<p><strong>ಬೆಂಗಳೂರು (ಪಿಟಿಐ):</strong> ಶುಕ್ರವಾರ ಮಾಧ್ಯಮದವರನ್ನು ಮನಬಂದಂತೆ ಥಳಿಸಿದ ಪುಂಡ ವಕೀಲರ ವಿರುದ್ಧ ನಡೆಸಲುದ್ದೇಶಿಸಿರುವ ನ್ಯಾಯಾಂಗ ತನಿಖೆಗೆ ಪತ್ರಕರ್ತ ಸಮೂಹ ಶನಿವಾರ ಭಾರಿ ವಿರೋಧ ವ್ಯಕ್ತಪಡಿಸಿದೆ.<br /> <br /> ಶನಿವಾರ ಬೆಳಿಗ್ಗೆ ಮುಖ್ಯಮಂತ್ರಿ ಸದಾನಂದಗೌಡ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಮಾಧ್ಯಮದ ಪ್ರಮುಖರು ನ್ಯಾಯಾಂಗ ತನಿಖೆಯು ಬರೇ ಕಣ್ಣೊರೆಸುವ ತಂತ್ರವಾಗಿದೆ ಎಂದು ಹೇಳಿದರು. <br /> <br /> ಎಲ್ಲವೂ ಕ್ಯಾಮೆರಾದಲ್ಲಿ ದಾಖಲಾಗಿದೆ. ಕಣ್ಣೆದುರೇ ಸಾಕ್ಷಿಗಳಿವೆ. ಇಂತಹ ಸಮಯದಲ್ಲಿ ಹಲ್ಲೆ ನಡೆಸಿದ ಪುಂಡ ವಕೀಲರನ್ನು ತಕ್ಷಣವೇ ಬಂಧಿಸುವುದನ್ನು ಬಿಟ್ಟು ನ್ಯಾಯಾಂಗ ತನಿಖೆ ಎಂದು ಕಾಲಹರಣ ಮಾಡುತ್ತಿರುವುದು ಸರ್ಕಾರವು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವುದನ್ನು ತೋರಿಸುತ್ತದೆ ಎಂದು ಅವರು ಆಪಾದಿಸಿದರು.<br /> <br /> ತಕ್ಷಣವೇ ಹಲ್ಲೆ ನಡೆಸಿದ ಪುಂಡ ವಕೀಲರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಬಂಧಿಸಲು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಮಾಧ್ಯಮ ಪ್ರತಿನಿಧಿಗಳು ಆಗ್ರಹಿಸಿದರು.<br /> <br /> ಈ ಮಧ್ಯೆ ಬೆಂಗಳೂರು ವರದಿಗಾರರ ಕೂಟ ಹಾಗೂ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳು ಬೆಂಗಳೂರಿನಲ್ಲಿ ಮೆರವಣಿಗೆ ನಡೆಸಿ ರಾಜ್ಯಪಾಲರನ್ನು ಭೇಟಿ ಮಾಡಿ ತಕ್ಷಣವೇ ಪುಂಡ ವಕೀಲರನ್ನು ಬಂಧಿಸಬೇಕೆಂದು ಆಗ್ರಹಿಸಿದವು..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು (ಪಿಟಿಐ):</strong> ಶುಕ್ರವಾರ ಮಾಧ್ಯಮದವರನ್ನು ಮನಬಂದಂತೆ ಥಳಿಸಿದ ಪುಂಡ ವಕೀಲರ ವಿರುದ್ಧ ನಡೆಸಲುದ್ದೇಶಿಸಿರುವ ನ್ಯಾಯಾಂಗ ತನಿಖೆಗೆ ಪತ್ರಕರ್ತ ಸಮೂಹ ಶನಿವಾರ ಭಾರಿ ವಿರೋಧ ವ್ಯಕ್ತಪಡಿಸಿದೆ.<br /> <br /> ಶನಿವಾರ ಬೆಳಿಗ್ಗೆ ಮುಖ್ಯಮಂತ್ರಿ ಸದಾನಂದಗೌಡ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಮಾಧ್ಯಮದ ಪ್ರಮುಖರು ನ್ಯಾಯಾಂಗ ತನಿಖೆಯು ಬರೇ ಕಣ್ಣೊರೆಸುವ ತಂತ್ರವಾಗಿದೆ ಎಂದು ಹೇಳಿದರು. <br /> <br /> ಎಲ್ಲವೂ ಕ್ಯಾಮೆರಾದಲ್ಲಿ ದಾಖಲಾಗಿದೆ. ಕಣ್ಣೆದುರೇ ಸಾಕ್ಷಿಗಳಿವೆ. ಇಂತಹ ಸಮಯದಲ್ಲಿ ಹಲ್ಲೆ ನಡೆಸಿದ ಪುಂಡ ವಕೀಲರನ್ನು ತಕ್ಷಣವೇ ಬಂಧಿಸುವುದನ್ನು ಬಿಟ್ಟು ನ್ಯಾಯಾಂಗ ತನಿಖೆ ಎಂದು ಕಾಲಹರಣ ಮಾಡುತ್ತಿರುವುದು ಸರ್ಕಾರವು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವುದನ್ನು ತೋರಿಸುತ್ತದೆ ಎಂದು ಅವರು ಆಪಾದಿಸಿದರು.<br /> <br /> ತಕ್ಷಣವೇ ಹಲ್ಲೆ ನಡೆಸಿದ ಪುಂಡ ವಕೀಲರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಬಂಧಿಸಲು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಮಾಧ್ಯಮ ಪ್ರತಿನಿಧಿಗಳು ಆಗ್ರಹಿಸಿದರು.<br /> <br /> ಈ ಮಧ್ಯೆ ಬೆಂಗಳೂರು ವರದಿಗಾರರ ಕೂಟ ಹಾಗೂ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳು ಬೆಂಗಳೂರಿನಲ್ಲಿ ಮೆರವಣಿಗೆ ನಡೆಸಿ ರಾಜ್ಯಪಾಲರನ್ನು ಭೇಟಿ ಮಾಡಿ ತಕ್ಷಣವೇ ಪುಂಡ ವಕೀಲರನ್ನು ಬಂಧಿಸಬೇಕೆಂದು ಆಗ್ರಹಿಸಿದವು..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>