<p><strong>ಬೆಂಗಳೂರು</strong>: ಪ್ರಶ್ನೆಪತ್ರಿಕೆ ಬಹಿರಂಗವಾದ ಹಿನ್ನೆಲೆಯಲ್ಲಿ ಮಂಗಳವಾರ (ಮಾ.20) ನಡೆಯಬೇಕಿದ್ದ ದ್ವಿತೀಯ ಪಿಯುಸಿ ಗಣಿತ ವಿಷಯದ ಪರೀಕ್ಷೆ ಯನ್ನು ಏಪ್ರಿಲ್ ಮೂರಕ್ಕೆ ಮುಂದೂ ಡಿದ್ದು, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.<br /> <br /> ಘಟನೆ ಸಂಬಂಧ ಈಗಾಗಲೇ ಚಿಂತಾಮಣಿ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.<br /> <br /> ಮಂಗಳವಾರ ನಡೆಯಬೇಕಿದ್ದ ಗಣಿತ ವಿಷಯದ ಪರೀಕ್ಷೆಯ ಪ್ರಶ್ನೆಪತ್ರಿಕೆಯು ಚಿಂತಾಮಣಿ, ಮುಳಬಾಗಿಲು, ಮಾಲೂರು ಸೇರಿದಂತೆ ಹಲವೆಡೆ ಸೋಮವಾರ ಸಂಜೆ ಬಹಿರಂಗವಾಗಿರುವ ಸುದ್ದಿ ಕೇಳಿಬಂತು. ಆದರೆ ಮಧ್ಯರಾತ್ರಿವರೆಗೂ ಇದು ಖಚಿತವಾಗಲಿಲ್ಲ. <br /> <br /> ಬಹಿರಂಗವಾಗಿರುವ ಪ್ರಶ್ನೆಪತ್ರಿಕೆ ಮತ್ತು ಮೂಲ ಪ್ರಶ್ನೆಪತ್ರಿಕೆ ಒಂದೇ ಆಗಿರುವುದು ತೀವ್ರ ಪರಿಶೀಲನೆ ನಂತರ ಖಚಿತವಾಯಿತು ಎನ್ನಲಾಗಿದೆ.<br /> </p>.<p>ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗಿನ ಜಾವ 2.30ಕ್ಕೆ ಪರೀಕ್ಷೆ ಮುಂದೂಡುವ ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತರಾದ ವಿ.ರಶ್ಮಿ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಏಪ್ರಿಲ್ 3ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12.15ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಸೂಚಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ ಆ ದಿನ ಪರೀಕ್ಷೆಗೆ ಹಾಜರಾಗಬೇಕು.<br /> <br /> <strong>ಇನ್ನೂ ಗೊತ್ತಾಗಿಲ್ಲ:</strong> ಪ್ರಶ್ನೆಪತ್ರಿಕೆ ಬಹಿರಂಗವಾಗಿದ್ದು ಹೇಗೆ ಎಂಬುದು ಇನ್ನೂ ಗೊತ್ತಾಗಿಲ್ಲ. ಪರೀಕ್ಷೆಯ ದಿನವೇ ಬೆಳಿಗ್ಗೆ 8 ಗಂಟೆ ಸುಮಾರಿಗೆ ಆಯಾ ತಾಲ್ಲೂಕಿನ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಹೊರ ತೆಗೆದು ಸಂಬಂಧಪಟ್ಟ ಕಾಲೇಜುಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಇದೆ. ಆದರೆ ಸೋಮವಾರವೇ ಪ್ರಶ್ನೆಪತ್ರಿಕೆ ಹೇಗೆ ಹೊರಗೆ ಬಂತು ಎಂಬುದು ಅಧಿಕಾರಿಗಳಿಗೂ ಗೊತ್ತಾಗುತ್ತಿಲ್ಲ.<br /> <br /> ಮೊದಲಿಗೆ ಚಿಂತಾಮಣಿಯ ವೆಂಕಟಾದ್ರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಶ್ನೆಪತ್ರಿಕೆ ಬಹಿರಂಗವಾಯಿತು. ಇದಾದ ನಂತರ ಮುಳಬಾಗಿಲು, ಮಾಲೂರಿನಲ್ಲೂ ಇದೇ ರೀತಿ ಪ್ರಶ್ನೆಪತ್ರಿಕೆಗಳು ಬಹಿರಂಗವಾಗಿರುವುದು ಖಚಿತವಾಯಿತು ಎಂದು ಅವರು ಹೇಳಿದರು.<br /> <br /> ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳವಾರ ಬೆಳಗಿನ ಜಾವ ಪರೀಕ್ಷೆ ಮುಂದೂಡುವ ತೀರ್ಮಾನ ತೆಗೆದುಕೊಂಡಿತು. ಆದರೆ ಪರೀಕ್ಷೆ ಮುಂದೂಡಿರುವ ವಿಷಯ ವಿದ್ಯಾರ್ಥಿಗಳಿಗೆ ಕಾಲೇಜುಗಳಿಗೆ ಬರುವವರೆಗೂ ಗೊತ್ತಾಗಿರಲಿಲ್ಲ. ಇದರಿಂದಾಗಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ವಿಷಯ ಕೇಳಿ ಗಾಬರಿಗೆ ಒಳಗಾದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರಶ್ನೆಪತ್ರಿಕೆ ಬಹಿರಂಗವಾದ ಹಿನ್ನೆಲೆಯಲ್ಲಿ ಮಂಗಳವಾರ (ಮಾ.20) ನಡೆಯಬೇಕಿದ್ದ ದ್ವಿತೀಯ ಪಿಯುಸಿ ಗಣಿತ ವಿಷಯದ ಪರೀಕ್ಷೆ ಯನ್ನು ಏಪ್ರಿಲ್ ಮೂರಕ್ಕೆ ಮುಂದೂ ಡಿದ್ದು, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.