<p><strong>ನವದೆಹಲಿ (ಪಿಟಿಐ):</strong> ಬ್ರಿಟನ್ ಮೂಲದ ಖಾಸಗಿ ಬಹುರಾಷ್ಟ್ರೀಯ ಲೆಕ್ಕಪತ್ರ ಸಂಸ್ಥೆ ಪ್ರೈಸ್ವಾಟರ್ ಹೌಸ್ಕೂಪರ್ಸ್ (ಪಿಡಬ್ಲ್ಯುಸಿ) ಮತ್ತು ಭಾರತದಲ್ಲಿ ಅದರ ಜಾಲ ಹೊಂದಿರುವ ಲೆಕ್ಕಪರಿಶೋಧನಾ ಸಂಸ್ಥೆಗಳ ಕಾರ್ಯನಿರ್ವಹಣೆ ಈಗ ನ್ಯಾಯಾಂಗ ವಿಮರ್ಶೆಗೆ ಒಳಗಾಗಿವೆ.<br /> ಹಣಕಾಸು ಅವ್ಯವಹಾರಗಳು ಮತ್ತು ಅಸಮರ್ಥ ಲೆಕ್ಕಪತ್ರ ದಾಖಲು ವ್ಯವಹಾರಗಳಲ್ಲಿ ಭಾಗಿಯಾದ ಆರೋಪದ ಮೇಲೆ ಈ ಎಲ್ಲ ಸಂಸ್ಥೆಗಳ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯೊಂದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಅರ್ಜಿಯಲ್ಲಿ ಪ್ರಸ್ತಾಪಿಸಿರುವ ವಿಷಯಗಳನ್ನು ಪರೀಕ್ಷಿಸುವ ಅವಶ್ಯಕತೆ ಇದೆ ಎಂದು ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.<br /> <br /> ಈ ಸಂಬಂಧ ಕೇಂದ್ರ ಸರ್ಕಾರ, ಆರ್ಬಿಐ, ಕೇಂದ್ರೀಯ ನೇರ ತೆರಿಗೆಗಳ ಮಂಡಳಿ, ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ, ಪಿಡಬ್ಲ್ಯುಸಿ ಹಾಗೂ ಅದರ ವ್ಯಾಪಾರನಾಮವನ್ನು ಹಂಚಿಕೊಂಡಿರುವ ಲೆಕ್ಕಪರಿಶೋಧನಾ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಿದೆ. ಈ ಸಂಸ್ಥೆಗಳು ಆದಾಯ ತೆರಿಗೆ ವಂಚನೆ, ವಿದೇಶಿ ನೇರ ಬಂಡವಾಳ (ಎಫ್ಡಿಐ) ನೀತಿ, ಆರ್ಬಿಐ, ವಿದೇಶಿ ವಿನಿಯಮ ನಿರ್ವಹಣಾ ಕಾಯ್ದೆ (ಫೆಮಾ) ಹಾಗೂ ಇತರ ನಿಯಮಗಳನ್ನು ಉಲ್ಲಂಘನೆ ಮಾಡಿರುವುದಾಗಿ ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ದಾವೆ ಕೇಂದ್ರ (ಸಿಪಿಐಎಲ್) ಎಂಬ ಎನ್ಜಿಒ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧಾರದಲ್ಲಿ ಪೀಠ ಈ ಆದೇಶ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಬ್ರಿಟನ್ ಮೂಲದ ಖಾಸಗಿ ಬಹುರಾಷ್ಟ್ರೀಯ ಲೆಕ್ಕಪತ್ರ ಸಂಸ್ಥೆ ಪ್ರೈಸ್ವಾಟರ್ ಹೌಸ್ಕೂಪರ್ಸ್ (ಪಿಡಬ್ಲ್ಯುಸಿ) ಮತ್ತು ಭಾರತದಲ್ಲಿ ಅದರ ಜಾಲ ಹೊಂದಿರುವ ಲೆಕ್ಕಪರಿಶೋಧನಾ ಸಂಸ್ಥೆಗಳ ಕಾರ್ಯನಿರ್ವಹಣೆ ಈಗ ನ್ಯಾಯಾಂಗ ವಿಮರ್ಶೆಗೆ ಒಳಗಾಗಿವೆ.<br /> ಹಣಕಾಸು ಅವ್ಯವಹಾರಗಳು ಮತ್ತು ಅಸಮರ್ಥ ಲೆಕ್ಕಪತ್ರ ದಾಖಲು ವ್ಯವಹಾರಗಳಲ್ಲಿ ಭಾಗಿಯಾದ ಆರೋಪದ ಮೇಲೆ ಈ ಎಲ್ಲ ಸಂಸ್ಥೆಗಳ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯೊಂದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಅರ್ಜಿಯಲ್ಲಿ ಪ್ರಸ್ತಾಪಿಸಿರುವ ವಿಷಯಗಳನ್ನು ಪರೀಕ್ಷಿಸುವ ಅವಶ್ಯಕತೆ ಇದೆ ಎಂದು ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.<br /> <br /> ಈ ಸಂಬಂಧ ಕೇಂದ್ರ ಸರ್ಕಾರ, ಆರ್ಬಿಐ, ಕೇಂದ್ರೀಯ ನೇರ ತೆರಿಗೆಗಳ ಮಂಡಳಿ, ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ, ಪಿಡಬ್ಲ್ಯುಸಿ ಹಾಗೂ ಅದರ ವ್ಯಾಪಾರನಾಮವನ್ನು ಹಂಚಿಕೊಂಡಿರುವ ಲೆಕ್ಕಪರಿಶೋಧನಾ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಿದೆ. ಈ ಸಂಸ್ಥೆಗಳು ಆದಾಯ ತೆರಿಗೆ ವಂಚನೆ, ವಿದೇಶಿ ನೇರ ಬಂಡವಾಳ (ಎಫ್ಡಿಐ) ನೀತಿ, ಆರ್ಬಿಐ, ವಿದೇಶಿ ವಿನಿಯಮ ನಿರ್ವಹಣಾ ಕಾಯ್ದೆ (ಫೆಮಾ) ಹಾಗೂ ಇತರ ನಿಯಮಗಳನ್ನು ಉಲ್ಲಂಘನೆ ಮಾಡಿರುವುದಾಗಿ ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ದಾವೆ ಕೇಂದ್ರ (ಸಿಪಿಐಎಲ್) ಎಂಬ ಎನ್ಜಿಒ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧಾರದಲ್ಲಿ ಪೀಠ ಈ ಆದೇಶ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>