<p><strong>ಜಮ್ಮು (ಪಿಟಿಐ): </strong>ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ರಾಜೀನಾಮೆಗೆ ಒತ್ತಾಯಿಸಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪಿಡಿಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.<br /> <br /> ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಕರ್ತ ಸೈಯದ್ ಯೂಸುಫ್ನ ಲಾಕಪ್ ಸಾವಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತಿತರರು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಪಿಡಿಪಿ ಕಾರ್ಯಕರ್ತರು ಶುಕ್ರವಾರ ಬೆಳಿಗ್ಗೆ ಇಲ್ಲಿನ ಗಾಂಧಿನಗರದಲ್ಲಿರುವ ಪಕ್ಷದ ಮುಖ್ಯ ಕಚೇರಿಯಿಂದ ಮೆರವಣಿಗೆ ಹೊರಟರು. ನಂತರ ರಸ್ತೆ ತಡೆ ನಡೆಸಿದರು. <br /> <br /> ಈ ಸಂದರ್ಭ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಮೆರವಣಿಗೆಯ ನೇತೃತ್ವವನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಂಸದ ಬಲಬೀರ್ ಸಿಂಗ್ ಮತ್ತು ಪಕ್ಷದ ಉಪಾಧ್ಯಕ್ಷ ಟಿ.ಎಸ್. ಬಜ್ವಾ ವಹಿಸಿದ್ದರು.<br /> <br /> ಘಟನೆಯಲ್ಲಿ ಇಬ್ಬರು ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪಿಡಿಪಿಯ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ದಾಮನ್ ಬಷೀರ್ ಆರೋಪಿಸಿದ್ದರೆ, ಉದ್ರಿಕ್ತ ಪ್ರತಿಭಟನಾಕಾರರನ್ನು ಚದುರಿಸಲು ಅನಿವಾರ್ಯವಾಗಿ ಲಘು ಲಾಠಿ ಪ್ರಹಾರ ನಡೆಸಲಾಯಿತೇ ಹೊರತು ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಎಸ್ಪಿ ರಾಜೇಶ್ವರ ಸ್ಪಷ್ಟಪಡಿಸಿದ್ದಾರೆ.<br /> <br /> ಶ್ರೀನಗರ ವರದಿ: ಸೈಯದ್ ಯೂಸುಫ್ ಸಾವಿನ ತನಿಖೆಯನ್ನು ಸೂಕ್ತವಾಗಿ ಮತ್ತು ಪಾರದರ್ಶಕವಾಗಿ ನಡೆಸುವ ಮೂಲಕ ಸತ್ಯಾಂಶ ಏನೆಂಬುದನ್ನು ಜನರಿಗೆ ತಿಳಿಯಪಡಿಸಬೇಕು ಎಂದು ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್ನ ಅಧ್ಯಕ್ಷ ಹಕೀಮ್ ಮಹಮ್ಮದ್ ಒತ್ತಾಯಿಸಿದ್ದಾರೆ.<br /> <br /> <strong>ಪಿಡಿಪಿ ವಿರುದ್ಧ ಒಮರ್ ಆರೋಪ<br /> ಶ್ರೀನಗರ (ಐಎಎನ್ಎಸ್):</strong> ನ್ಯಾಷನಲ್ ಡೆಮಾಕ್ರಟಿಕ್ ಪಕ್ಷದ ಕಾರ್ಯಕರ್ತ ಸಯೀದ್ ಮಹಮ್ಮದ್ ಯೂಸುಫ್ ಹತ್ಯೆಗೆ ಸಂಬಂಧಿಸಿದಂತೆ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ ಮಾಡಿರುವ ಆರೋಪಗಳನ್ನು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶುಕ್ರವಾರ ಬಲವಾಗಿ ಅಲ್ಲಗಳೆದಿದ್ದಾರೆ.<br /> <br /> `ಅಂದು ಸಯೀದ್ ನನ್ನ ಮನೆಗೆ ಬಂದಿದ್ದಾಗ ಯಾರೂ ಅವನ ಮೈಮುಟ್ಟಿಲ್ಲ. ನನ್ನ ಮನೆಗೆ ಬಂದು ಹೋದ 12 ಗಂಟೆಗಳ ತರುವಾಯ ಅವನು ಹೃದಯಾಘಾತದಿಂದ ಮರಣ ಹೊಂದಿದ್ದಾನೆ. ಆದರೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅವರು ಈ ವಿಷಯದಲ್ಲಿ ಪ್ರತ್ಯಕ್ಷ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದ್ದಾರೆ~ ಎಂದು ಒಮರ್ ಅಬ್ದುಲ್ಲಾ ಆರೋಪ ಮಾಡಿದ್ದಾರೆ.<br /> <br /> ಖಾಸಗಿ ಟಿ.ವಿ.ಚಾನೆಲ್ವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ಮೃತ ಯುವಕ ಸೈಯದ್ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಅವರ ತಂದೆ ಡಾ.