್ಪತ್ರೆಗಳು ಇತ್ತೀಚೆಗೆ ಉತ್ತಮ ಸೇವೆ ಸಲ್ಲಿಸಲು ಪ್ರಯತ್ನಿಸುತ್ತಿವೆ. ಖಾಸಗಿ ಆಸ್ಪತ್ರೆಗಳು ನೀಡುತ್ತಿರುವ ಅತ್ಯಾಧುನಿಕ ಸೌಲಭ್ಯಗಳನ್ನು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಅಳವಡಿಸುವುದು ಸವಾಲಿನ ವಿಷಯವಾಗಿದೆ. ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರನ್ನು ಶೋಷಿಸುತ್ತಿವೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.<br /> <br /> ‘ಕೇಂದ್ರ ಸರ್ಕಾರವು ಸಾಮಾನ್ಯ ಜನರಿಗೆ ಆರೋಗ್ಯ ಭದ್ರತೆಯನ್ನು ಒದಗಿಸುವುದರೊಂದಿಗೆ ನೈರ್ಮಲ್ಯ, ಪೋಷಕಾಂಶ ಮತ್ತು ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಗೆ ಹೆಚ್ಚು ಒತ್ತು ನೀಡುತ್ತಿದೆ’ ಎಂದು ತಿಳಿಸಿದರು. <br /> <br /> ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು 44 ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ವರ್ಣ ಪದಕ, 14 ಮಂದಿ ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಿದರು.<br /> ಧಾರವಾಡದ ಎಸ್ಡಿಎಂ ದಂತ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯ ಜುಲ್ಫಿನ್ ಶೇಖ್ ಮತ್ತು ಮಂಗಳೂರಿನ ಯೇನಪೋಯ ವೈದ್ಯಕೀಯ ಕಾಲೇಜಿನ ರೂಪಶ್ರೀ ಅವರು ದಂತ ಮತ್ತು ವೈದ್ಯಕೀಯ ವಿಭಾಗದಲ್ಲಿ ಐದು ಚಿನ್ನದ ಪದಕಗಳನ್ನು ಪಡೆದುಕೊಂಡರು.</p>.<p>ವೈದ್ಯಕೀಯ ಸಚಿವ ಎಸ್.ಎ.ರಾಮದಾಸ್, ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್.ರಮಾನಂದ ಶೆಟ್ಟಿ, ಕುಲಸಚಿವ ಡಾ.ಡಿ.ಪ್ರೇಮ್ಕುಮಾರ್, ಮೌಲ್ಯಮಾಪನ ಕುಲಸಚಿವ ಡಾ.ಜಿ.ಎಸ್.ವೆಂಕಟೇಶ್ ಉಪಸ್ಥಿತರಿದ್ದರು.</p>.<p>ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಘಟಿಕೋತ್ಸವ; <br /> ಶೇಕಡ 50ರಷ್ಟು ಮೀಸಲು ಪ್ರಕಟ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>