<p><strong>ನವದೆಹಲಿ, (ಪಿಟಿಐ): </strong>ರೈಲು ಮಾರ್ಗಗಳು, ಸಿಗ್ನಲ್ಗಳು ಮತ್ತು ನಿಲ್ದಾಣಗಳ ಆಧುನೀಕರಣಕ್ಕೆ ಸೂಕ್ತ ಶಿಫಾರಸುಗಳನ್ನು ಮಾಡಲು ಸ್ಯಾಮ್ ಪಿತ್ರೋಡಾ ಅಧ್ಯಕ್ಷತೆಯಲ್ಲಿ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದೆ.<br /> <br /> ರೈಲ್ವೆಯನ್ನು ನಾಲ್ಕನೇ ತಲೆಮಾರಿಗೆ ಒಯ್ಯುವ ಉದ್ದೇಶದಿಂದ ಆಧುನೀಕರಣದ ಶಿಫಾರಸಿಗೆ ಈ ಸಮಿತಿಯನ್ನು ರಚಿಸಲಾಗಿದೆ ಎಂದು ರೈಲ್ವೆ ಸಚಿವ ದಿನೇಶ್ ತ್ರಿವೇದಿ ತಿಳಿಸಿದ್ದಾರೆ.<br /> <br /> ಎಚ್ಡಿಎಫ್ಸಿ ಅಧ್ಯಕ್ಷ ದೀಪಕ್ ಪ್ರಕಾಶ್, ಎಸ್ಬಿಐ ಮಾಜಿ ಅಧ್ಯಕ್ಷ ಎಂ.ಎಸ್.ವರ್ಮ, ಅಹಮದಾಬಾದ್ ಐಐಎಂ ಪ್ರೊ. ರಘುರಾಮ್, ಐಡಿಎಫ್ಸಿ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಲಾಲ್ ಮತ್ತು ಫೀಡ್ಬ್ಯಾಕ್ ಇನ್ಫ್ರಾಸ್ಟ್ರಕ್ಚರ್ ಸರ್ವೀಸಸ್ನ ಅಧ್ಯಕ್ಷ ವಿನಾಯಕ್ ಚಟರ್ಜಿ ಸಮಿತಿಯ ಸದಸ್ಯರಾಗಿರುತ್ತಾರೆ.<br /> <br /> ಎರಡು ತಿಂಗಳಲ್ಲಿ ಸಮಿತಿಯು ಪ್ರಾಥಮಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ರೈಲ್ವೆ ಮಾಜಿ ಸಚಿವೆ ಮಮತಾ ಬ್ಯಾನರ್ಜಿ ಸಿದ್ಧಪಡಿಸಿದ್ದ 2010ರ ಮುನ್ನೋಟ ವರದಿಯನ್ನು ಶೀಘ್ರವಾಗಿ ಜಾರಿ ಮಾಡುವ ಕಾಲ ಸನ್ನಿಹಿತವಾಗಿದೆ. <br /> <br /> ಆಧುನೀಕರಣದ ಆರಂಭಿಕ ಕೆಲಸವನ್ನು ಮಮತಾ ಅವರ ಕಾಲದಲ್ಲೇ ಆರಂಭ ಮಾಡಲಾಗಿರುವುದರಿಂದ ಈಗ ಆ ಕೆಲಸವನ್ನು ತ್ವರಿತವಾಗಿ ಪೂರ್ತಿಗೊಳಿಸಬೇಕಾಗಿದೆ ಎಂದು ಪಿತ್ರೋಡಾ ತಿಳಿಸಿದ್ದಾರೆ.<br /> <br /> ರೈಲ್ವೆ ಸುರಕ್ಷತೆಯ ಬಗ್ಗೆ ಶಿಫಾರಸು ಮಾಡಲು ಕಳೆದ ವಾರ ಪರಮಾಣು ವಿಜ್ಞಾನಿ ಅನಿಲ್ ಕಾಕೋಡ್ಕರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ನೇಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, (ಪಿಟಿಐ): </strong>ರೈಲು