ಫಾರೂಕ್ ಅಬ್ದುಲ್ಲಾ ಅವರಿಗೆ ಅತ್ಯಂತ ನಿಕಟವಾಗಿದ್ದ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು (ಪಿಟಿಐ): </strong>ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ರಾಜೀನಾಮೆಗೆ ಒತ್ತಾಯಿಸಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪಿಡಿಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.<br /> <br /> ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಕರ್ತ ಸೈಯದ್ ಯೂಸುಫ್ನ ಲಾಕಪ್ ಸಾವಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತಿತರರು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಪಿಡಿಪಿ ಕಾರ್ಯಕರ್ತರು ಶುಕ್ರವಾರ ಬೆಳಿಗ್ಗೆ ಇಲ್ಲಿನ ಗಾಂಧಿನಗರದಲ್ಲಿರುವ ಪಕ್ಷದ ಮುಖ್ಯ ಕಚೇರಿಯಿಂದ ಮೆರವಣಿಗೆ ಹೊರಟರು. ನಂತರ ರಸ್ತೆ ತಡೆ ನಡೆಸಿದರು. <br /> <br /> ಈ ಸಂದರ್ಭ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಮೆರವಣಿಗೆಯ ನೇತೃತ್ವವನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಂಸದ ಬಲಬೀರ್ ಸಿಂಗ್ ಮತ್ತು ಪಕ್ಷದ ಉಪಾಧ್ಯಕ್ಷ ಟಿ.ಎಸ್. ಬಜ್ವಾ ವಹಿಸಿದ್ದರು.<br /> <br /> ಘಟನೆಯಲ್ಲಿ ಇಬ್ಬರು ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪಿಡಿಪಿಯ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ದಾಮನ್ ಬಷೀರ್ ಆರೋಪಿಸಿದ್ದರೆ, ಉದ್ರಿಕ್ತ ಪ್ರತಿಭಟನಾಕಾರರನ್ನು ಚದುರಿಸಲು ಅನಿವಾರ್ಯವಾಗಿ ಲಘು ಲಾಠಿ ಪ್ರಹಾರ ನಡೆಸಲಾಯಿತೇ ಹೊರತು ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಎಸ್ಪಿ ರಾಜೇಶ್ವರ ಸ್ಪಷ್ಟಪಡಿಸಿದ್ದಾರೆ.<br /> <br /> ಶ್ರೀನಗರ ವರದಿ: ಸೈಯದ್ ಯೂಸುಫ್ ಸಾವಿನ ತನಿಖೆಯನ್ನು ಸೂಕ್ತವಾಗಿ ಮತ್ತು ಪಾರದರ್ಶಕವಾಗಿ ನಡೆಸುವ ಮೂಲಕ ಸತ್ಯಾಂಶ ಏನೆಂಬುದನ್ನು ಜನರಿಗೆ ತಿಳಿಯಪಡಿಸಬೇಕು ಎಂದು ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್ನ ಅಧ್ಯಕ್ಷ ಹಕೀಮ್ ಮಹಮ್ಮದ್ ಒತ್ತಾಯಿಸಿದ್ದಾರೆ.<br /> <br /> <strong>ಪಿಡಿಪಿ ವಿರುದ್ಧ ಒಮರ್ ಆರೋಪ<br /> ಶ್ರೀನಗರ (ಐಎಎನ್ಎಸ್):</strong> ನ್ಯಾಷನಲ್ ಡೆಮಾಕ್ರಟಿಕ್ ಪಕ್ಷದ ಕಾರ್ಯಕರ್ತ ಸಯೀದ್ ಮಹಮ್ಮದ್ ಯೂಸುಫ್ ಹತ್ಯೆಗೆ ಸಂಬಂಧಿಸಿದಂತೆ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ ಮಾಡಿರುವ ಆರೋಪಗಳನ್ನು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶುಕ್ರವಾರ ಬಲವಾಗಿ ಅಲ್ಲಗಳೆದಿದ್ದಾರೆ.<br /> <br /> `ಅಂದು ಸಯೀದ್ ನನ್ನ ಮನೆಗೆ ಬಂದಿದ್ದಾಗ ಯಾರೂ ಅವನ ಮೈಮುಟ್ಟಿಲ್ಲ. ನನ್ನ ಮನೆಗೆ ಬಂದು ಹೋದ 12 ಗಂಟೆಗಳ ತರುವಾಯ ಅವನು ಹೃದಯಾಘಾತದಿಂದ ಮರಣ ಹೊಂದಿದ್ದಾನೆ. ಆದರೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅವರು ಈ ವಿಷಯದಲ್ಲಿ ಪ್ರತ್ಯಕ್ಷ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದ್ದಾರೆ~ ಎಂದು ಒಮರ್ ಅಬ್ದುಲ್ಲಾ ಆರೋಪ ಮಾಡಿದ್ದಾರೆ.<br /> <br /> ಖಾಸಗಿ ಟಿ.ವಿ.ಚಾನೆಲ್ವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ಮೃತ ಯುವಕ ಸೈಯದ್ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಅವರ ತಂದೆ ಡಾ.ಫಾರೂಕ್ ಅಬ್ದುಲ್ಲಾ ಅವರಿಗೆ ಅತ್ಯಂತ ನಿಕಟವಾಗಿದ್ದ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>