<p><strong>ರಾಮನಗರ: </strong>ವಿದ್ಯಾರ್ಥಿ ಜೀವನದಲ್ಲಿ ಮಹತ್ವದ ತಿರುವು ಎಂದೇ ಪರಿಗಣಿಸಲಾಗಿರುವ ದ್ವಿತೀಯ ಪಿ.ಯು ಪರೀಕ್ಷೆಯನ್ನು ಜಿಲ್ಲೆಯಲ್ಲಿ ತೆಗೆದುಕೊಂಡಿರುವ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಈ ವರ್ಷ ಗಣನೀಯವಾಗಿ ಕುಸಿದಿದೆ.<br /> <br /> ವೃತ್ತಿ ಶಿಕ್ಷಣ ಕೋರ್ಸ್ಗಳಾದ ಎಂಜಿನಿಯರಿಂಗ್, ವೈದ್ಯಕೀಯ ಪದವಿ ಹಾಗೂ ಇತರ ಸಾಂಪ್ರದಾಯಿಕ ಪದವಿ ಕೋರ್ಸ್ಗಳ ಪ್ರವೇಶಕ್ಕೆ ದ್ವಿತೀಯ ಪಿ.ಯು ಪರೀಕ್ಷೆಯೇ ಮಾನದಂಡ. ಅದರೆ ಜಿಲ್ಲೆಯಲ್ಲಿ ಪದವಿ ಪೂರ್ವ ಶಿಕ್ಷಣಕ್ಕೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವುದು ಬೋಧಕ ವರ್ಗವನ್ನು ಚಿಂತೆಗೀಡು ಮಾಡಿದೆ.<br /> <br /> ಸಾಮಾನ್ಯವಾಗಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಹೋಗುತ್ತಿದ್ದ ದ್ವಿತೀಯ ಪಿ.ಯು ವಿದ್ಯಾರ್ಥಿಗಳ ಸಂಖ್ಯೆ ಈ ಬಾರಿ ಜಿಲ್ಲೆಯಲ್ಲಿ ಕುಸಿತ ಕಂಡಿದೆ. ಅದೂ ಹತ್ತಲ್ಲ, ಇಪ್ಪತ್ತಲ್ಲ... ಬರೋಬ್ಬರಿ 720 ವಿದ್ಯಾರ್ಥಿಗಳು ಕಡಿಮೆಯಾಗಿದ್ದಾರೆ. <br /> <br /> ಇದೇ 15ರಿಂದ ಆರಂಭವಾಗಲಿರುವ ದ್ವಿತೀಯ ಪಿ.ಯು ಪರೀಕ್ಷೆಯನ್ನು ಜಿಲ್ಲೆಯಲ್ಲಿ 9,112 ವಿದ್ಯಾರ್ಥಿಗಳು ತೆಗೆದುಕೊಂಡಿದ್ದಾರೆ. ಆದರೆ ಕಳೆದ ವರ್ಷ ಜಿಲ್ಲೆಯಿಂದ 9, 832 ವಿದ್ಯಾರ್ಥಿಗಳು ದ್ವಿತೀಯ ಪಿ.ಯು ಪರೀಕ್ಷೆ ತೆಗೆದುಕೊಂಡಿದ್ದರು. <br /> <br /> ವಿಜ್ಞಾನ ವಿಭಾಗದಲ್ಲಿಯೇ ಹೆಚ್ಚಿನ ವಿದ್ಯಾರ್ಥಿಗಳ ಕುಸಿತ ಕಂಡು ಬಂದಿದೆ. ಕಳೆದ ವರ್ಷ 1,608 ವಿದ್ಯಾರ್ಥಿಗಳು ವಿಜ್ಞಾನವನ್ನು ಆಯ್ಕೆ ಮಾಡಿಕೊಂಡಿದ್ದರೆ, ಈ ವರ್ಷ 1, 270 ವಿದ್ಯಾರ್ಥಿಗಳು ವಿಜ್ಞಾನವನ್ನು ತೆಗೆದುಕೊಂಡಿದ್ದು, 338 ವಿದ್ಯಾರ್ಥಿಗಳು ಕಡಿಮೆಯಾಗಿದ್ದಾರೆ.<br /> <br /> ಹೊಸಬರಲ್ಲೂ ಇಳಿಮುಖ:ದ್ವಿತೀಯ ಪಿ.ಯು ಪರೀಕ್ಷೆ ತೆಗೆದುಕೊಳ್ಳುತ್ತಿರುವ ಹೊಸ ವಿದ್ಯಾರ್ಥಿಗಳ ಸಂಖ್ಯೆಯೂ ಇಳಿಮುಖವಾಗಿದೆ. ಕಳೆದ ವರ್ಷ 7,432 ಹೊಸ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರೆ ಈ ಬಾರಿ 6,856 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಅಂದರೆ 576 ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ.