<p>ಹುಬ್ಬಳ್ಳಿ: ಪುಟ್ಟರಾಜ ಗವಾಯಿಗಳು ಹುಟ್ಟದಿದ್ದರೆ ಅಂಧ ಕಲಾವಿದರಿಗೆ ಗೌರವದ ಬದುಕು ಸಿಗುತ್ತಿರಲಿಲ್ಲ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ರಘುವೀರಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ಇಲ್ಲಿನ ಡಾ.ಗುರುಪುಟ್ಟರಾಜ ಗವಾಯಿಗಳ ಸಂಗೀತ ವಿದ್ಯಾಲಯದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಬೇಸಿಗೆ ಸಂಗೀತ ಶಿಬಿರದ ಸಮಾರೋಪ ಸಮಾರಂಭ ಹಾಗೂ ಸಂಗೀತ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.<br /> ಮಕ್ಕಳಿಗೆ ತಂದೆ-ತಾಯಿಗಳು ಪ್ರೋತ್ಸಾಹ ನೀಡಿ ಸಂಗೀತ ಕಲೆ ಉಳಿಸಿ ಬೆಳೆಸಬೇಕು ಎಂದು ಸಲಹೆ ನೀಡಿದರು.<br /> <br /> ಅತಿಥಿಯಾಗಿದ್ದ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮಾತನಾಡಿ, ಭಾರತೀಯ ಸಂಗೀತ ಹಾಗೂ ಕಲೆಯಲ್ಲಿ ದೇಸಿ ಸಂಸ್ಕೃತಿ ಅಡಗಿದೆ. ಪಾಶ್ಚಿಮಾತ್ಯ ಸಂಗೀತ ಮತ್ತು ಸಂಸ್ಕೃತಿಗೆ ಮೊರೆ ಹೋಗುತ್ತಿರುವ ನಮ್ಮ ಮಕ್ಕಳಿಗೆ ದೇಸಿ ಸಂಸ್ಕೃತಿ ಬಗ್ಗೆ ತಿಳಿಸಿಕೊಡಲು ಹೆಚ್ಚಿನ ಒತ್ತು ನೀಡುವಂತೆ ತಿಳಿಸಿದರು.<br /> <br /> ಪುಟ್ಟರಾಜ ಗವಾಯಿ ಅವರ ಪೂರ್ಣ ಬದುಕು-ಬರಹ ಹಾಗೂ ಜೀವನದ ಬಗ್ಗೆ ಅತಿಥಿಯಾಗಿದ್ದ ಪ್ರೊ.ಕೆ.ಎಸ್. ಕೌಜಲಗಿ ಮಾತನಾಡಿದರು.<br /> ಸಂಗೀತ ವಿದ್ಯಾಲಯದ ಪ್ರಾಚಾರ್ಯ ಸಂಗಮೇಶ್ವರ ಸ್ವಾದಿಮಠ ಮಾತನಾಡಿ, ಪುಟ್ಟರಾಜ ಗುರುಗಳ ಮಾರ್ಗದರ್ಶನದಿಂದಾಗಿ ಸಂಗೀತ ಕ್ಷೇತ್ರದಲ್ಲಿ ಮುಂದುವರೆಯುತ್ತಿರುವೆ. ಸಂಗೀತ ಕಲಿಸುವವರು ಇಂದು ಬಹಳ ವಿರಳವಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಸಂಗೀತ ಕ್ಷೇತ್ರದತ್ತ ಒಲವು ತೋರಬೇಕು ಎಂದು ಹೇಳಿದರು.<br /> <br /> ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಬಿ.ಗಂಗಲ್, ಬಸವರಾಜ ದೇಸಾಯಿ, ಶ್ರೀನಿವಾಸ ಶಾಸ್ತ್ರಿ ಮಾತನಾಡಿದರು. ನಿವೃತ್ತ ಕಮಾಂಡರ್ ಸಿ.ಎಸ್.ಹವಾಲ್ದಾರ್ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ನಂತರ ಶಿವಮೊಗ್ಗದ ವೇಣುಗೋಪಾಲ ಹಾಗೂ ಸಂಗಮೇಶ್ವರ ಸ್ವಾದಿಮಠ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಸಂಗೀತ ವಿದ್ಯಾಲಯದ ಮಕ್ಕಳ ಗಾಯನ ಕಾರ್ಯಕ್ರಮ ಮನಸೂರೆಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಪುಟ್ಟರಾಜ ಗವಾಯಿಗಳು ಹುಟ್ಟದಿದ್ದರೆ ಅಂಧ ಕಲಾವಿದರಿಗೆ ಗೌರವದ ಬದುಕು ಸಿಗುತ್ತಿರಲಿಲ್ಲ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ರಘುವೀರಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ಇಲ್ಲಿನ ಡಾ.