ಮಾರ್ಗಗಳು, ಸಿಗ್ನಲ್ಗಳು ಮತ್ತು ನಿಲ್ದಾಣಗಳ ಆಧುನೀಕರಣಕ್ಕೆ ಸೂಕ್ತ ಶಿಫಾರಸುಗಳನ್ನು ಮಾಡಲು ಸ್ಯಾಮ್ ಪಿತ್ರೋಡಾ ಅಧ್ಯಕ್ಷತೆಯಲ್ಲಿ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದೆ.<br /> <br /> ರೈಲ್ವೆಯನ್ನು ನಾಲ್ಕನೇ ತಲೆಮಾರಿಗೆ ಒಯ್ಯುವ ಉದ್ದೇಶದಿಂದ ಆಧುನೀಕರಣದ ಶಿಫಾರಸಿಗೆ ಈ ಸಮಿತಿಯನ್ನು ರಚಿಸಲಾಗಿದೆ ಎಂದು ರೈಲ್ವೆ ಸಚಿವ ದಿನೇಶ್ ತ್ರಿವೇದಿ ತಿಳಿಸಿದ್ದಾರೆ.<br /> <br /> ಎಚ್ಡಿಎಫ್ಸಿ ಅಧ್ಯಕ್ಷ ದೀಪಕ್ ಪ್ರಕಾಶ್, ಎಸ್ಬಿಐ ಮಾಜಿ ಅಧ್ಯಕ್ಷ ಎಂ.ಎಸ್.ವರ್ಮ, ಅಹಮದಾಬಾದ್ ಐಐಎಂ ಪ್ರೊ. ರಘುರಾಮ್, ಐಡಿಎಫ್ಸಿ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಲಾಲ್ ಮತ್ತು ಫೀಡ್ಬ್ಯಾಕ್ ಇನ್ಫ್ರಾಸ್ಟ್ರಕ್ಚರ್ ಸರ್ವೀಸಸ್ನ ಅಧ್ಯಕ್ಷ ವಿನಾಯಕ್ ಚಟರ್ಜಿ ಸಮಿತಿಯ ಸದಸ್ಯರಾಗಿರುತ್ತಾರೆ.<br /> <br /> ಎರಡು ತಿಂಗಳಲ್ಲಿ ಸಮಿತಿಯು ಪ್ರಾಥಮಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ರೈಲ್ವೆ ಮಾಜಿ ಸಚಿವೆ ಮಮತಾ ಬ್ಯಾನರ್ಜಿ ಸಿದ್ಧಪಡಿಸಿದ್ದ 2010ರ ಮುನ್ನೋಟ ವರದಿಯನ್ನು ಶೀಘ್ರವಾಗಿ ಜಾರಿ ಮಾಡುವ ಕಾಲ ಸನ್ನಿಹಿತವಾಗಿದೆ. <br /> <br /> ಆಧುನೀಕರಣದ ಆರಂಭಿಕ ಕೆಲಸವನ್ನು ಮಮತಾ ಅವರ ಕಾಲದಲ್ಲೇ ಆರಂಭ ಮಾಡಲಾಗಿರುವುದರಿಂದ ಈಗ ಆ ಕೆಲಸವನ್ನು ತ್ವರಿತವಾಗಿ ಪೂರ್ತಿಗೊಳಿಸಬೇಕಾಗಿದೆ ಎಂದು ಪಿತ್ರೋಡಾ ತಿಳಿಸಿದ್ದಾರೆ.<br /> <br /> ರೈಲ್ವೆ ಸುರಕ್ಷತೆಯ ಬಗ್ಗೆ ಶಿಫಾರಸು ಮಾಡಲು ಕಳೆದ ವಾರ ಪರಮಾಣು ವಿಜ್ಞಾನಿ ಅನಿಲ್ ಕಾಕೋಡ್ಕರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ನೇಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>