<br /> <br /> ಬಡತನ, ಪೋಷಕರ ಮತ್ತು ವಿದ್ಯಾರ್ಥಿಗಳಲ್ಲಿನ ನಿರಾಸಕ್ತಿ, ಸೂಕ್ತ ಮಾರ್ಗದರ್ಶನದ ಕೊರತೆ, ಆರ್ಥಿಕ ನೆರವಿನಿಂದ ಕೆಲ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ನಂತರ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇನ್ನೂ ಕೆಲವರು ಎಸ್ಸೆಸ್ಸೆಲ್ಸಿ ನಂತರ ಐಟಿಐ, ಡಿಪ್ಲೊಮಾ, ಕಂಪ್ಯೂಟರ್ ತರಬೇತಿ ಕೋರ್ಸ್ಗಳತ್ತ ಮುಖ ಮಾಡಿದ್ದಾರೆ. <br /> <br /> ಮತ್ತೂ ಕೆಲವರು ಮುಂದಿನ ವ್ಯಾಸಂಗಕ್ಕೆ ಬೆಂಗಳೂರು, ಮಂಡ್ಯ, ಮೈಸೂರಿನತ್ತ ವಲಸೆ ಹೋಗಿದ್ದಾರೆ. ಈ ಕಾರಣಗಳಿಂದ ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಕಡಿಮೆ ವಿದ್ಯಾರ್ಥಿಗಳು ಈ ವರ್ಷ ದ್ವಿತೀಯ ಪಿ.ಯು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಡಿಡಿಪಿಯು ಕಚೇರಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.<br /> <br /> ಪರೀಕ್ಷೆಗೆ ಸಿದ್ಧತೆ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು ಪರೀಕ್ಷೆ ನಡೆಸಲು ಜಿಲ್ಲೆಯಾದ್ಯಂತ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 13 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಎಂ. ಚಲುವಪ್ಪ `ಪ್ರಜಾವಾಣಿ~ಗೆತಿಳಿಸಿದರು.<br /> <br /> ಈ ವರ್ಷ ಒಟ್ಟು 4, 673 ಬಾಲಕರು ಹಾಗೂ 4,439 ಬಾಲಕಿಯರು ಪರೀಕ್ಷೆ ತೆಗೆದುಕೊಂಡಿದ್ದಾರೆ. ಅದರಲ್ಲಿ 1,792 ಪುನರಾವರ್ತಿತ ಮತ್ತು 464 ಖಾಸಗಿ ವಿದ್ಯಾರ್ಥಿಗಳಾಗಿದ್ದು, 6, 856 ಹೊಸ ವಿದ್ಯಾರ್ಥಿಗಳಾಗಿದ್ದಾರೆ ಎಂದು ಅವರು ವಿವರಿಸಿದರು.<br /> <br /> ರಾಮನಗರ ತಾಲ್ಲೂಕಿನಲ್ಲಿ 4 (ಬಿಡದಿಯಲ್ಲಿ 1), ಕನಕಪುರದಲ್ಲಿ 4, ಚನ್ನಪಟ್ಟಣದಲ್ಲಿ 3 ಮತ್ತು ಮಾಗಡಿಯಲ್ಲಿ 2 (ಕುದೂರಿನಲ್ಲಿ 1) ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 13 ಕೇಂದ್ರಗಳಲ್ಲಿ ಚನ್ನಪಟ್ಟಣದ ಸಾರ್ವಜನಿಕ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರವನ್ನು ಸೂಕ್ಷ್ಮ ಕೇಂದ್ರ ಎಂದು ಗುರುತಿಸಿ ಹೆಚ್ಚಿನ ನಿಗಾ ಇಡಲಾಗಿದೆ ಎಂದು ಅವರು ಹೇಳಿದರು.