<p><strong>ಬೆಂಗಳೂರು:</strong> ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಗುರುವಾರ ಆರಂಭವಾಗಿದ್ದು, ಮೊದಲ ದಿನ ನಡೆದ ರಸಾಯನಶಾಸ್ತ್ರ ಮತ್ತು ಬಿಸಿನೆಸ್ ಸ್ಟಡೀಸ್ ಪರೀಕ್ಷೆಯಲ್ಲಿ ಅವ್ಯವಹಾರ ಎಸಗಿದ ಹತ್ತು ಮಂದಿ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.<br /> <br /> ಬಾಗಲಕೋಟೆ, ಗುಲ್ಬರ್ಗದಲ್ಲಿ ತಲಾ ಇಬ್ಬರು, ಬೆಂಗಳೂರು ಉತ್ತರ, ಬೆಳಗಾವಿ, ಗದಗ, ಕೋಲಾರ, ತುಮಕೂರು, ರಾಯಚೂರು ಜಿಲ್ಲೆಯಲ್ಲಿ ತಲಾ ಒಬ್ಬರನ್ನು ಡಿಬಾರ್ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.<br /> <br /> <strong>ಕಪ್ಪುಪಟ್ಟಿ:</strong> ವೇತನ ತಾರತಮ್ಯ ಹೋಗಲಾಡಿಸುವಂತೆ ಆಗ್ರಹಿಸಿ ಪರೀಕ್ಷಾ ಕಾರ್ಯದಲ್ಲಿ ತೊಡಗಿದ್ದ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಮತ್ತು ಇತರ ಸಿಬ್ಬಂದಿ ಕಪ್ಪುಪಟ್ಟಿ ಧರಿಸಿದ್ದರು. ಹಾಜರಾತಿ ಕೊರತೆಯಿಂದಾಗಿ ಪ್ರವೇಶ ಪತ್ರ ಸಿಗದ ಕೆಲ ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿ ಮುಂದೆ ಧರಣಿ ನಡೆಸಿದರು. ಈ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷಾ ವೇಳೆ ಪರ್ಯಾಯ ವ್ಯವಸ್ಥೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಗುರುವಾರ ಆರಂಭವಾಗಿದ್ದು, ಮೊದಲ ದಿನ ನಡೆದ ರಸಾಯನಶಾಸ್ತ್ರ ಮತ್ತು ಬಿಸಿನೆಸ್ ಸ್ಟಡೀಸ್ ಪರೀಕ್ಷೆಯಲ್ಲಿ ಅವ್ಯವಹಾರ ಎಸಗಿದ ಹತ್ತು ಮಂದಿ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.<br /> <br /> ಬಾಗಲಕೋಟೆ, ಗುಲ್ಬರ್ಗದಲ್ಲಿ ತಲಾ ಇಬ್ಬರು, ಬೆಂಗಳೂರು ಉತ್ತರ, ಬೆಳಗಾವಿ, ಗದಗ, ಕೋಲಾರ, ತುಮಕೂರು, ರಾಯಚೂರು ಜಿಲ್ಲೆಯಲ್ಲಿ ತಲಾ ಒಬ್ಬರನ್ನು ಡಿಬಾರ್ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.<br /> <br /> <strong>ಕಪ್ಪುಪಟ್ಟಿ:</strong> ವೇತನ ತಾರತಮ್ಯ ಹೋಗಲಾಡಿಸುವಂತೆ ಆಗ್ರಹಿಸಿ ಪರೀಕ್ಷಾ ಕಾರ್ಯದಲ್ಲಿ ತೊಡಗಿದ್ದ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಮತ್ತು ಇತರ ಸಿಬ್ಬಂದಿ ಕಪ್ಪುಪಟ್ಟಿ ಧರಿಸಿದ್ದರು. ಹಾಜರಾತಿ ಕೊರತೆಯಿಂದಾಗಿ ಪ್ರವೇಶ ಪತ್ರ ಸಿಗದ ಕೆಲ ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿ ಮುಂದೆ ಧರಣಿ ನಡೆಸಿದರು. ಈ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷಾ ವೇಳೆ ಪರ್ಯಾಯ ವ್ಯವಸ್ಥೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>