<p><strong>ಬೆಂಗಳೂರು:</strong> ದ್ವಿತೀಯ ಪಿಯುಸಿ ಪರೀಕ್ಷೆಗಳು ಇದೇ 17ರಿಂದ ಆರಂಭವಾಗುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ‘ಸಹಾಯವಾಣಿ’ ಆರಂಭಿಸಿದೆ.</p>.<p>ಇದೇ 7ರಿಂದ 15ರವರೆಗೆ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಸಹಾಯವಾಣಿ ಕಾರ್ಯನಿರ್ವಹಿಸಲಿದ್ದು, ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಇಲಾಖೆಯ ಅಧಿಕಾರಿಗಳು ಹಾಗೂ ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ತಜ್ಞರು ಮಾರ್ಗದರ್ಶನ ಮಾಡಲಿದ್ದಾರೆ.</p>.<p>ಮಾನಸಿಕ ಒತ್ತಡ, ಅಭ್ಯಾಸ ಮಾಡುವ ರೀತಿ, ಪಾಠಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಪಾಲಿಸಬೇಕಾದ ಕ್ರಮಗಳ ಬಗ್ಗೆ ತಿಳಿಸಿಕೊಡಲು ಸಹಾಯವಾಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದೂರವಾಣಿ ಸಂಖ್ಯೆ: 1800-425-21234ಕ್ಕೆ ಉಚಿತ ಕರೆ ಮಾಡಬಹುದು.</p>.<p><br /> ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವ ವಿಧಾನ, ಅಧ್ಯಯನ ಕೌಶಲ್ಯ, ಪರೀಕ್ಷಾ ಭೀತಿ, ಸಮಯ ನಿರ್ವಹಣೆ, ಜ್ಞಾಪಕ ಶಕ್ತಿ ಕಡಿಮೆ, ತಂದೆ- ತಾಯಿ/ಸ್ನೇಹಿತರ ಒತ್ತಡ, ಮುಂದಿನ ಶಿಕ್ಷಣ ಕುರಿತ ಗೊಂದಲ, ವಿದ್ಯಾರ್ಥಿಗಳ ವರ್ತನೆಯಲ್ಲಿ ಆಗುವ ಬದಲಾವಣೆ, ಇಷ್ಟವಿಲ್ಲದ ವಿಷಯಗಳನ್ನು ಓದಬೇಕಾದ ಅನಿವಾರ್ಯತೆ ಇತ್ಯಾದಿ ಪ್ರಶ್ನೆಗಳನ್ನು ಕೇಳಬಹುದು.</p>.<p>ಅಲ್ಲದೆ ಪ್ರವೇಶ ಪತ್ರ ಬಾರದಿರುವುದು/ಕಳೆದು ಹೋಗಿರುವುದು, ಪತ್ರದಲ್ಲಿ ತಪ್ಪಾಗಿ ಮುದ್ರಣವಾಗಿರುವುದು, ಶೇ 75ರಷ್ಟು ಹಾಜರಾತಿ ಇಲ್ಲದೆ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡದೆ ಇರುವುದು, ಸಿಇಟಿ ಕುರಿತ ಮಾಹಿತಿ ಬಗ್ಗೆಯೂ ಪ್ರಶ್ನೆಗಳನ್ನು ಕೇಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದ್ವಿತೀಯ ಪಿಯುಸಿ ಪರೀಕ್ಷೆಗಳು ಇದೇ 17ರಿಂದ ಆರಂಭವಾಗುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ‘ಸಹಾಯವಾಣಿ’ ಆರಂಭಿಸಿದೆ.</p>.<p>ಇದೇ 7ರಿಂದ 15ರವರೆಗೆ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಸಹಾಯವಾಣಿ ಕಾರ್ಯನಿರ್ವಹಿಸಲಿದ್ದು, ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಇಲಾಖೆಯ ಅಧಿಕಾರಿಗಳು ಹಾಗೂ ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ತಜ್ಞರು ಮಾರ್ಗದರ್ಶನ ಮಾಡಲಿದ್ದಾರೆ.</p>.<p>ಮಾನಸಿಕ ಒತ್ತಡ, ಅಭ್ಯಾಸ ಮಾಡುವ ರೀತಿ, ಪಾಠಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಪಾಲಿಸಬೇಕಾದ ಕ್ರಮಗಳ ಬಗ್ಗೆ ತಿಳಿಸಿಕೊಡಲು ಸಹಾಯವಾಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದೂರವಾಣಿ ಸಂಖ್ಯೆ: 1800-425-21234ಕ್ಕೆ ಉಚಿತ ಕರೆ ಮಾಡಬಹುದು.</p>.<p><br /> ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವ ವಿಧಾನ, ಅಧ್ಯಯನ ಕೌಶಲ್ಯ, ಪರೀಕ್ಷಾ ಭೀತಿ, ಸಮಯ ನಿರ್ವಹಣೆ, ಜ್ಞಾಪಕ ಶಕ್ತಿ ಕಡಿಮೆ, ತಂದೆ- ತಾಯಿ/ಸ್ನೇಹಿತರ ಒತ್ತಡ, ಮುಂದಿನ ಶಿಕ್ಷಣ ಕುರಿತ ಗೊಂದಲ, ವಿದ್ಯಾರ್ಥಿಗಳ ವರ್ತನೆಯಲ್ಲಿ ಆಗುವ ಬದಲಾವಣೆ, ಇಷ್ಟವಿಲ್ಲದ ವಿಷಯಗಳನ್ನು ಓದಬೇಕಾದ ಅನಿವಾರ್ಯತೆ ಇತ್ಯಾದಿ ಪ್ರಶ್ನೆಗಳನ್ನು ಕೇಳಬಹುದು.</p>.<p>ಅಲ್ಲದೆ ಪ್ರವೇಶ ಪತ್ರ ಬಾರದಿರುವುದು/ಕಳೆದು ಹೋಗಿರುವುದು, ಪತ್ರದಲ್ಲಿ ತಪ್ಪಾಗಿ ಮುದ್ರಣವಾಗಿರುವುದು, ಶೇ 75ರಷ್ಟು ಹಾಜರಾತಿ ಇಲ್ಲದೆ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡದೆ ಇರುವುದು, ಸಿಇಟಿ ಕುರಿತ ಮಾಹಿತಿ ಬಗ್ಗೆಯೂ ಪ್ರಶ್ನೆಗಳನ್ನು ಕೇಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>