<br /> <br /> <strong>ನಕಲು ತಡೆಗೆ ಕ್ರಮ: </strong>ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ `ಸಿಟ್ಟಿಂಗ್ ಸ್ಕ್ವಾಡ್~ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಜಾಗೃತ ದಳ ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ ಸಿಇಒ, ಡಿಡಿಪಿಯು ನೇತೃತ್ವದಲ್ಲಿ ಜಾಗೃತ ದಳ ಇರುತ್ತದೆ ಎಂದು ಪ್ರತಿಕ್ರಿಯಿಸಿದರು. <br /> <br /> ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಡೆಸ್ಕ್ಗಳನ್ನು ಅಳವಡಿಸುವಂತೆ ಸಂಬಂಧಿಸಿದ ಕಾಲೇಜುಗಳ ಪ್ರಾಚಾರ್ಯರಿಗೆ ಸೂಚಿಸಲಾಗಿದೆ. ಬೆಂಚ್ ಅಥವಾ ಡೆಸ್ಕ್ ಇಲ್ಲದೆ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಬಾರದು. ಯಾವುದೇ ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತುಕೊಂಡು ಪರೀಕ್ಷೆ ಬರೆಯಬಾರದು ಎಂದು ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.<br /> <br /> ಪರೀಕ್ಷಾ ಕೇಂದ್ರಗಳ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದ್ದು, ಈ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಬಳಿ ಸೂಕ್ತ ಬಂದೂಬಸ್ತ್ ಒದಗಿಸುವಂತೆ ಎಸ್ಪಿ ಅವರನ್ನು ಕೋರಲಾಗಿದೆ ಎಂದರು.<br /> <br /> <strong>ಪರೀಕ್ಷಾ ವೇಳಾ ಪಟ್ಟಿ<br /> </strong><br /> ಇದೇ 15ರಿಂದ 31ರವರೆಗೆ ಪರೀಕ್ಷೆಗಳು ನಡೆಯಲಿವೆ. ಇದೇ 15- ಇತಿಹಾಸ, ಕಂಪ್ಯೂಟರ್ ಸೈನ್ಸ್; 16- ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್; 17- ರಾಜ್ಯಶಾಸ್ತ್ರ, ಮೂಲ ಗಣಿತ; 18- ಭಾನುವಾರ- ರಜಾದಿನ; 19- ಅರ್ಥಶಾಸ್ತ್ರ, ಜಿಯೋಲಜಿ; 20- ಗಣಿತ, ಭೂಗೋಳಶಾಸ್ತ್ರ; 21- ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, 22- ಭೌತಶಾಸ್ತ್ರ, ಮನಃಶಾಸ್ತ್ರ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ತಾನಿ ಸಂಗೀತ; 23- ಶುಕ್ರವಾರ- ಚಂದ್ರಮಾನ ಯುಗಾದಿ- ರಜಾದಿನ ; 24-ಐಚ್ಛಿಕ ಕನ್ನಡ, ಸಂಖ್ಯಾಶಾಸ್ತ್ರ, ಗೃಹ ವಿಜ್ಞಾನ; 25- ಭಾನುವಾರ- ರಜಾದಿನ; 26- ಇಂಗ್ಲಿಷ್; 27- ಲಾಜಿಕ್, ಶಿಕ್ಷಣ; 28- ರಸಾಯನ ವಿಜ್ಞಾನ, ವ್ಯವಹಾರ ಅಧ್ಯಯನ; 29- ಮರಾಠಿ, ಉರ್ದು, ಫ್ರೆಂಚ್, 30- ಕನ್ನಡ, ತಮಿಳು, ಮಲಯಾಳಂ, ಅರೇಬಿಕ್; 31- ಹಿಂದಿ, ತೆಲುಗು, ಸಂಸ್ಕೃತ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ವಿದ್ಯಾರ್ಥಿ ಜೀವನದಲ್ಲಿ ಮಹತ್ವದ ತಿರುವು ಎಂದೇ ಪರಿಗಣಿಸಲಾಗಿರುವ ದ್ವಿತೀಯ ಪಿ.