ಗುರುಪುಟ್ಟರಾಜ ಗವಾಯಿಗಳ ಸಂಗೀತ ವಿದ್ಯಾಲಯದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಬೇಸಿಗೆ ಸಂಗೀತ ಶಿಬಿರದ ಸಮಾರೋಪ ಸಮಾರಂಭ ಹಾಗೂ ಸಂಗೀತ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.<br /> ಮಕ್ಕಳಿಗೆ ತಂದೆ-ತಾಯಿಗಳು ಪ್ರೋತ್ಸಾಹ ನೀಡಿ ಸಂಗೀತ ಕಲೆ ಉಳಿಸಿ ಬೆಳೆಸಬೇಕು ಎಂದು ಸಲಹೆ ನೀಡಿದರು.<br /> <br /> ಅತಿಥಿಯಾಗಿದ್ದ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮಾತನಾಡಿ, ಭಾರತೀಯ ಸಂಗೀತ ಹಾಗೂ ಕಲೆಯಲ್ಲಿ ದೇಸಿ ಸಂಸ್ಕೃತಿ ಅಡಗಿದೆ. ಪಾಶ್ಚಿಮಾತ್ಯ ಸಂಗೀತ ಮತ್ತು ಸಂಸ್ಕೃತಿಗೆ ಮೊರೆ ಹೋಗುತ್ತಿರುವ ನಮ್ಮ ಮಕ್ಕಳಿಗೆ ದೇಸಿ ಸಂಸ್ಕೃತಿ ಬಗ್ಗೆ ತಿಳಿಸಿಕೊಡಲು ಹೆಚ್ಚಿನ ಒತ್ತು ನೀಡುವಂತೆ ತಿಳಿಸಿದರು.<br /> <br /> ಪುಟ್ಟರಾಜ ಗವಾಯಿ ಅವರ ಪೂರ್ಣ ಬದುಕು-ಬರಹ ಹಾಗೂ ಜೀವನದ ಬಗ್ಗೆ ಅತಿಥಿಯಾಗಿದ್ದ ಪ್ರೊ.ಕೆ.ಎಸ್. ಕೌಜಲಗಿ ಮಾತನಾಡಿದರು.<br /> ಸಂಗೀತ ವಿದ್ಯಾಲಯದ ಪ್ರಾಚಾರ್ಯ ಸಂಗಮೇಶ್ವರ ಸ್ವಾದಿಮಠ ಮಾತನಾಡಿ, ಪುಟ್ಟರಾಜ ಗುರುಗಳ ಮಾರ್ಗದರ್ಶನದಿಂದಾಗಿ ಸಂಗೀತ ಕ್ಷೇತ್ರದಲ್ಲಿ ಮುಂದುವರೆಯುತ್ತಿರುವೆ. ಸಂಗೀತ ಕಲಿಸುವವರು ಇಂದು ಬಹಳ ವಿರಳವಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಸಂಗೀತ ಕ್ಷೇತ್ರದತ್ತ ಒಲವು ತೋರಬೇಕು ಎಂದು ಹೇಳಿದರು.<br /> <br /> ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಬಿ.ಗಂಗಲ್, ಬಸವರಾಜ ದೇಸಾಯಿ, ಶ್ರೀನಿವಾಸ ಶಾಸ್ತ್ರಿ ಮಾತನಾಡಿದರು. ನಿವೃತ್ತ ಕಮಾಂಡರ್ ಸಿ.ಎಸ್.ಹವಾಲ್ದಾರ್ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ನಂತರ ಶಿವಮೊಗ್ಗದ ವೇಣುಗೋಪಾಲ ಹಾಗೂ ಸಂಗಮೇಶ್ವರ ಸ್ವಾದಿಮಠ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಸಂಗೀತ ವಿದ್ಯಾಲಯದ ಮಕ್ಕಳ ಗಾಯನ ಕಾರ್ಯಕ್ರಮ ಮನಸೂರೆಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>