<br /> <br /> ಘಟನೆ ಸಂಬಂಧ ಈಗಾಗಲೇ ಚಿಂತಾಮಣಿ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.<br /> <br /> ಮಂಗಳವಾರ ನಡೆಯಬೇಕಿದ್ದ ಗಣಿತ ವಿಷಯದ ಪರೀಕ್ಷೆಯ ಪ್ರಶ್ನೆಪತ್ರಿಕೆಯು ಚಿಂತಾಮಣಿ, ಮುಳಬಾಗಿಲು, ಮಾಲೂರು ಸೇರಿದಂತೆ ಹಲವೆಡೆ ಸೋಮವಾರ ಸಂಜೆ ಬಹಿರಂಗವಾಗಿರುವ ಸುದ್ದಿ ಕೇಳಿಬಂತು. ಆದರೆ ಮಧ್ಯರಾತ್ರಿವರೆಗೂ ಇದು ಖಚಿತವಾಗಲಿಲ್ಲ. <br /> <br /> ಬಹಿರಂಗವಾಗಿರುವ ಪ್ರಶ್ನೆಪತ್ರಿಕೆ ಮತ್ತು ಮೂಲ ಪ್ರಶ್ನೆಪತ್ರಿಕೆ ಒಂದೇ ಆಗಿರುವುದು ತೀವ್ರ ಪರಿಶೀಲನೆ ನಂತರ ಖಚಿತವಾಯಿತು ಎನ್ನಲಾಗಿದೆ.<br /> </p>.<p>ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗಿನ ಜಾವ 2.30ಕ್ಕೆ ಪರೀಕ್ಷೆ ಮುಂದೂಡುವ ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತರಾದ ವಿ.ರಶ್ಮಿ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಏಪ್ರಿಲ್ 3ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12.15ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಸೂಚಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ ಆ ದಿನ ಪರೀಕ್ಷೆಗೆ ಹಾಜರಾಗಬೇಕು.<br /> <br /> <strong>ಇನ್ನೂ ಗೊತ್ತಾಗಿಲ್ಲ:</strong> ಪ್ರಶ್ನೆಪತ್ರಿಕೆ ಬಹಿರಂಗವಾಗಿದ್ದು ಹೇಗೆ ಎಂಬುದು ಇನ್ನೂ ಗೊತ್ತಾಗಿಲ್ಲ. ಪರೀಕ್ಷೆಯ ದಿನವೇ ಬೆಳಿಗ್ಗೆ 8 ಗಂಟೆ ಸುಮಾರಿಗೆ ಆಯಾ ತಾಲ್ಲೂಕಿನ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಹೊರ ತೆಗೆದು ಸಂಬಂಧಪಟ್ಟ ಕಾಲೇಜುಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಇದೆ. ಆದರೆ ಸೋಮವಾರವೇ ಪ್ರಶ್ನೆಪತ್ರಿಕೆ ಹೇಗೆ ಹೊರಗೆ ಬಂತು ಎಂಬುದು ಅಧಿಕಾರಿಗಳಿಗೂ ಗೊತ್ತಾಗುತ್ತಿಲ್ಲ.<br /> <br /> ಮೊದಲಿಗೆ ಚಿಂತಾಮಣಿಯ ವೆಂಕಟಾದ್ರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಶ್ನೆಪತ್ರಿಕೆ ಬಹಿರಂಗವಾಯಿತು. ಇದಾದ ನಂತರ ಮುಳಬಾಗಿಲು, ಮಾಲೂರಿನಲ್ಲೂ ಇದೇ ರೀತಿ ಪ್ರಶ್ನೆಪತ್ರಿಕೆಗಳು ಬಹಿರಂಗವಾಗಿರುವುದು ಖಚಿತವಾಯಿತು ಎಂದು ಅವರು ಹೇಳಿದರು.<br /> <br /> ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳವಾರ ಬೆಳಗಿನ ಜಾವ ಪರೀಕ್ಷೆ ಮುಂದೂಡುವ ತೀರ್ಮಾನ ತೆಗೆದುಕೊಂಡಿತು. ಆದರೆ ಪರೀಕ್ಷೆ ಮುಂದೂಡಿರುವ ವಿಷಯ ವಿದ್ಯಾರ್ಥಿಗಳಿಗೆ ಕಾಲೇಜುಗಳಿಗೆ ಬರುವವರೆಗೂ ಗೊತ್ತಾಗಿರಲಿಲ್ಲ. ಇದರಿಂದಾಗಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ವಿಷಯ ಕೇಳಿ ಗಾಬರಿಗೆ ಒಳಗಾದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>