ಯು ಪರೀಕ್ಷೆಯನ್ನು ಜಿಲ್ಲೆಯಲ್ಲಿ ತೆಗೆದುಕೊಂಡಿರುವ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಈ ವರ್ಷ ಗಣನೀಯವಾಗಿ ಕುಸಿದಿದೆ.<br /> <br /> ವೃತ್ತಿ ಶಿಕ್ಷಣ ಕೋರ್ಸ್ಗಳಾದ ಎಂಜಿನಿಯರಿಂಗ್, ವೈದ್ಯಕೀಯ ಪದವಿ ಹಾಗೂ ಇತರ ಸಾಂಪ್ರದಾಯಿಕ ಪದವಿ ಕೋರ್ಸ್ಗಳ ಪ್ರವೇಶಕ್ಕೆ ದ್ವಿತೀಯ ಪಿ.ಯು ಪರೀಕ್ಷೆಯೇ ಮಾನದಂಡ. ಅದರೆ ಜಿಲ್ಲೆಯಲ್ಲಿ ಪದವಿ ಪೂರ್ವ ಶಿಕ್ಷಣಕ್ಕೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವುದು ಬೋಧಕ ವರ್ಗವನ್ನು ಚಿಂತೆಗೀಡು ಮಾಡಿದೆ.<br /> <br /> ಸಾಮಾನ್ಯವಾಗಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಹೋಗುತ್ತಿದ್ದ ದ್ವಿತೀಯ ಪಿ.ಯು ವಿದ್ಯಾರ್ಥಿಗಳ ಸಂಖ್ಯೆ ಈ ಬಾರಿ ಜಿಲ್ಲೆಯಲ್ಲಿ ಕುಸಿತ ಕಂಡಿದೆ. ಅದೂ ಹತ್ತಲ್ಲ, ಇಪ್ಪತ್ತಲ್ಲ... ಬರೋಬ್ಬರಿ 720 ವಿದ್ಯಾರ್ಥಿಗಳು ಕಡಿಮೆಯಾಗಿದ್ದಾರೆ. <br /> <br /> ಇದೇ 15ರಿಂದ ಆರಂಭವಾಗಲಿರುವ ದ್ವಿತೀಯ ಪಿ.ಯು ಪರೀಕ್ಷೆಯನ್ನು ಜಿಲ್ಲೆಯಲ್ಲಿ 9,112 ವಿದ್ಯಾರ್ಥಿಗಳು ತೆಗೆದುಕೊಂಡಿದ್ದಾರೆ. ಆದರೆ ಕಳೆದ ವರ್ಷ ಜಿಲ್ಲೆಯಿಂದ 9, 832 ವಿದ್ಯಾರ್ಥಿಗಳು ದ್ವಿತೀಯ ಪಿ.ಯು ಪರೀಕ್ಷೆ ತೆಗೆದುಕೊಂಡಿದ್ದರು. <br /> <br /> ವಿಜ್ಞಾನ ವಿಭಾಗದಲ್ಲಿಯೇ ಹೆಚ್ಚಿನ ವಿದ್ಯಾರ್ಥಿಗಳ ಕುಸಿತ ಕಂಡು ಬಂದಿದೆ. ಕಳೆದ ವರ್ಷ 1,608 ವಿದ್ಯಾರ್ಥಿಗಳು ವಿಜ್ಞಾನವನ್ನು ಆಯ್ಕೆ ಮಾಡಿಕೊಂಡಿದ್ದರೆ, ಈ ವರ್ಷ 1, 270 ವಿದ್ಯಾರ್ಥಿಗಳು ವಿಜ್ಞಾನವನ್ನು ತೆಗೆದುಕೊಂಡಿದ್ದು, 338 ವಿದ್ಯಾರ್ಥಿಗಳು ಕಡಿಮೆಯಾಗಿದ್ದಾರೆ.<br /> <br /> ಹೊಸಬರಲ್ಲೂ ಇಳಿಮುಖ:ದ್ವಿತೀಯ ಪಿ.ಯು ಪರೀಕ್ಷೆ ತೆಗೆದುಕೊಳ್ಳುತ್ತಿರುವ ಹೊಸ ವಿದ್ಯಾರ್ಥಿಗಳ ಸಂಖ್ಯೆಯೂ ಇಳಿಮುಖವಾಗಿದೆ. ಕಳೆದ ವರ್ಷ 7,432 ಹೊಸ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರೆ ಈ ಬಾರಿ 6,856 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಅಂದರೆ 576 ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ.<br /> <br /> ಬಡತನ, ಪೋಷಕರ ಮತ್ತು ವಿದ್ಯಾರ್ಥಿಗಳಲ್ಲಿನ ನಿರಾಸಕ್ತಿ, ಸೂಕ್ತ ಮಾರ್ಗದರ್ಶನದ ಕೊರತೆ, ಆರ್ಥಿಕ ನೆರವಿನಿಂದ ಕೆಲ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ನಂತರ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇನ್ನೂ ಕೆಲವರು ಎಸ್ಸೆಸ್ಸೆಲ್ಸಿ ನಂತರ ಐಟಿಐ, ಡಿಪ್ಲೊಮಾ, ಕಂಪ್ಯೂಟರ್ ತರಬೇತಿ ಕೋರ್ಸ್ಗಳತ್ತ ಮುಖ ಮಾಡಿದ್ದಾರೆ. <br /> <br /> ಮತ್ತೂ ಕೆಲವರು ಮುಂದಿನ ವ್ಯಾಸಂಗಕ್ಕೆ ಬೆಂಗಳೂರು, ಮಂಡ್ಯ, ಮೈಸೂರಿನತ್ತ ವಲಸೆ ಹೋಗಿದ್ದಾರೆ. ಈ ಕಾರಣಗಳಿಂದ ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಕಡಿಮೆ ವಿದ್ಯಾರ್ಥಿಗಳು ಈ ವರ್ಷ ದ್ವಿತೀಯ ಪಿ.ಯು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಡಿಡಿಪಿಯು ಕಚೇರಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.<br /> <br /> ಪರೀಕ್ಷೆಗೆ ಸಿದ್ಧತೆ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು ಪರೀಕ್ಷೆ ನಡೆಸಲು ಜಿಲ್ಲೆಯಾದ್ಯಂತ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 13 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಎಂ. ಚಲುವಪ್ಪ `ಪ್ರಜಾವಾಣಿ~ಗೆತಿಳಿಸಿದರು.<br /> <br /> ಈ ವರ್ಷ ಒಟ್ಟು 4, 673 ಬಾಲಕರು ಹಾಗೂ 4,439 ಬಾಲಕಿಯರು ಪರೀಕ್ಷೆ ತೆಗೆದುಕೊಂಡಿದ್ದಾರೆ. ಅದರಲ್ಲಿ 1,792 ಪುನರಾವರ್ತಿತ ಮತ್ತು 464 ಖಾಸಗಿ ವಿದ್ಯಾರ್ಥಿಗಳಾಗಿದ್ದು, 6, 856 ಹೊಸ ವಿದ್ಯಾರ್ಥಿಗಳಾಗಿದ್ದಾರೆ ಎಂದು ಅವರು ವಿವರಿಸಿದರು.<br /> <br /> ರಾಮನಗರ ತಾಲ್ಲೂಕಿನಲ್ಲಿ 4 (ಬಿಡದಿಯಲ್ಲಿ 1), ಕನಕಪುರದಲ್ಲಿ 4, ಚನ್ನಪಟ್ಟಣದಲ್ಲಿ 3 ಮತ್ತು ಮಾಗಡಿಯಲ್ಲಿ 2 (ಕುದೂರಿನಲ್ಲಿ 1) ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 13 ಕೇಂದ್ರಗಳಲ್ಲಿ ಚನ್ನಪಟ್ಟಣದ ಸಾರ್ವಜನಿಕ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರವನ್ನು ಸೂಕ್ಷ್ಮ ಕೇಂದ್ರ ಎಂದು ಗುರುತಿಸಿ ಹೆಚ್ಚಿನ ನಿಗಾ ಇಡಲಾಗಿದೆ ಎಂದು ಅವರು ಹೇಳಿದರು.