<p><strong>ಪಿರಿಯಾಪಟ್ಟಣ: </strong>ತಾಲ್ಲೂಕಿನ ಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಅವರು ಪಂಚಾಯಿತಿ ಅಭಿವೃದ್ಧಿ ಕುರಿತು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಣುಕ ಆರೋಪಿಸಿದ್ದಾರೆ. <br /> <br /> ಈ ಕುರಿತು ಗ್ರಾಮ ಪಂಚಾಯಿತಿಯ ಹತ್ತು ಸದಸ್ಯರೊಂದಿಗೆ ಜಂಟಿ ಹೇಳಿಕೆ ನೀಡಿರುವ ಅವರು ಪಿಡಿಓ ಆಶಾ ಅವರು ಸ್ಥಳೀಯ ರಾಜಕೀಯ ಹಿತಾಸಕ್ತಿಗೆ ಬಲಿಯಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಅಥವಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ದೂರಿದ್ದಾರೆ. <br /> <br /> ಪಕ್ಕದ ಚೆನ್ನಕಲ್ಲು ಕಾವಲು ಗ್ರಾಮ ಪಂಚಾಯಿತಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಅವರ ಪತಿಯ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸ್ಥಳೀಯ ಸಮಸ್ಯೆಗಳ ಅರಿವಿಲ್ಲದೆ ಕಚೇರಿಯಲ್ಲಿ ಸದಾ ಲಭ್ಯವಿರುವುದಿಲ್ಲ ಎಂದು ಆರೋಪಿಸಿದ್ದಾರೆ. <br /> <br /> ಸರ್ಕಾರಿ ಆಶ್ರಯ ಯೋಜನೆಯ ಮನೆಗಳು ಮತ್ತು ನಿವೇಶನಗಳನ್ನು ನಿಯಮ ಬಾಹಿರವಾಗಿ ಮಾರಾಟ ಮಾಡಲು ದೃಢೀಕರಣ ಪತ್ರ ನೀಡಿದ್ದಾರೆ ಎಂದು ದೂರಿದ್ದಾರೆ. ಗ್ರಾಮ ಪಂಚಾಯಿತಿಯ ಸಭಾ ನಿರ್ಣಯವನ್ನು ಜಾರಿಗೆ ತರದೆ ಮತ್ತು ಸಂಬಂಧಪಟ್ಟ ಇಲಾಖೆಗೆ ಕಳುಹಿಸದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. <br /> <br /> ಕೂಡಲೆ ಪಿಡಿಓ ಅವರ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಅಧಿಕಾರಿಗಳು ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ವಹಿಸಿದಲ್ಲಿ ತಾಲ್ಲೂಕು ಪಂಚಾಯಿತಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ: </strong>ತಾಲ್ಲೂಕಿನ ಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಅವರು ಪಂಚಾಯಿತಿ ಅಭಿವೃದ್ಧಿ ಕುರಿತು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಣುಕ ಆರೋಪಿಸಿದ್ದಾರೆ. <br /> <br /> ಈ ಕುರಿತು ಗ್ರಾಮ ಪಂಚಾಯಿತಿಯ ಹತ್ತು ಸದಸ್ಯರೊಂದಿಗೆ ಜಂಟಿ ಹೇಳಿಕೆ ನೀಡಿರುವ ಅವರು ಪಿಡಿಓ ಆಶಾ ಅವರು ಸ್ಥಳೀಯ ರಾಜಕೀಯ ಹಿತಾಸಕ್ತಿಗೆ ಬಲಿಯಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಅಥವಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ದೂರಿದ್ದಾರೆ. <br /> <br /> ಪಕ್ಕದ ಚೆನ್ನಕಲ್ಲು ಕಾವಲು ಗ್ರಾಮ ಪಂಚಾಯಿತಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಅವರ ಪತಿಯ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸ್ಥಳೀಯ ಸಮಸ್ಯೆಗಳ ಅರಿವಿಲ್ಲದೆ ಕಚೇರಿಯಲ್ಲಿ ಸದಾ ಲಭ್ಯವಿರುವುದಿಲ್ಲ ಎಂದು ಆರೋಪಿಸಿದ್ದಾರೆ. <br /> <br /> ಸರ್ಕಾರಿ ಆಶ್ರಯ ಯೋಜನೆಯ ಮನೆಗಳು ಮತ್ತು ನಿವೇಶನಗಳನ್ನು ನಿಯಮ ಬಾಹಿರವಾಗಿ ಮಾರಾಟ ಮಾಡಲು ದೃಢೀಕರಣ ಪತ್ರ ನೀಡಿದ್ದಾರೆ ಎಂದು ದೂರಿದ್ದಾರೆ. ಗ್ರಾಮ ಪಂಚಾಯಿತಿಯ ಸಭಾ ನಿರ್ಣಯವನ್ನು ಜಾರಿಗೆ ತರದೆ ಮತ್ತು ಸಂಬಂಧಪಟ್ಟ ಇಲಾಖೆಗೆ ಕಳುಹಿಸದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. <br /> <br /> ಕೂಡಲೆ ಪಿಡಿಓ ಅವರ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಅಧಿಕಾರಿಗಳು ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ವಹಿಸಿದಲ್ಲಿ ತಾಲ್ಲೂಕು ಪಂಚಾಯಿತಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>