<br /> <br /> <strong>ನಕಲು ತಡೆಗೆ ಕ್ರಮ: </strong>ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ `ಸಿಟ್ಟಿಂಗ್ ಸ್ಕ್ವಾಡ್~ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಜಾಗೃತ ದಳ ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ ಸಿಇಒ, ಡಿಡಿಪಿಯು ನೇತೃತ್ವದಲ್ಲಿ ಜಾಗೃತ ದಳ ಇರುತ್ತದೆ ಎಂದು ಪ್ರತಿಕ್ರಿಯಿಸಿದರು. <br /> <br /> ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಡೆಸ್ಕ್ಗಳನ್ನು ಅಳವಡಿಸುವಂತೆ ಸಂಬಂಧಿಸಿದ ಕಾಲೇಜುಗಳ ಪ್ರಾಚಾರ್ಯರಿಗೆ ಸೂಚಿಸಲಾಗಿದೆ. ಬೆಂಚ್ ಅಥವಾ ಡೆಸ್ಕ್ ಇಲ್ಲದೆ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಬಾರದು. ಯಾವುದೇ ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತುಕೊಂಡು ಪರೀಕ್ಷೆ ಬರೆಯಬಾರದು ಎಂದು ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.<br /> <br /> ಪರೀಕ್ಷಾ ಕೇಂದ್ರಗಳ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದ್ದು, ಈ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಬಳಿ ಸೂಕ್ತ ಬಂದೂಬಸ್ತ್ ಒದಗಿಸುವಂತೆ ಎಸ್ಪಿ ಅವರನ್ನು ಕೋರಲಾಗಿದೆ ಎಂದರು.<br /> <br /> <strong>ಪರೀಕ್ಷಾ ವೇಳಾ ಪಟ್ಟಿ<br /> </strong><br /> ಇದೇ 15ರಿಂದ 31ರವರೆಗೆ ಪರೀಕ್ಷೆಗಳು ನಡೆಯಲಿವೆ. ಇದೇ 15- ಇತಿಹಾಸ, ಕಂಪ್ಯೂಟರ್ ಸೈನ್ಸ್; 16- ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್; 17- ರಾಜ್ಯಶಾಸ್ತ್ರ, ಮೂಲ ಗಣಿತ; 18- ಭಾನುವಾರ- ರಜಾದಿನ; 19- ಅರ್ಥಶಾಸ್ತ್ರ, ಜಿಯೋಲಜಿ; 20- ಗಣಿತ, ಭೂಗೋಳಶಾಸ್ತ್ರ; 21- ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, 22- ಭೌತಶಾಸ್ತ್ರ, ಮನಃಶಾಸ್ತ್ರ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ತಾನಿ ಸಂಗೀತ; 23- ಶುಕ್ರವಾರ- ಚಂದ್ರಮಾನ ಯುಗಾದಿ- ರಜಾದಿನ ; 24-ಐಚ್ಛಿಕ ಕನ್ನಡ, ಸಂಖ್ಯಾಶಾಸ್ತ್ರ, ಗೃಹ ವಿಜ್ಞಾನ; 25- ಭಾನುವಾರ- ರಜಾದಿನ; 26- ಇಂಗ್ಲಿಷ್; 27- ಲಾಜಿಕ್, ಶಿಕ್ಷಣ; 28- ರಸಾಯನ ವಿಜ್ಞಾನ, ವ್ಯವಹಾರ ಅಧ್ಯಯನ; 29- ಮರಾಠಿ, ಉರ್ದು, ಫ್ರೆಂಚ್, 30- ಕನ್ನಡ, ತಮಿಳು, ಮಲಯಾಳಂ, ಅರೇಬಿಕ್; 31- ಹಿಂದಿ, ತೆಲುಗು, ಸಂಸ್ಕೃತ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>